25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಕೋರಂ ಕೊರತೆ ಹಾಗೂ ಅಧಿಕಾರಿಗಳು ಲೇಟಾಗಿ ಭಾಗವಹಿಸಿದ್ದರಿಂದ ನೆರಿಯ ಗ್ರಾಮಸಭೆ ಮುಂದೂಡಿಕೆ

ನೆರಿಯ: ನೆರಿಯ ಗ್ರಾಮ ತಾಲೂಕಿನಲ್ಲಿ ದೊಡ್ಡ ವ್ಯಾಪ್ತಿಯಿರುವ ಪಂಚಾಯತ್. ಗ್ರಾಮಸಭೆಗೆ ಅಧಿಕಾರಿಗಳು ಬಾರದೆ ಗ್ರಾಮಸಭೆ ಪ್ರಾರಂಭ ಮಾಡುವುದು ಬೇಡ.ಇಲಾಖೆಗಳು ತುಂಬಾ ದುರ್ಬಲವಾಗಿದೆಯ?ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಬರಬೇಕು. ಗಂಟೆ 12 ಕಳೆದರೂ ಬರುವುದಿಲ್ಲ ಯಾಕೇ?ಅವರು ನಾವು ಕಟ್ಟುವ ತೆರಿಗೆ ಹಣದಿಂದ ಸಂಬಳ ಪಡೆಯುವುದು. ಗ್ರಾಮಸಭೆಗೆ ಜನರು ಬರಲಿಲ್ಲ,ಅಧಿಕಾರಿಗಳು ಇಲ್ಲ.ಯಾರಿಗೆ ಗ್ರಾಮಸಭೆ ಎಂದು ಗ್ರಾಮಸ್ಥರು ಪ್ರಶ್ನಿಸಿದರು.

ಮಾರ್ಗದರ್ಶಿ ಅಧಿಕಾರಿಯಾಗಿ ಭಾಗವಹಿಸಿದ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಮುರಳೀಧರ್ ಹಾಗೂ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಸಂತಿ, ಪಿಡಿಓ ಸುಮ ಎ ಎಸ್ ಅವರು ಗ್ರಾಮಸಭೆ ನಡೆಸಲು ಗ್ರಾಮಸ್ಥರ ಮನವೊಲಿಸಲು ಪ್ರಯತ್ನಿಸಿದರು.

ಗ್ರಾಮಸಭೆಗೆ ಅಧಿಕಾರಿಗಳು ಒಬ್ಬೊಬ್ಬರಂತೆ ಲೇಟಾಗಿ ಆಗಮಿಸಿದರು.12 ಗಂಟೆಯ ನಂತರ ಗ್ರಾಮಸಭೆ ಮಾಡುವುದು ಬೇಡಾ ಎಂದು ಹೇಳಿ ಕೆಲವರು ಹೊರ ನಡೆದರು. ಪಂಚಾಯತ್ ಸದಸ್ಯರು ಮತ್ತು ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆಯಿತು.ಕೆಲವು ಗ್ರಾಮಸ್ಥರು ಗ್ರಾಮಸಭೆ ಬೇಕು ಎಂದಾದರೆ, ಇನ್ನೂ ಕೆಲವರು ಗ್ರಾಮಸ್ಥರು ಬರಲಿಲ್ಲ ಬೇಡಾ ಎಂದು ಗೊಂದಲದ ವಾತಾವರಣ ನಿರ್ಮಾಣವಾಯಿತು.

ಕೊನೆಗೆ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಮಾರ್ಗದರ್ಶಿ ಅಧಿಕಾರಿ ಗ್ರಾಮಸಭೆಯನ್ನು ಮುಂದೂಡಿ,ಮುಂದಿನ ದಿನಾಂಕ ತಿಳಿಸಲಾಗುವುದು ಎಂದರು.

Related posts

ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮಾ.30: ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿಯಿಂದ ಬರಾಯ ಭಜನಾ ಕಮ್ಮಟ ಉತ್ಸವ

Suddi Udaya

ಬೆಳಾಲು: ವ್ಯಕ್ತಿಯೋರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ

Suddi Udaya

ಓಡಿಲ್ನಾಳ ಆಕಸ್ಮಿಕ ಬೆಂಕಿ

Suddi Udaya

ಗಾಳಿ ಮಳೆ: ಮೊಗ್ರು ಗ್ರಾಮದ ಹಲವು ಕಡೆ ಮನೆ, ಕೃಷಿಗೆ ಹಾನಿ ಬಂದಾರು ಗ್ರಾ.ಪಂ. ಅಧ್ಯಕ್ಷರು, ಸದಸ್ಯರು, ಪಿಡಿಓ ಸ್ಥಳಕ್ಕೆ ಭೇಟಿ

Suddi Udaya

ಬಳಂಜ ಗ್ರಾ.ಪಂ ನೂತನ‌ ಅಧ್ಯಕ್ಷೆ,ಉಪಾಧ್ಯಕ್ಷ ರಿಗೆ ಬಿಜೆಪಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!