23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.22-ಅ.1: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

ಶಿಬಾಜೆ: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಸೆ.22ರಿಂದ ಅ.1ರವರೆಗೆ ಪ್ರತಿ ವರ್ಷದಂತೆ ದೇವಳದಲ್ಲಿ ನವರಾತ್ರಿ ಉತ್ಸವವು ವಿಜೃಂಭಣೆಯಿಂದ ಜರುಗಲಿದೆ.

ಪ್ರತಿದಿನ ಬೆಳಗ್ಗೆ 8ಕ್ಕೆ ಬೆಳಗ್ಗಿನ ಪೂಜೆ, ಮಧ್ಯಾಹ್ನ ಮಹಾಮಂಗಳಾರತಿ, ಪ್ರಸಾದ ವಿತರಣೆ, ನಂತರ ಭೋಜನ ಪ್ರಸಾದ, ರಾತ್ರಿ ಮಹಾಮಂಗಳಾರತಿ ನಂತರ ಭೋಜನ ಪ್ರಸಾದ ನೆರವೇರಲಿರುವುದು. ದೇವಳದಲ್ಲಿ ನವರಾತ್ರಿ ದಿನಗಳಲ್ಲಿ ವಿಶೇಷ ಅನ್ನಸಂತರ್ಪಣೆ ನಡೆಯುವುದರಿಂದ ಸೆ.22 ರಂದು ಊರ ಹಾಗೂ ಪರವೂರ ಭಕ್ತಾದಿಗಳಿಂದ ವಸ್ತುರೂಪದ ದೇಣಿಗೆ ಸಮರ್ಪಣೆ ನಡೆಯಲಿದೆ. ಅ.1 ಮತ್ತು 2ರಂದು ಬೆಳಗ್ಗೆಯಿಂದ ರಾತ್ರಿ ತನಕ ವಾಹನ ಪೂಜೆ ನಡೆಸಲಾಗುವುದು. ಅ.1ರಂದು ರಾತ್ರಿ ಕು. ಅರ್ಚನಾ ಇವರಿಂದ ಭರತನಾಟ್ಯ ಕಾರ್ಯಕ್ರಮ ಜರುಗಲಿರುವುದು. ಅ.2ರಂದು ವಿಜಯ ದಶಮಿಯಂದು ಬೆಳಗ್ಗೆಯಿಂದ ಮಧ್ಯಾಹ್ನ ತನಕ ಅಕ್ಷರಾಭ್ಯಾಸ ನಡೆಸಲಾಗುವುದು. ಪ್ರತಿ ದಿನ ಸಂಜೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಸೇವೆ ನಡೆಯಲಿದೆ. ಫೆ.6, 2026 ರಂದು ಮಾಘ ಕೃಷ್ಣ ಪಂಚಮೀಯಂದು ಶತಚಂಡಿಕಾ ಯಾಗ ನೆರವೇರಲಿದೆ.

Related posts

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ರೈತ ರತ್ನ” ಗೌರವ ಪ್ರಶಸ್ತಿ ಪ್ರದಾನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಪಾರೆಂಕಿ ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕರ್ನಾಟಕ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಮಂಗಳೂರು ಜಿಲ್ಲಾ ಸಮಿತಿಯ ಸಭೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ವತಿಯಿಂದ ನೀಟ್ ಸಾಧಕ ಆದಿತ್ ಜೈನ್ ಗೆ ಸನ್ಮಾನ

Suddi Udaya

ಡಿ.27ರಂದು ನಡೆಯಬೇಕಾಗಿದ್ದ ಮಿತ್ತಬಾಗಿಲು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ರದ್ದು

Suddi Udaya

ಬೆಳ್ತಂಗಡಿ : ಮುಖ್ಯ ಪುಸ್ತಕ ಬರಹಗಾರರಿಗೆ ಪುಸ್ತಕ ನಿರ್ವಹಣೆ ಮತ್ತು ಜವಾಬ್ದಾರಿಗಳ ಕುರಿತು ತರಬೇತಿ

Suddi Udaya
error: Content is protected !!