25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿ

ಸೆ.22-ಅ.2: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ದುರ್ಗಾದೇವಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ

ಮಿತ್ತಬಾಗಿಲು: ಇತಿಹಾಸ ಪ್ರಸಿದ್ಧ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ದುರ್ಗಾದೇವಿ ದೇವಸ್ಥಾನದಲ್ಲಿ ಸೆ.22ರಿಂದ ಆ.2ರವರೆಗೆ ನವರಾತ್ರಿ ಪೂಜೆಯು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರುಗಲಿದೆ.


ಧಾರ್ಮಿಕ ಕಾರ್ಯಕ್ರಮಗಳು: ಸೆ.30ರಂದು ಪೂರ್ವಾಹ್ನ ಶ್ರೀದೇವಿಯ ಪ್ರೀತ್ಯರ್ಥವಾಗಿ ದೇವಳದ ವತಿಯಿಂದ ಚಂಡಿಕಾ ಹೋಮ ಜರಗಲಿರುವುದು. ಅ.1ರಂದು ರಂಗಪೂಜೆಯ ನಂತರ, ಕನ್ನಿಕಾ ಪೂಜೆ, ಬ್ರಾಹ್ಮಣ ಆರಾಧನೆ, ಸುವಾಸಿನಿ ಪೂಜೆ ಪ್ರಸಾದ ವಿತರಣೆ. ತದನಂತರ ಕಲ್ಕುಡ-ಕಲ್ಲುರ್ಟಿ ದೈವಗಳ ನೇಮೋತ್ಸವ ಜರಗಲಿದೆ.


ಸಾಂಸ್ಕೃತಿಕ ಕಾರ್ಯಕ್ರಮ: ಸೆ.26ರಂದು ರಾತ್ರಿ ಶ್ರೀ ದುರ್ಗಾ ಮೆಲೋಡಿಸ್ ನಾವೂರು ಇದರ ಕಲಾವಿದರಿಂದ ಭಕ್ತಿ ಸಂಗೀತ ರಸಮಂಜರಿ ಹಾಗೂ ಹಾಸ್ಯಮಯ ಕಾರ್ಯಕ್ರಮ ಜರುಗಲಿರುವುದು. ಸೆ.27ರಂದು ರಾತ್ರಿ ಪ್ರೀತಿ ವಿ.ಜೆ. ಕಿಲ್ಲೂರು ಹಾಗೂ ಬಳಗದವರಿಂದ ಭರತನಾಟ್ಯ ಕಾರ್ಯಕ್ರಮ ಜರುಗಲಿದೆ.


ಅ.2ರಂದು ರಾತ್ರಿ ಶ್ರೀ ದುರ್ಗಾಪರಮೇಶ್ವರಿ, ದುರ್ಗಾದೇವಿ ಯಕ್ಷಗಾನ ಮಂಡಳಿ ಕೊಲ್ಲಿ ಇವರಿಂದ ಜಿಲ್ಲೆಯ ಪ್ರಸಿದ್ದ ಕಲಾವಿದರ ಕೂಡುವಿಕೆಯಲ್ಲಿ ಬಪ್ಪನಾಡು ಕ್ಷೇತ್ರ ಮಹಾತ್ಮೆÀ್ಮ ಎಂಬ ಯಕ್ಷಗಾನ ಬಯಲಾಟ ಜರುಗಲಿದೆ.

ಶ್ರೀ ಕ್ಷೇತ್ರದಲ್ಲಿ ಊರವರ, ದಾನಿಗಳ ಸಹಕಾರದಿಂದ ನೂತನವಾಗಿ ನಿರ್ಮಾಣಗೊಳ್ಳಲಿರುವ ರಾಜಗೋಪುರದ ನೀಲ ನಕ್ಷೆ

Related posts

ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಳ್ಳತನ ಪ್ರಕರಣವನ್ನು ಪತ್ತೆಹಚ್ಚಲು ಪೊಲೀಸ್ ಇಲಾಖೆಯಲ್ಲಿ ಎಸ್.ಡಿ.ಪಿ.ಐ ಆಗ್ರಹ

Suddi Udaya

ವಾಣಿ ಸೌಹಾರ್ದ ಕೋ -ಆಪರೇಟಿವ್ ಸೊಸೈಟಿಯ ಕಲ್ಲೇರಿ ಶಾಖೆಯಲ್ಲಿ ಪ್ರಥಮ ವರ್ಷಾಚರಣೆಯ ಪ್ರಯುಕ್ತ ಗ್ರಾಹಕರ ಸಮ್ಮಿಲನ ಕಾರ್ಯಕ್ರಮ

Suddi Udaya

ವಿಪರೀತ ಮಳೆಯಿಂದಾಗಿ ತುಂಬಿ ಹರಿಯುತ್ತಿರುವ ಕೊಲ್ಲಿಯ ನೇತ್ರಾವತಿ ನದಿ

Suddi Udaya

ದೇವಿ ಭಗವತಿ ಅಮ್ಮನವರ ಬ್ರಹ್ಮಕಲಶೋತ್ಸವತಂತ್ರಿಗಳಿಗೆ ಪೂರ್ಣಕುಂಭದ ಸ್ವಾಗತ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಬ್ಯಾಂಕ್ ಆಫ್ ಬರೋಡದಿಂದ ಕಪಾಟು ಕೊಡುಗೆ

Suddi Udaya

ಕುತ್ಲೂರು: ಅಡಿಕೆ ಬೆಳೆ ಕೊಳೆರೋಗ ನಿಯಂತ್ರಣ, ಎಲೆಚುಕ್ಕಿ ರೋಗದ ಬಗ್ಗೆ ಹಾಗೂ ಬಯೊಗ್ಯಾಸ್ ಅಳವಡಿಸುವ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!