23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ ವೈಷ್ಣವಿ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಮಹಾಸಭೆ

ಕಳಿಯ : ವೈಷ್ಣವಿ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟ ಕಳಿಯ ಇದರ ಮಹಾಸಭೆಯನ್ನು ಸೆ.18 ರಂದು ಕಳಿಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ವಿಜಯ ಹೆಚ್ ಪ್ರಸಾದ್ ರವರ ಅಧ್ಯಕ್ಷತೆಯಲ್ಲಿ ಮತ್ತು ವಲಯ ಮೇಲ್ವಿಚಾರಕಿ ಶ್ರೀಮತಿ ವೀಣಾ ಶ್ರೀ ಇವರ ಉಪಸ್ಥಿತಿಯಲ್ಲಿ ನಡೆಸಲಾಯಿತು.

ಪಂಚಾಯಿತಿನ ಅಧ್ಯಕ್ಷ ದಿವಾಕರ ಇವರು ಹಾಗೂ ಒಕ್ಕೂಟದ ಅಧ್ಯಕ್ಷ ವಿಜಯಹೆಚ್ ಪ್ರಸಾದ್, ಉಪಾಧ್ಯಕ್ಷೆ ರೀತಾ ಹಾಗೂ ಕಾರ್ಯದರ್ಶಿ ಶ್ರೀಮತಿ ರೇಷ್ಮಾ ಹಾಗೂ ಪದಾಧಿಕಾರಿಗಳು ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.

ಪ್ರಜ್ಞಾ ರವರು 2022-23 ಹಾಗೂ 2024-25 ರ ವಾರ್ಷಿಕ ವರದಿ ಮಂಡಿಸಿ ಖರ್ಚು ವೆಚ್ಚ ಹಾಗೂ ಆಸ್ತಿ ಜವಾಬ್ದಾರಿ ಯನ್ನು ಮಂಡಿಸಿದರು. ವಲಯ ಮೇಲ್ವಿಚಾರಕರಾದ ಶ್ರೀಮತಿ ವೀಣಾ ಶ್ರೀ ಇವರು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (NRLM)ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು. ಸಂಜೀವಿನಿ ಯೋಜನೆಯ ದ್ಯೇಯೋದೇಶ ದ ಬಗ್ಗೆ ಜೀವನೋಪಾಯ ಚಟುವಟಿಕೆ ಬಗ್ಗೆ ಹಾಗೂ ಇತರ ಹಲವಾರು ವಿಷಯಗಳ ಬಗ್ಗೆ ಸವಿಸ್ತಾರವಾಗಿ ಮಾಹಿತಿಯನ್ನು ನೀಡಿದರು.

ಅತ್ಯುತ್ತಮ ಪಶು ಸಖಿ ಯಾಗಿ ಪ್ರಶಸ್ತಿ ಪಡೆದ ರೂಪಾ ಇವರಿಗೆ ಒಕ್ಕೂಟದಿಂದ ಸನ್ಮಾನಿಸಲಾಯಿತು. ಅದೇ ರೀತಿ ಈ ಮೊದಲು ಇದ್ದ ಅಧ್ಯಕ್ಷ ರು ಮತ್ತು ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಮಮತಾ ಸ್ವಾಗತಿಸಿದರು. ರೂಪಾರವರು ನಿರೂಪಿಸಿದರು. ಸುಪ್ರಿಯಾ ಧನ್ಯವಾದವಿತ್ತರು.

Related posts

ಪೆರ್ಮುಡ: ಸ.ಹಿ.ಪ್ರಾ.ಶಾಲೆಯಲ್ಲಿ ಉಚಿತ ಬರವಣಿಗೆ ಪುಸ್ತಕ ವಿತರಣೆ

Suddi Udaya

ಮಚ್ಚಿನ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಹಬ್ಬ

Suddi Udaya

ಗುರುವಾಯನಕೆರೆ: ಶ್ರೀ ಲಕ್ಷ್ಮಿ ಫ್ಯಾನ್ಸಿಯಲ್ಲಿ ಚಪ್ಪಲ್ ಮೇಲೆ 10-50% ಡಿಸ್ಕೌಂಟ್ ಸೇಲ್

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಶಿಬಾಜೆ: ಪಡಂತ್ತಾಜೆಯಲ್ಲಿ ಒಂಟಿ ಸಲಗ ದಾಳಿ: ಬಾಳೆಗಿಡ, ಅಡಿಕೆ ಗಿಡಗಳಿಗೆ ಹಾನಿ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ಜಿಲ್ಲಾ ಮಟ್ಟದ ಬೆನ್ನಿದ ನಿರೆಲ್ದ ಬಿರ್ದ್ ಇದರ ಛಾಯಾಚಿತ್ರ ಹಾಗೂ ವೀಡಿಯೋ ಸ್ಪರ್ಧೆ: ಬೆಳ್ತಂಗಡಿ ವಲಯ ಪ್ರಥಮ ಸ್ಥಾನ

Suddi Udaya
error: Content is protected !!