23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ ಸ.ಪ್ರೌ. ಶಾಲೆ ಹಾಗೂ ಗ್ರಾಮ ಪಂಚಾಯತ್ ನ ಅರಿವು ಕೇಂದ್ರ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ

ಅರಸಿನಮಕ್ಕಿ : ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ದಾಪುಗಾಲು ಇಡುತ್ತಿದ್ದು ಈ ಕಾಲಘಟ್ಟದಲ್ಲಿ ಮುಖ್ಯವಾಗಿ ವಿದ್ಯಾರ್ಥಿಗಳು ಮತ್ತು ಯುವ ಸಮೂಹ ದುಶ್ಚಟಗಳಿಗೆ ಬಲಿಯಾಗದೆ ಪಂಚೇಂದ್ರಿಯಗಳು ಮತ್ತು ಮನಸ್ಸನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬೇಕು ಎಂದು ಅರಸಿನಮಕ್ಕಿಯ ಅರಿವು ಕೇಂದ್ರದ ಗೌರವ ಸದಸ್ಯ ವೃಷಾಂಕ್ ಖಾಡಿಲ್ಕರ್ ಹೇಳಿದ್ದಾರೆ.

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆ ಹಾಗೂ ಗ್ರಾಮ ಪಂಚಾಯತ್ ನ ಅರಿವು ಕೇಂದ್ರ ಸಹಯೋಗದಲ್ಲಿ ಸೆ. 19ರಂದು ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ’ವ್ಯಸನಮುಕ್ತ ಭಾರತ’ ಕುರಿತು ಉಪನ್ಯಾಸ ನೀಡಿದರು.


2047ಕ್ಕೆ ಭಾರತ ಸರ್ವಕ್ಷೇತ್ರದಲ್ಲೂ ವಿಶ್ವದ ನಂ.1 ರಾಷ್ಟ್ರ ವಾಗಿ ಪರಿವರ್ತನೆಯಾಗಬೇಕೆಂಬ ಗುರಿ ಇದ್ದು ಯುವ ಸಮೂಹ ತಂಬಾಕು ಉತ್ಪನ್ನಗಳು, ಮದ್ಯ, ಡ್ರಗ್ಸ್ ಮೊದಲಾದ ಚಟಗಳಿಗೆ ದಾಸರಾಗಬಾರದು. ವ್ಯಸನಗಳಿಗೆ ಅಂಟಿದರೆ ಮನೆ ಮಂದಿ, ಸಮಾಜ ಹೀಗೇ ಎಲ್ಲರೂ ತಾತ್ಸಾರದಿಂದ ನೋಡಿ ತಿರಸ್ಕರಿಸುತ್ತಾರೆ, ಪ್ರತಿಭೆಗಳು ಕಮರುತ್ತವೆ. ವಿದ್ಯಾರ್ಥಿ ಜೀವನವನ್ನು ಅಮಲುಪದಾರ್ಥ ಮುಕ್ತವಾಗಿಸಿಕೊಂಡರೆ ಮುಂದೆ ಜೀವನ ತುಂಬಾ ಸುಲಭ ಎಂದರು.


ಹದಿಹರೆಯದ ಸಮಸ್ಯೆಗಳ ಕುರಿತು ಮಹಿಳಾ ಲೇಖಕಿ ರೇಣುಕಾ ಸುಧೀರ್ ಮಾತನಾಡಿ, ಹದಿಹರೆಯದಲ್ಲಿ ದೈಹಿಕ, ಮಾನಸಿಕ ಬೆಳವಣಿಗೆಗಳ ಜೊತೆಗೆ ಆತ್ಮವಿಶ್ವಾಸ, ಸ್ನೇಹ, ಆಕರ್ಷಣೆ, ಅತಿ ಆತ್ಮವಿಶ್ವಾಸ, ಖಿನ್ನತೆ, ಕೀಳರಿಮೆ ಹೀಗೆ ಧನಾತ್ಮಕ ಮತ್ತು ಋಣಾತ್ಮಕ ಚಿಂತನೆಗಳೂ ಬೆಳೆಯುತ್ತವೆ. ಅವುಗಳಲ್ಲಿ ನಮ್ಮ ವ್ಯಕ್ತಿತ್ವ ಬೆಳವಣಿಗೆಗೆ ಪೂರಕವಾದುವುಗಳನ್ನು ಮಾತ್ರ ಮಕ್ಕಳು ಸ್ವೀಕರಿಸಬೇಕು. ಶಿಕ್ಷಕರು, ಹಿರಿಯರ ಮಾತು, ಸಲಹೆಗಳನ್ನು ಅಳವಡಿಸಿಕೊಳ್ಳಬೇಕು ಎಂದರು.


ಶಾಲಾ ಮುಖ್ಯಅಧ್ಯಾಪಕರಾದ ಮಂಜುಳಾರವರು ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ಮಾತನಾಡಿದರು.
ಧನಿಕ್ಷಾ ಪ್ರಾರ್ಥಿಸಿ, ಇಂಗ್ಲಿಷ್ ಶಿಕ್ಷಕಿ ಚೇತನಾ ಕುಮಾರಿ ವಂದಿಸಿದರು. ವಿಜ್ಞಾನ ಶಿಕ್ಷಕಿ ಚೇತನಾ ಬಿ.ಎಂ. ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಉದ್ಯೋಗಾವಕಾಶಗಳ ಕಾರ್ಯಾಗಾರ

Suddi Udaya

ಫೆ 27- ಮಾ 2, ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿ ಜೀರ್ಣೋದ್ಧಾರ ಹಾಗೂ ಪುನರ್ ಪ್ರತಿಷ್ಠಾ ಮಹೋತ್ಸವ

Suddi Udaya

ಧರ್ಮಸ್ಥಳ ಜೋಡುಸ್ಥಾನ ಶ್ರೀ ನಿತ್ಯ ನೂತನ ಭಜನಾ ಮಂಡಳಿಯ ಸಾಮೂಹಿಕ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್.ಡಿ.ಯಂ ಇಂಜಿನಿಯರಿಂಗ್ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಕಬಡ್ಡಿಯಲ್ಲಿ ಗಮನೀಯ ಸಾಧನೆಯನ್ನು ಮಾಡಿದ್ದ ಕು. ಚಿನ್ಮಯಿ ರವರ ಪ್ರಾಯೋಜಕತ್ವದಲ್ಲಿ ಕ್ರೀಡಾ ಕಿಟ್ ವಿತರಣೆ

Suddi Udaya

ಕನ್ಯಾಡಿ II: ವಿ. ಆರ್. ಶಾರದಾ ನಿಧನ

Suddi Udaya

ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ದತ್ತು ಸ್ವೀಕಾರ

Suddi Udaya
error: Content is protected !!