September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.22-ಅ.1: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

ಶಿಬಾಜೆ: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಸೆ.22ರಿಂದ ಅ.1ರವರೆಗೆ ಪ್ರತಿ ವರ್ಷದಂತೆ ದೇವಳದಲ್ಲಿ ನವರಾತ್ರಿ ಉತ್ಸವವು ವಿಜೃಂಭಣೆಯಿಂದ ಜರುಗಲಿದೆ.

ಪ್ರತಿದಿನ ಬೆಳಗ್ಗೆ 8ಕ್ಕೆ ಬೆಳಗ್ಗಿನ ಪೂಜೆ, ಮಧ್ಯಾಹ್ನ ಮಹಾಮಂಗಳಾರತಿ, ಪ್ರಸಾದ ವಿತರಣೆ, ನಂತರ ಭೋಜನ ಪ್ರಸಾದ, ರಾತ್ರಿ ಮಹಾಮಂಗಳಾರತಿ ನಂತರ ಭೋಜನ ಪ್ರಸಾದ ನೆರವೇರಲಿರುವುದು. ದೇವಳದಲ್ಲಿ ನವರಾತ್ರಿ ದಿನಗಳಲ್ಲಿ ವಿಶೇಷ ಅನ್ನಸಂತರ್ಪಣೆ ನಡೆಯುವುದರಿಂದ ಸೆ.22 ರಂದು ಊರ ಹಾಗೂ ಪರವೂರ ಭಕ್ತಾದಿಗಳಿಂದ ವಸ್ತುರೂಪದ ದೇಣಿಗೆ ಸಮರ್ಪಣೆ ನಡೆಯಲಿದೆ. ಅ.1 ಮತ್ತು 2ರಂದು ಬೆಳಗ್ಗೆಯಿಂದ ರಾತ್ರಿ ತನಕ ವಾಹನ ಪೂಜೆ ನಡೆಸಲಾಗುವುದು. ಅ.1ರಂದು ರಾತ್ರಿ ಕು. ಅರ್ಚನಾ ಇವರಿಂದ ಭರತನಾಟ್ಯ ಕಾರ್ಯಕ್ರಮ ಜರುಗಲಿರುವುದು. ಅ.2ರಂದು ವಿಜಯ ದಶಮಿಯಂದು ಬೆಳಗ್ಗೆಯಿಂದ ಮಧ್ಯಾಹ್ನ ತನಕ ಅಕ್ಷರಾಭ್ಯಾಸ ನಡೆಸಲಾಗುವುದು. ಪ್ರತಿ ದಿನ ಸಂಜೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಸೇವೆ ನಡೆಯಲಿದೆ. ಫೆ.6, 2026 ರಂದು ಮಾಘ ಕೃಷ್ಣ ಪಂಚಮೀಯಂದು ಶತಚಂಡಿಕಾ ಯಾಗ ನೆರವೇರಲಿದೆ.

Related posts

ಉರುವಾಲುನಲ್ಲಿ ಗುಡ್ಡ ಕುಸಿತ : ಮನೆ ಹಾಗೂ ಕೃಷಿಗೆ ಹಾನಿ

Suddi Udaya

ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗನಗದು ದೋಚಿ ಪರಾರಿ

Suddi Udaya

ಬೆಳ್ತಂಗಡಿ ಆನ್ ಸಿಲ್ಕ್ ಆಷಾಢ ಬಂಪರ್ ಸೇಲ್ ಕೆಲ ದಿನಗಳವರೆಗೆ ವಿಸ್ತರಣೆ: ಶೇ.50 ಖರೀದಿಗಾಗಿ ಜನರ ಬಾರಿ ಬೆಂಬಲ

Suddi Udaya

ಬೆಳ್ತಂಗಡಿ ಕ್ಯಾಂಪ್ಕೊ ಸಾಂತ್ವನ ಯೋಜನೆಯಡಿ ಧನಸಹಾಯ ಹಸ್ತಾಂತರ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮುಂಡಾಜೆ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಬಳಂಜ: ನಾಲ್ಕೂರು ನಿವಾಸಿ ಲೀಲಾವತಿ ನಿಧನ

Suddi Udaya
error: Content is protected !!