July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ : ಸ್ಕೌಟಿಂಗ್ ತರಬೇತಿ ಶಿಬಿರದ ಉದ್ಘಾಟನೆ

ಮುಂಡಾಜೆ : ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧೀನಕ್ಕೊಳಪಟ್ಟ ಮುಂಡಾಜೆ ಪದವಿ ಪೂರ್ವ ಕಾಲೇಜು ಮುಂಡಾಜೆ ಹಾಗೂ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ ಮುಂಡಾಜೆ ಇಲ್ಲಿನ ಕಬ್ಸ್- ಬುಲ್ ಬುಲ್, ಸೌಟ್ಸ್- ಗೈಡ್ಸ್, ರೋವರ್ಸ್‌ ಮತ್ತು ರೇಂಜರ್ಸ್ ವಿಭಾಗಗಳ ಎರಡು ದಿನದ ತರಬೇತಿ ಶಿಬಿರದ ಉದ್ಘಾಟನೆಯು ಜರುಗಿತು.

ಶಿಬಿರದ ಉದ್ಘಾಟನೆಯನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ, ಬೆಳ್ತಂಗಡಿ ಇದರ ಕಾರ್ಯದರ್ಶಿಗಳಾದ ಪ್ರಮೀಳಾರವರು ನೆರವೇರಿಸಿ, ಸ್ಕೌಟಿಂಗ್ ಗೈಡಿಂಗ್ ಸಮವಸ್ತ್ರ ಹಾಗೂ ಪರೀಕ್ಷೆಗಳ ಬಗ್ಗೆ ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ ಇದರ ಅಧ್ಯಕ್ಷ ವಿನಯಚಂದ್ರ ಇವರು ಶಿಬಿರಕ್ಕೆ ಶುಭ ಹಾರೈಸಿದರು.


ಪ. ಪೂ. ಕಾಲೇಜಿನ ಪ್ರಾಂಶುಪಾಲರಾದ ಗೀತಾ, ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ ಮುಂಡಾಜೆಯ ಮುಖ್ಯಶಿಕ್ಷಕಿ ಚಂದ್ರಮತಿ, ಹಿರಿಯ ಶಿಕ್ಷಕಿ ಶ್ರೀಜಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ರೇಂಜರ್ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮವನ್ನು ರೇಂಜರ್ ಶ್ರಾವ್ಯ ನಿರೂಪಿಸಿ, ರೇಂಜರ್ ಮೇಟ್ ಹೊಂಗಿರಣ ಸ್ವಾಗತಿಸಿ, ರೇಂಜರ್ ಜಲಜಾಕ್ಷಿ ಧನ್ಯವಾದಗೈದರು.

Related posts

ಬೆಳ್ತಂಗಡಿ ವಕೀಲರ ಭವನದಲ್ಲಿ ಹುಲಿ ವೇಷ ಪ್ರದರ್ಶನ

Suddi Udaya

ಕರಾಟೆ ಸ್ಪರ್ಧೆ : ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗೆ ಚಿನ್ನದ ಪದಕ

Suddi Udaya

ಮಾ.15: ರಂಜನ್‌ ಜಿ. ಗೌಡ ನೇತೃತ್ವದ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಕಂಬಳ

Suddi Udaya

ಕೊಕ್ಕಡ: ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ನ ನವೀಕೃತ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ 38ನೇ ವರ್ಷದ ಮಕರ ಸಂಕ್ರಮಣೋತ್ಸವ; ಧಾರ್ಮಿಕ ಸಭೆ

Suddi Udaya

ನಾಳೆ(ಜೂ.11): ವಿದ್ಯುತ್ ನಿಲುಗಡೆ

Suddi Udaya

ತೆಕ್ಕಾರು: ಹಿಟಾಚಿ ತುಂಬಿದ್ದ ಟಿಪ್ಪರ್ ಪಲ್ಟಿ

Suddi Udaya
error: Content is protected !!