30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 1.25 ಲಕ್ಷ ಲಾಭ

ಕೊಕ್ಕಡ: ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸೆ.19ರಂದು ಸಂಘದ ಆವರಣದಲ್ಲಿ ನಡೆಯಿತು.

ಸಂಘವು ಒಟ್ಟು 180 ಸದಸ್ಯರನ್ನು ಹೊಂದಿದ್ದು ಕಳೆದ ಸಾಲಿನಲ್ಲಿ 69,67,535 ಮೌಲ್ಯದ 1,91,973 ಲೀ ಹಾಲನ್ನು ಸಂಗ್ರಹಣೆ ಮಾಡಿದೆ. ಈ ಅವಧಿಯಲ್ಲಿ ಸಂಘವು, 1,26,535.01 ನಿವ್ವಳ ಲಾಭ ಗಳಿಸಿದೆ. ಅಧ್ಯಕ್ಷತೆಯನ್ನು ವಹಿಸಿದ ಸಂಘದ ಅಧ್ಯಕ್ಷೆ ಶ್ರೀಮತಿ ಶ್ವೇತಾ ಎಚ್ ಕೆ ಇವರು ಮಾತನಾಡಿ ಸಂಘವು ಆರಂಭಗೊಂಡು ಹತ್ತು ವರ್ಷಗಳಾಯಿತು. ದಿನವೊಂದರ 50 ಲೀ ಹಾಲಿನಿಂದ ಆರಂಭಗೊಂಡ ಸಂಘವು 850 ಲೀ ಹಾಲನ್ನು ಸಂಗ್ರಹಿಸುತ್ತಿದೆ. ಸಂಘವು ಸ್ವಂತ ಕಟ್ಟಡವನ್ನು ಹೊಂದಿದ್ದು ಲಾಭದಾಯಕವಾಗಿ ನಡೆಯುತ್ತಿದೆ. ಒಕ್ಕೂಟದ ಅಧಿಕಾರಿಗಳು, ಸಂಘದ ಆಡಳಿತ ಮಂಡಳಿ, ಸಿಬ್ಬಂದಿ, ಸದಸ್ಯರು ಹಾಗೂ ಊರವರ ಸಹಕಾರ ಸಂಘದ ಬೆಳವಣಿಗೆಗೆ ಸಾಧ್ಯವಾಗಿದೆ ಎಂದರು.

ಒಕ್ಕೂಟದ ವಿಸ್ತರಣಾಧಿಕಾರಿ ರಾಜೇಶ್ ಪ್ರಸಾದ್ ಕಾಮತ್ ಮಾತನಾಡಿ ಪಶುಗಳ ಆರೋಗ್ಯ, ಪಶು ಆಹಾರದ ಸದ್ಬಳಕೆ, ಹಾಗೂ ಒಕ್ಕೂಟದಿಂದ ರೈತರಿಗೆ ದೊರೆಯುವ ಸೌಲಭ್ಯಗಳ ಮಾಹಿತಿ ನೀಡಿದರು. ರೈತರು ಪಶುಪಾಲನೆಯತ್ತ ಮನಮಾಡಿ ಹಾಲಿನ ಪೂರೈಕೆಯನ್ನು ಹೆಚ್ಚಿಸುವಂತೆ ಕರೆ ನೀಡಿದರು. ವೇದಿಕೆಯಲ್ಲಿ ಉಪಾಧ್ಯಕ್ಷೆಯಾದ ಹೇಮಾವತಿ, ನಿರ್ದೇಶಕರಾದ ದಿವ್ಯ, ಜಯಂತಿ, ಸುಂದರಿ ಎ, ಅಕ್ಷತಾ, ಚಂದ್ರಾವತಿ, ಕುಸುಮ, ಶೀಲ, ರೋಸ್ಲಿನ್, ಶೋಭ ಉಪಸ್ಥಿತರಿದ್ದರು. ಸಂಘಕ್ಕೆ ಹೆಚ್ಚು ಹಾಲು ಪೂರೈಸಿದ ಸದಸ್ಯರನ್ನು ಹಾಗೂ ವರ್ಷಪೂರ್ತಿ ಹಾಲು ಹಾಕಿದ ಸದಸ್ಯರನ್ನು ಸನ್ಮಾನಿಸಲಾಯಿತು. ಕಲಿಕೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸದಸ್ಯರ ಮಕ್ಕಳನ್ನು ಗೌರವಿಸಲಾಯಿತು. ಸಂಘದ ಅಭಿವೃದ್ಧಿಗೆ ಸಹಕರಿಸಿದ ಹರಿಪ್ರಸಾದ್ ಕೆದಿಲಾಯ ಇವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಘದ ಸದಸ್ಯೆ ಅಶ್ವತಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಧ್ಯಾ ವಾರ್ಷಿಕ ವರದಿ ಮಂಡಿಸಿದರು. ನಿರ್ದೇಶಕಿ ರೋಸ್ಟಿನ್ ವಂದಿಸಿದರು. ಸಿಬ್ಬಂದಿ ವೇದಾವತಿ ಸಹಕರಿಸಿದರು.

Related posts

ಶಿಶಿಲ: ಕೃಷಿಕ ಆನಂದ ಕೆದಿಲ್ಲಾಯ ನಿಧನ

Suddi Udaya

ಬೆಳ್ತಂಗಡಿಯಲ್ಲಿ ಯುವವಾಹಿನಿಯಿಂದ “ಡೆನ್ನಾನ ಡೆನ್ನನ” ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ

Suddi Udaya

ಕಲ್ಮಂಜ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಮತ್ತು ಪೌಷ್ಟಿಕ ಆಹಾರದ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗೆಡೆಯವರಿಂದ ಸಂವಾದ ಕಾರ್ಯಕ್ರಮ

Suddi Udaya

ಶಿಶಿಲೇಶ್ವರ ದೇವಸ್ಥಾನಕ್ಕೆ ವ್ಯವಸ್ಥಾಪನ ಸಮಿತಿ ರಚನೆ ವಿಳಂಬ: ದೇವಸ್ಥಾನ ದೈನಂದಿನ ಪೂಜಾ ಕಾರ್ಯ ಹಾಗೂ ವಾರ್ಷಿಕ ಆಚರಣೆಗಳಿಗೆ ತೀವ್ರ ಅಡಚಣೆ: ಮಳೆಯಿಂದ ದೇವಾಲಯದ ತಡೆಗೋಡೆ ಕುಸಿದು ದೇವಾಲಯದ ಒಳಗೆ ಕೆಸರುಮಯವಾದರೂ ಕೇಳುವವರಿಲ್ಲ: ಭಕ್ತರ ತೀವ್ರ ಅಕ್ರೋಶ, ದೇವಸ್ಥಾನದಲ್ಲಿ ಧರಣಿ ನಡೆಸುವ ಎಚ್ಚರಿಕೆ

Suddi Udaya

ಮೊಗ್ರು: ಮುಗೇರಡ್ಕ ದೈವಸ್ಥಾನದ ವತಿಯಿಂದ ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ಶಿಶುಮಂದಿರಕ್ಕೆ ಸ್ಮಾರ್ಟ್ ಎಲ್.ಇ.ಡಿ ಟಿವಿ ಕೊಡುಗೆ

Suddi Udaya
error: Content is protected !!