September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೆಕ್ಕಾರು ಗ್ರಾ.ಪಂ ನಲ್ಲಿ ರೈತರಿಗೆ ಅಣಬೆ ಕೃಷಿ ತರಬೇತಿ

ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿ & ತೆಕ್ಕಾರು ಗ್ರಾಮ ಪಂಚಾಯತ್, ಮತ್ತು ಇಬ್ಬನಿ ಸಂಜೀವಿನಿ ಮಹಿಳಾ ಒಕ್ಕೂಟ ತೆಕ್ಕಾರು, ಕೃಷಿ ಪತ್ತಿನ ಸಹಕಾರಿ ಸಂಘ ತೆಕ್ಕಾರು ಇದರ ಸಹಯೋಗದಲ್ಲಿ ರೈತರಿಗೆ ಅಣಬೆ ಕೃಷಿ ತರಬೇತಿ ಕಾರ್ಯಕ್ರಮವನ್ನು ಸೆ. 18 ರಂದು ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಅಬ್ದುಲ್ ರಜಾಕ್ ವಹಿಸಿದ್ದರು. ಉಷಾ ಮತ್ತು ದಿವ್ಯ ರವರ ಪ್ರಾರ್ಥನೆಯೊಂದಿಗೆ ಸಭೆಯನ್ನು ಪ್ರಾರಂಭಿಸಲಾಯಿತು. ಅಭಿವೃದ್ಧಿ ಅಧಿಕಾರಿಯಾಗಿ ಸುಮಯ್ಯರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಸಭೆಯಲ್ಲಿ ಕೃಷಿಪತ್ತಿನ ಕಾರ್ಯನಿರ್ವಾಹಕ ಅಧಿಕಾರಿ ರಾಘವೇಂದ್ರ ಅಡಪ, ನಿರ್ದೇಶಕರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು, ಇಬ್ಬನಿ ಸಂಜೀವಿನಿ ಒಕ್ಕೂಟದ ಕಾರ್ಯದರ್ಶಿ, ಗ್ರಾಮ ಪಂಚಾಯಿತಿ ಸದಸ್ಯರು, ಕೃಷಿ ಅಧಿಕಾರಿ ಗಣೇಶ್ ಅಡಿಗ, ಸಂಪನ್ಮೂಲ ವ್ಯಕ್ತಿ ಸುಲೇಮಾನ್ ಬೆಳಾಲ್ ಉಪಸ್ಥಿತರಿದ್ದರು, ಪವಿತ್ರ ಸ್ವಾಗತಿಸಿದರು. ಉದ್ಘಾಟಕರಾಗಿ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಸುಮಯ್ಯ ಮಾತನಾಡಿದರು ಹಾಗೂ ಕೃಷಿ ಅಧಿಕಾರಿ ಗಣೇಶ ಆಡಿಗರವರು ಕೃಷಿಯ ಬಗ್ಗೆ, ಕೃಷಿ ಇಲಾಖೆಯಲ್ಲಿ ದೊರೆಯುವ ಸೌಲಭ್ಯದ ಬಗ್ಗೆ, ತರಬೇತಿ ಬಗ್ಗೆ ಮಾಹಿತಿ ನೀಡಿದರು.

ಸಭೆಯ ಅಧ್ಯಕ್ಷ ಅಬ್ದುಲ್ ರಜಾಕ್ ಮಾತನಾಡಿ ಇನ್ನು ಮುಂದಿನ ದಿನಗಳಲ್ಲಿ ಅಗರಬತ್ತಿ, ತಯಾರಿಕೆ ಮೇಣದ ಬತ್ತಿ ತಯಾರಿಕೆ, ಗ್ರಹಲಕ್ಷ್ಮಿ ಫಲಾನುಭವಿಗಳು ಸಂಜೀವಿನಿ ಸಂಘ ಸೇರುವ ಬಗ್ಗೆ ಮಾಹಿತಿ ನೀಡಿದರು. ಸಂಪನ್ಮೂಲ ವ್ಯಕ್ತಿ ಸುಲೈಮಾನ್ ಬೆಳಾಲು ಸಂಪೂರ್ಣ ಮಾಹಿತಿ ನೀಡಿದರು ಹಾಗೂ ಪ್ರತ್ಯಕ್ಷಿಕೆಯನ್ನು ನಡೆಸಿಕೊಟ್ಟರು, ಹಾಗೂ ಜೇನು ಕೃಷಿಯ ಬಗ್ಗೆ ಮಾಹಿತಿ ನೀಡಿದರು. ಸುಲಭ ಮಾರುಕಟ್ಟೆ ಬಗ್ಗೆ ಮಾಹಿತಿ ನೀಡಿದರು. ಉಷಾ ಕಾರ್ಯಕ್ರಮ ನಿರೂಪಣೆ ಮಾಡಿದರು. ಪಶು ಸಖಿ ಧನ್ಯವಾದವಿತ್ತರು.

Related posts

ಉಜಿರೆ: ಮರ ಬಿದ್ದು ಗಂಭೀರ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕೆ.ಪಿ.ಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ

Suddi Udaya

ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಬೆಳ್ತಂಗಡಿ: ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದಿಂದ ಆರೋಗ್ಯ ಇಲಾಖೆ ನೌಕರರಿಗೆ ಉಚಿತ ಸಮವಸ್ತ್ರ ವಿತರಣೆ

Suddi Udaya

ಬೆಳಾಲು ಶ್ರೀ ಧ. ಮ. ಅನುದಾನಿತ ಪ್ರೌಢಶಾಲೆಯಲ್ಲಿ ಆಟಿದ ಲೇಸ್ ಕಾರ್ಯಕ್ರಮ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ವೇಣೂರು ಸರ್ಕಾರಿ ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಉಜಿರೆ ಸಿದ್ದವನ ಗುರುಕುಲದಲ್ಲಿ ಗುರುವಂದನಾ ವ್ಯಾಸಪೂರ್ಣಿಮೆ ಮತ್ತು ‘ವಂದೇ -ಗುರುಪರಂಪರಾಮ್’ ಕಾರ್ಯಕ್ರಮ

Suddi Udaya
error: Content is protected !!