25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.22-ಅ.1: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

ಶಿಬಾಜೆ: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಸೆ.22ರಿಂದ ಅ.1ರವರೆಗೆ ಪ್ರತಿ ವರ್ಷದಂತೆ ದೇವಳದಲ್ಲಿ ನವರಾತ್ರಿ ಉತ್ಸವವು ವಿಜೃಂಭಣೆಯಿಂದ ಜರುಗಲಿದೆ.

ಪ್ರತಿದಿನ ಬೆಳಗ್ಗೆ 8ಕ್ಕೆ ಬೆಳಗ್ಗಿನ ಪೂಜೆ, ಮಧ್ಯಾಹ್ನ ಮಹಾಮಂಗಳಾರತಿ, ಪ್ರಸಾದ ವಿತರಣೆ, ನಂತರ ಭೋಜನ ಪ್ರಸಾದ, ರಾತ್ರಿ ಮಹಾಮಂಗಳಾರತಿ ನಂತರ ಭೋಜನ ಪ್ರಸಾದ ನೆರವೇರಲಿರುವುದು. ದೇವಳದಲ್ಲಿ ನವರಾತ್ರಿ ದಿನಗಳಲ್ಲಿ ವಿಶೇಷ ಅನ್ನಸಂತರ್ಪಣೆ ನಡೆಯುವುದರಿಂದ ಸೆ.22 ರಂದು ಊರ ಹಾಗೂ ಪರವೂರ ಭಕ್ತಾದಿಗಳಿಂದ ವಸ್ತುರೂಪದ ದೇಣಿಗೆ ಸಮರ್ಪಣೆ ನಡೆಯಲಿದೆ. ಅ.1 ಮತ್ತು 2ರಂದು ಬೆಳಗ್ಗೆಯಿಂದ ರಾತ್ರಿ ತನಕ ವಾಹನ ಪೂಜೆ ನಡೆಸಲಾಗುವುದು. ಅ.1ರಂದು ರಾತ್ರಿ ಕು. ಅರ್ಚನಾ ಇವರಿಂದ ಭರತನಾಟ್ಯ ಕಾರ್ಯಕ್ರಮ ಜರುಗಲಿರುವುದು. ಅ.2ರಂದು ವಿಜಯ ದಶಮಿಯಂದು ಬೆಳಗ್ಗೆಯಿಂದ ಮಧ್ಯಾಹ್ನ ತನಕ ಅಕ್ಷರಾಭ್ಯಾಸ ನಡೆಸಲಾಗುವುದು. ಪ್ರತಿ ದಿನ ಸಂಜೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಸೇವೆ ನಡೆಯಲಿದೆ. ಫೆ.6, 2026 ರಂದು ಮಾಘ ಕೃಷ್ಣ ಪಂಚಮೀಯಂದು ಶತಚಂಡಿಕಾ ಯಾಗ ನೆರವೇರಲಿದೆ.

Related posts

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ: ಹೊರೆಕಾಣಿಕೆ ಸಮರ್ಪಣೆ, ತಂತ್ರಿಗಳ ಆಗಮನ, ಧ್ವಜಾರೋಹಣ

Suddi Udaya

ಸಿ.ವಿ.ಸಿ ಹಾಲ್ ವಸತಿ ವಿದ್ಯಾರ್ಥಿನಿ ನಿಲಯದ ಸಮಸ್ಯೆಗೆ ಸಿಕ್ಕಿತು ವಾರ್ಡನ್ ನಿಯೋಜನೆ ಬಳಿಕ ಪರಿಹಾರ

Suddi Udaya

ಕಲ್ಮoಜದಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಕುವೆಟ್ಟು ಗ್ರಾ.ಪಂ ಸದಸ್ಯೆ ಮೋಹಿನಿ ಅಸೌಖ್ಯದಿಂದ ನಿಧನ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ., ಪಟ್ಟಣ ಪಂಚಾಯತ್ ಸದಸ್ಯರ ಮತ್ತು ಕಾರ್ಯಕರ್ತರ ಸಭೆ

Suddi Udaya

ಚಾತುರ್ಮಾಸ್ಯ ವೃತಾಚಾರಣೆ, ಮಹಾಮಂಡಲೇಶ್ವರ ಕನ್ಯಾಡಿ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್

Suddi Udaya
error: Content is protected !!