25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.22-ಅ.2: ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಮಹೋತ್ಸವ

ಲಾಯಿಲ: ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಮಹೋತ್ಸವವು ಸೆ. 22 ರಿಂದ ಅ.2ರವರೆಗೆ ವಿಜೃಂಭಣೆಯಿಂದ ಜರುಗಲಿದೆ.


ನವರಾತ್ರಿಯ ಎಲ್ಲಾ ದಿನಗಳಲ್ಲಿ ರಾತ್ರಿ ವಿವಿಧ ಆಹ್ವಾನಿತ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನೆರವೇರಲಿದೆ.


ಸೆ.22ರಂದು ಬೆಳಿಗ್ಗೆ ಗಣಹೋಮ, ಪಂಚಾಮೃತಾಭಿಷೇಕ, ತೋರಣ ಮುಹೂರ್ತ, ತೆನೆ ಮುಹೂರ್ತ ಜರುಗಲಿದೆ.
ಸೆ.27 ರಂದು ಬೆಳಿಗ್ಗೆ ನವಕ ಪ್ರಧಾನ ಕಲಶಾಭಿಷೇಕ, ನಾಗ-ನಾಗಬ್ರಹ್ಮ ಸಾನಿಧ್ಯದಲ್ಲಿ ನಾಗತಂಬಿಲ, ಸಂಜೆ ಶ್ರೀ ದುರ್ಗಾನಮಸ್ಕಾರ ಪೂಜೆ ಜರಗುವುದು. ಅ.2ರಂದು ಬೆಳಿಗ್ಗೆ ಪಂಚಾಮೃತ ಅಭಿಷೇಕ, ನಾಗ-ನಾಗಬ್ರಹ್ಮ ಸಾನಿಧ್ಯದಲ್ಲಿ ನಾಗತಂಬಿಲ, ಅಶ್ವತ್ಥ ಪೂಜೆ, ನಾಗತಂಬಿಲ, ಪರಿವಾರ ದೈವಗಳಿಗೆ ಪರ್ವ, ಮಧ್ಯಾಹ್ನ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ಸಂಜೆ ರಂಗ ಪೂಜೆ ನೆರವೇರಲಿರುವುದು.

Related posts

ಅಗ್ನಿಪಥ ಯೋಜನೆಯಡಿಯಲ್ಲಿ ಭಾರತೀಯ ಸೇನೆಗೆ ಲಾಯಿಲದ ಬಿ. ಅನಂತ್ ಪೈ ಆಯ್ಕೆ

Suddi Udaya

ಮಂಗಳೂರು ಖಾಝಿ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ

Suddi Udaya

ಬೆಳ್ತಂಗಡಿ ತಾಲೂಕು 19ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

Suddi Udaya

ಕನ್ಯಾಡಿ -2 ಸ.ಉ. ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ “ಸ್ವಾಗತಂ” ವಿಶೇಷ ಕಾರ್ಯಕ್ರಮ

Suddi Udaya

ಆ.23: ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!