26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ವಿಕಾಸ ವಿ.ಸ. ಸಂಘದ ಮಹಾಸಭೆ: ಶೇ.15 ಡಿವಿಡೆಂಡ್ ಘೋಷಣೆ , ರೂ. 262.73 ಕೋಟಿ ವ್ಯವಹಾರ

ಬೆಳ್ತಂಗಡಿ: ಭರವಸೆ ಮತ್ತು ನಂಬಿಕೆಯೊಂದಿಗೆ ವಿಕಾಸ ವಿ.ಸ. ಸಂಘವು ಪ್ರಾರಂಭವಾಗಿ 17 ವರ್ಷ ಪೂರೈಸಿ 18ನೇ ವರ್ಷದಲ್ಲಿ ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿದೆ. ಪ್ರಸಕ್ತ ಸಾಲಿನಲ್ಲಿ ೨೬೨.೭೩ ಕೋಟಿ ರೂ. ವ್ಯವಹಾರ ನಡೆಸಿ ೩೨.೨೧ ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಎಲೋಸಿಯಸ್ ಡಿಸೋಜ ಹೇಳಿದರು.

ಗುರುವಾಯನಕೆರೆ ವಿಕಾಸ ಸದನ ಸಭಾಭವನದಲ್ಲಿ ಸೆ.20 ರಂದು ಗುರುವಾಯನಕೆರೆ ವಿಕಾಸ ವಿವಿಧೋದ್ದೇಶ ಸಹಕಾರಿ ಸಂಘದ ೨೦೨೪-೨೫ನೇ ಸಾಲಿನ ವಾರ್ಷಿಕ ಮಹಾಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸಂಘವು ೪೯.೬೮ ಕೋ.ರೂ. ಠೇವಣಿ ಹೊಂದಿದ್ದು, ೪೬.೨೩ ಕೋ.ರೂ. ಸಾಲ ವಿತರಿಸಲಾಗಿದೆ. ಕಳೆದ ಸಾಲಿನಿಂದ ಸಾಲ ವಸೂಲಿ ಸಹಿತ ಲಾಭದಲ್ಲಿ ಹೆಚ್ಚಳವಾಗಿದೆ. ಸಂಘವು ಬೆಳ್ತಂಗಡಿ ಪೇಟೆಯಲ್ಲಿ ಕಟ್ಟಡ ಖರೀದಿಗೆ ೧೦ ಕೋ.ರೂ. ವ್ಯಯಿಸಿದ್ದು, ಅದು ಪ್ರಸಕ್ತ ೨೨ ಕೋ.ರೂ. ಮಿಗಿಲಾಗಿ ಪೇಟೆಧಾರಣೆಯಿದೆ. ಸಂಘವು ವಿದೇಶದಲ್ಲಿ ಉದ್ಯೋಗ ನಡೆಸುವ ಮಂದಿಗೆ ಸಾಲದ ರೂಪದಲ್ಲಿ ನೆರವಾಗಿದೆ ಎಂದು ತಿಳಿಸಿದರು.

ಸಂಘದ ನಿರ್ದೇಶಕರಾದ ಗೋಪಿನಾಥ್ ನಾಯಕ್, ಅಂತೋನಿ ಪಾಸ್, ರಾಘವ ಶೆಟ್ಟಿ ಕೆ., ಗ್ರೆಗೋರಿ ಡಿಮೆಲ್ಲೊ, ಪ್ರವೀಣ್ ಕುಮಾರ್ ಎಚ್.ಎಸ್., ಜಗದೀಶ್, ಶೇಖರ್ ನಾಯ್ಕ್, ದಿನೇಶ್ ನಾಯಕ್ ಬಿ., ಪ್ರವೀಣ್ ಚಂದ್ರ ಮೆಹಂದಳೆ, ಮಮತಾ ಎಂ.ಶೆಟ್ಟಿ ಉಪಸ್ಥಿತರಿದ್ದರು. ಸಂಘದ ಉಪಾಧ್ಯಕ್ಷ ಯೋಗೀಶ್ ಪೈ ಸ್ವಾಗತಿಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿತಾ ಫೆರ್ನಾಂಡಿಸ್ ವಂದಿಸಿದರು. ನಿರ್ದೇಶಕರಾದ ಒಲ್ವಿನ್ ಮೋನಿಸ್ ಕಾರ್ಯಕ್ರಮ ನಿರೂಪಿಸಿದರು.

Related posts

ಮಚ್ಚಿನ: ರುದ್ರಭೂಮಿ ಸಮೀಪ ಆಕಸ್ಮಿಕ ಬೆಂಕಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ

Suddi Udaya

ಫೆ.8-12: ಕೊಯ್ಯೂರು ಬದಿನಡೆ ಶ್ರೀ ವನದುರ್ಗಾ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಉಜಿರೆಯಲ್ಲಿ ರಕ್ತದಾನ ಶಿಬಿರ; 167 ಯೂನಿಟ್ ರಕ್ತ ಸಂಗ್ರಹ

Suddi Udaya

ಅಪರ ಜಿಲ್ಲಾಧಿಕಾರಿಯಾಗಿ ಡಾ. ಸಂತೋಷ್ ಕುಮಾರ್ ಅಧಿಕಾರ ಸ್ವೀಕಾರ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಜಾತ್ರಾಮಹೋತ್ಸವ: 25 ಸಾವಿರಕ್ಕೂ ಹೆಚ್ಚಿನ ಮಹಿಳೆಯರಿಂದ ಅಮ್ಮನ ಮಡಿಲ ಪ್ರಸಾದ ಸ್ವೀಕಾರ

Suddi Udaya
error: Content is protected !!