30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಕೋರಂ ಕೊರತೆ ಹಾಗೂ ಅಧಿಕಾರಿಗಳು ಲೇಟಾಗಿ ಭಾಗವಹಿಸಿದ್ದರಿಂದ ನೆರಿಯ ಗ್ರಾಮಸಭೆ ಮುಂದೂಡಿಕೆ

ನೆರಿಯ: ನೆರಿಯ ಗ್ರಾಮ ತಾಲೂಕಿನಲ್ಲಿ ದೊಡ್ಡ ವ್ಯಾಪ್ತಿಯಿರುವ ಪಂಚಾಯತ್. ಗ್ರಾಮಸಭೆಗೆ ಅಧಿಕಾರಿಗಳು ಬಾರದೆ ಗ್ರಾಮಸಭೆ ಪ್ರಾರಂಭ ಮಾಡುವುದು ಬೇಡ.ಇಲಾಖೆಗಳು ತುಂಬಾ ದುರ್ಬಲವಾಗಿದೆಯ?ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಬರಬೇಕು. ಗಂಟೆ 12 ಕಳೆದರೂ ಬರುವುದಿಲ್ಲ ಯಾಕೇ?ಅವರು ನಾವು ಕಟ್ಟುವ ತೆರಿಗೆ ಹಣದಿಂದ ಸಂಬಳ ಪಡೆಯುವುದು. ಗ್ರಾಮಸಭೆಗೆ ಜನರು ಬರಲಿಲ್ಲ,ಅಧಿಕಾರಿಗಳು ಇಲ್ಲ.ಯಾರಿಗೆ ಗ್ರಾಮಸಭೆ ಎಂದು ಗ್ರಾಮಸ್ಥರು ಪ್ರಶ್ನಿಸಿದರು.

ಮಾರ್ಗದರ್ಶಿ ಅಧಿಕಾರಿಯಾಗಿ ಭಾಗವಹಿಸಿದ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಮುರಳೀಧರ್ ಹಾಗೂ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಸಂತಿ, ಪಿಡಿಓ ಸುಮ ಎ ಎಸ್ ಅವರು ಗ್ರಾಮಸಭೆ ನಡೆಸಲು ಗ್ರಾಮಸ್ಥರ ಮನವೊಲಿಸಲು ಪ್ರಯತ್ನಿಸಿದರು.

ಗ್ರಾಮಸಭೆಗೆ ಅಧಿಕಾರಿಗಳು ಒಬ್ಬೊಬ್ಬರಂತೆ ಲೇಟಾಗಿ ಆಗಮಿಸಿದರು.12 ಗಂಟೆಯ ನಂತರ ಗ್ರಾಮಸಭೆ ಮಾಡುವುದು ಬೇಡಾ ಎಂದು ಹೇಳಿ ಕೆಲವರು ಹೊರ ನಡೆದರು. ಪಂಚಾಯತ್ ಸದಸ್ಯರು ಮತ್ತು ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆಯಿತು.ಕೆಲವು ಗ್ರಾಮಸ್ಥರು ಗ್ರಾಮಸಭೆ ಬೇಕು ಎಂದಾದರೆ, ಇನ್ನೂ ಕೆಲವರು ಗ್ರಾಮಸ್ಥರು ಬರಲಿಲ್ಲ ಬೇಡಾ ಎಂದು ಗೊಂದಲದ ವಾತಾವರಣ ನಿರ್ಮಾಣವಾಯಿತು.

ಕೊನೆಗೆ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಮಾರ್ಗದರ್ಶಿ ಅಧಿಕಾರಿ ಗ್ರಾಮಸಭೆಯನ್ನು ಮುಂದೂಡಿ,ಮುಂದಿನ ದಿನಾಂಕ ತಿಳಿಸಲಾಗುವುದು ಎಂದರು.

Related posts

ಬಂದಾರು ಶಾಲೆಗೆ ರಾಷ್ಟ್ರ ಮಟ್ಟದಲ್ಲಿ ಹೆಸರು ತಂದುಕೊಟ್ಟ ದೈಹಿಕ ಶಿಕ್ಷಕ ಪ್ರಶಾಂತ್ ಮರೋಡಿ ಕೂಕ್ರಬೆಟ್ಟು ಶಾಲೆಗೆ ವರ್ಗಾವಣೆ

Suddi Udaya

ಉಜಿರೆ ಶ್ರೀ ಧ.ಮಂ.ಅ. ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕ ಸುರೇಶ್ ಕೆ. ಸೇವಾ ನಿವೃತ್ತಿ

Suddi Udaya

ವಾಲಿಬಾಲ್ ಪಂದ್ಯಾಟ: ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲಾ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಪೆರಾಲ್ದರಕಟ್ಟೆ ಸ್ವಲಾತ್ ಕಮಿಟಿ ನೂತನ ಆಡಳಿತ ಸಮಿತಿ ರಚನೆ

Suddi Udaya

ನಿಟ್ಟಡೆ: ಕುಂಭಶ್ರೀ ವಿದ್ಯಾಸಂಸ್ಥೆಗೆ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮನ್ವಯಾಧಿಕಾರಿ ಭೇಟಿ

Suddi Udaya

ಕಳಿಯ ಗ್ರಾ.ಪಂ. ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
error: Content is protected !!