July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ ಸ.ಪ್ರೌ. ಶಾಲೆ ಹಾಗೂ ಗ್ರಾಮ ಪಂಚಾಯತ್ ನ ಅರಿವು ಕೇಂದ್ರ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ

ಅರಸಿನಮಕ್ಕಿ : ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ದಾಪುಗಾಲು ಇಡುತ್ತಿದ್ದು ಈ ಕಾಲಘಟ್ಟದಲ್ಲಿ ಮುಖ್ಯವಾಗಿ ವಿದ್ಯಾರ್ಥಿಗಳು ಮತ್ತು ಯುವ ಸಮೂಹ ದುಶ್ಚಟಗಳಿಗೆ ಬಲಿಯಾಗದೆ ಪಂಚೇಂದ್ರಿಯಗಳು ಮತ್ತು ಮನಸ್ಸನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬೇಕು ಎಂದು ಅರಸಿನಮಕ್ಕಿಯ ಅರಿವು ಕೇಂದ್ರದ ಗೌರವ ಸದಸ್ಯ ವೃಷಾಂಕ್ ಖಾಡಿಲ್ಕರ್ ಹೇಳಿದ್ದಾರೆ.

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆ ಹಾಗೂ ಗ್ರಾಮ ಪಂಚಾಯತ್ ನ ಅರಿವು ಕೇಂದ್ರ ಸಹಯೋಗದಲ್ಲಿ ಸೆ. 19ರಂದು ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ’ವ್ಯಸನಮುಕ್ತ ಭಾರತ’ ಕುರಿತು ಉಪನ್ಯಾಸ ನೀಡಿದರು.


2047ಕ್ಕೆ ಭಾರತ ಸರ್ವಕ್ಷೇತ್ರದಲ್ಲೂ ವಿಶ್ವದ ನಂ.1 ರಾಷ್ಟ್ರ ವಾಗಿ ಪರಿವರ್ತನೆಯಾಗಬೇಕೆಂಬ ಗುರಿ ಇದ್ದು ಯುವ ಸಮೂಹ ತಂಬಾಕು ಉತ್ಪನ್ನಗಳು, ಮದ್ಯ, ಡ್ರಗ್ಸ್ ಮೊದಲಾದ ಚಟಗಳಿಗೆ ದಾಸರಾಗಬಾರದು. ವ್ಯಸನಗಳಿಗೆ ಅಂಟಿದರೆ ಮನೆ ಮಂದಿ, ಸಮಾಜ ಹೀಗೇ ಎಲ್ಲರೂ ತಾತ್ಸಾರದಿಂದ ನೋಡಿ ತಿರಸ್ಕರಿಸುತ್ತಾರೆ, ಪ್ರತಿಭೆಗಳು ಕಮರುತ್ತವೆ. ವಿದ್ಯಾರ್ಥಿ ಜೀವನವನ್ನು ಅಮಲುಪದಾರ್ಥ ಮುಕ್ತವಾಗಿಸಿಕೊಂಡರೆ ಮುಂದೆ ಜೀವನ ತುಂಬಾ ಸುಲಭ ಎಂದರು.


ಹದಿಹರೆಯದ ಸಮಸ್ಯೆಗಳ ಕುರಿತು ಮಹಿಳಾ ಲೇಖಕಿ ರೇಣುಕಾ ಸುಧೀರ್ ಮಾತನಾಡಿ, ಹದಿಹರೆಯದಲ್ಲಿ ದೈಹಿಕ, ಮಾನಸಿಕ ಬೆಳವಣಿಗೆಗಳ ಜೊತೆಗೆ ಆತ್ಮವಿಶ್ವಾಸ, ಸ್ನೇಹ, ಆಕರ್ಷಣೆ, ಅತಿ ಆತ್ಮವಿಶ್ವಾಸ, ಖಿನ್ನತೆ, ಕೀಳರಿಮೆ ಹೀಗೆ ಧನಾತ್ಮಕ ಮತ್ತು ಋಣಾತ್ಮಕ ಚಿಂತನೆಗಳೂ ಬೆಳೆಯುತ್ತವೆ. ಅವುಗಳಲ್ಲಿ ನಮ್ಮ ವ್ಯಕ್ತಿತ್ವ ಬೆಳವಣಿಗೆಗೆ ಪೂರಕವಾದುವುಗಳನ್ನು ಮಾತ್ರ ಮಕ್ಕಳು ಸ್ವೀಕರಿಸಬೇಕು. ಶಿಕ್ಷಕರು, ಹಿರಿಯರ ಮಾತು, ಸಲಹೆಗಳನ್ನು ಅಳವಡಿಸಿಕೊಳ್ಳಬೇಕು ಎಂದರು.


ಶಾಲಾ ಮುಖ್ಯಅಧ್ಯಾಪಕರಾದ ಮಂಜುಳಾರವರು ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ಮಾತನಾಡಿದರು.
ಧನಿಕ್ಷಾ ಪ್ರಾರ್ಥಿಸಿ, ಇಂಗ್ಲಿಷ್ ಶಿಕ್ಷಕಿ ಚೇತನಾ ಕುಮಾರಿ ವಂದಿಸಿದರು. ವಿಜ್ಞಾನ ಶಿಕ್ಷಕಿ ಚೇತನಾ ಬಿ.ಎಂ. ಕಾರ್ಯಕ್ರಮ ನಿರೂಪಿಸಿದರು.

Related posts

ಮುಂಡಾಜೆ ಪ್ರೌಢಶಾಲೆಯಲ್ಲಿ ಔಷಧೀಯ ಸಸ್ಯಗಳನ್ನು ನೆಡುವ ಕಾರ್ಯಕ್ರಮ

Suddi Udaya

ಹೊಸಪಟ್ಣ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಡಿ.10: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಯುವ ಕಾಂಗ್ರೆಸ್ ದಕ ಜಿಲ್ಲಾ ಸಮಿತಿಯಿಂದ ಮತಗಳ್ಳತನ ವಿರುದ್ದ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ಮಂಗಳೂರಿನಲ್ಲಿ ಬ್ರಹತ್ ಪಂಜಿನ ಮೆರವಣಿಗೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಉದ್ಯಮಿ ಶ್ರೀ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ: ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಹರ್ಷೇಂದ್ರ ಕುಮಾರ್ ಧರ್ಮಸ್ಥಳ ಭೇಟಿ,

Suddi Udaya
error: Content is protected !!