22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ (ಸಅ) ಅವಹೇಳನ ಪೋಸ್ಟ್ ಪ್ರಕರಣ; ಚೇತನ್ ಹೊದ್ದೆಟ್ಟಿ ವಿರುದ್ಧ ಅಕ್ಬರ್ ಬೆಳ್ತಂಗಡಿಯಿಂದ ದೂರು ದಾಖಲು

ಬೆಳ್ತಂಗಡಿ: ಯ್ಯೂಟೂಬ್ ಚಾನಲ್ ನಲ್ಲಿ ಪ್ರಸಾರವಾದ “ಬೆಳ್ತಂಗಡಿ ಬಂಗ್ಲೆಗುಡ್ಡ ಕಾಡಿನಲ್ಲಿ ಮುಂದುವರಿದ ಎಸ್ ಐ ಟಿ ಶೋಧ ಮತ್ತೆರಡು ತಲೆ ಬುರುಡೆ ಪತ್ತೆ” ಎಂಬ ಟೈಟಲ್ ನೊಂದಿಗೆ ಬಂದ ವರದಿಯ ಕಮೆಂಟ್ ಬಾಕ್ಸ್ ನಲ್ಲಿ “ಸನಾತನಿ ಸಿಂಹ” ಎಂಬ ಖಾತೆಯಿಂದ ‘ಒಂದು ಪೈಗಂಬರದು ಇನ್ನೊಂದು ಆಯೇಷಾ ದು’ ಎಂದು ರಿಪ್ಲಯ್ ಮಾಡಿದ್ದು ಹಾಗೂ ಅದೇ ಕಮೆಂಟ್ ಬಾಕ್ಸ್ ನಲ್ಲಿ Chetan Hoddetty ಎಂಬಾತ ‘ಒಂದು ಪೈಗಂಬರ್ ಇನ್ನೊಂದು ಆಯೇಷಾದು ಇರಬಹುದು’ ಎಂದು ಕಮೆಂಟ್ ಹಾಕಿ ಧಾರ್ಮಿಕ ನಿಂದನೆ, ಅಶಾಂತಿ ಸೃಷ್ಟಿ, ಧಾರ್ಮಿಕ ಭಾವನೆ ಕೆರಳಿಸಿ ಕೋಮು ಗಲಭೆ ಮಾಡುವ ಷಡ್ಯಂತ್ರ ಮತ್ತು ಪಿತೂರಿ ನಡೆಸಿದ್ದಾರೆ ಎಂದು ಆರೋಪಿಸಿ ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಅವರು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕೃತ್ಯವನ್ನು ನಡೆಸಿದ ಹಾಗೂ ಇದಕ್ಕೆ ಕುಮ್ಮಕ್ಕು ನೀಡಿದವರನ್ನು ಈ ಕೂಡಲೇ ಬಂಧಿಸಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಆಗ್ರಹಿಸಿದ್ದಾರೆ. ದೂರು ನೀಡುವ ಸಂದರ್ಭದಲ್ಲಿ ಬೆಳ್ತಂಗಡಿ ವಿಧಾನಸಭಾ ಸಮಿತಿ ಸದಸ್ಯ ಅಶ್ರಫ್ ಕಟ್ಟೆ, ಸಲೀಂ ಸುನ್ನತ್ ಕೆರೆ, ಇಮ್ತಿಯಾಝ್ ಜಿ.ಕೆ, ಆರಿಫ್ ಕುಂಟಿನಿ ಉಪಸ್ಥಿತರಿದ್ದರು.

Related posts

ಸುಲ್ಕೇರಿ: ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ, ಶ್ರೀರಾಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಶ್ರೀ ರಾಮಕ್ಷೇತ್ರ ಕನ್ಯಾಡಿಯಲ್ಲಿ ರಾಮ ನಾಮ ತಾರಕ ಮಂತ್ರ ಪಠಣ

Suddi Udaya

ಅಂತಾರಾಷ್ಟ್ರೀಯ ಸೀನಿಯರ್ ಛೇಂಬರ್‍ ನ ರಾಷ್ಟ್ರೀಯ ಸಹ ನಿರ್ದೇಶಕರಾಗಿ ಪ್ರಮೋದ್ ಆರ್ ನಾಯಕ್ ಆಯ್ಕೆ

Suddi Udaya

ಜೆಸಿಐ ಭಾರತದ ವಲಯ 15ರ ಉಪಾಧ್ಯಕ್ಷರಾಗಿ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ಆಯ್ಕೆ

Suddi Udaya

ನ.7: ಅಡಿಕೆ ಬೆಳೆ ಮತ್ತು ಕಾಳು ಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ಕೃಷಿಕರಿಗೆ ತರಬೇತಿ ಕಾರ್ಯಕ್ರಮ

Suddi Udaya

ಬಾರ್ಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ರಾಜೇಶ್ ರೈ ಆಯ್ಕೆ

Suddi Udaya
error: Content is protected !!