ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿ

ಸೆ.22-ಅ.2: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ದುರ್ಗಾದೇವಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ

ಮಿತ್ತಬಾಗಿಲು: ಇತಿಹಾಸ ಪ್ರಸಿದ್ಧ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ದುರ್ಗಾದೇವಿ ದೇವಸ್ಥಾನದಲ್ಲಿ ಸೆ.22ರಿಂದ ಆ.2ರವರೆಗೆ ನವರಾತ್ರಿ ಪೂಜೆಯು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರುಗಲಿದೆ.


ಧಾರ್ಮಿಕ ಕಾರ್ಯಕ್ರಮಗಳು: ಸೆ.30ರಂದು ಪೂರ್ವಾಹ್ನ ಶ್ರೀದೇವಿಯ ಪ್ರೀತ್ಯರ್ಥವಾಗಿ ದೇವಳದ ವತಿಯಿಂದ ಚಂಡಿಕಾ ಹೋಮ ಜರಗಲಿರುವುದು. ಅ.1ರಂದು ರಂಗಪೂಜೆಯ ನಂತರ, ಕನ್ನಿಕಾ ಪೂಜೆ, ಬ್ರಾಹ್ಮಣ ಆರಾಧನೆ, ಸುವಾಸಿನಿ ಪೂಜೆ ಪ್ರಸಾದ ವಿತರಣೆ. ತದನಂತರ ಕಲ್ಕುಡ-ಕಲ್ಲುರ್ಟಿ ದೈವಗಳ ನೇಮೋತ್ಸವ ಜರಗಲಿದೆ.


ಸಾಂಸ್ಕೃತಿಕ ಕಾರ್ಯಕ್ರಮ: ಸೆ.26ರಂದು ರಾತ್ರಿ ಶ್ರೀ ದುರ್ಗಾ ಮೆಲೋಡಿಸ್ ನಾವೂರು ಇದರ ಕಲಾವಿದರಿಂದ ಭಕ್ತಿ ಸಂಗೀತ ರಸಮಂಜರಿ ಹಾಗೂ ಹಾಸ್ಯಮಯ ಕಾರ್ಯಕ್ರಮ ಜರುಗಲಿರುವುದು. ಸೆ.27ರಂದು ರಾತ್ರಿ ಪ್ರೀತಿ ವಿ.ಜೆ. ಕಿಲ್ಲೂರು ಹಾಗೂ ಬಳಗದವರಿಂದ ಭರತನಾಟ್ಯ ಕಾರ್ಯಕ್ರಮ ಜರುಗಲಿದೆ.


ಅ.2ರಂದು ರಾತ್ರಿ ಶ್ರೀ ದುರ್ಗಾಪರಮೇಶ್ವರಿ, ದುರ್ಗಾದೇವಿ ಯಕ್ಷಗಾನ ಮಂಡಳಿ ಕೊಲ್ಲಿ ಇವರಿಂದ ಜಿಲ್ಲೆಯ ಪ್ರಸಿದ್ದ ಕಲಾವಿದರ ಕೂಡುವಿಕೆಯಲ್ಲಿ ಬಪ್ಪನಾಡು ಕ್ಷೇತ್ರ ಮಹಾತ್ಮೆÀ್ಮ ಎಂಬ ಯಕ್ಷಗಾನ ಬಯಲಾಟ ಜರುಗಲಿದೆ.

ಶ್ರೀ ಕ್ಷೇತ್ರದಲ್ಲಿ ಊರವರ, ದಾನಿಗಳ ಸಹಕಾರದಿಂದ ನೂತನವಾಗಿ ನಿರ್ಮಾಣಗೊಳ್ಳಲಿರುವ ರಾಜಗೋಪುರದ ನೀಲ ನಕ್ಷೆ

Related posts

ರಕ್ತೇಶ್ವರಿಪದವು ಭಜನಾ ಮಂಡಳಿ ವತಿಯಿಂದ ನಗರ ಭಜನೆಗೆ ಚಾಲನೆ

Suddi Udaya

ವೇಣೂರು ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ವಿಮ್ ನಿಯೋಗ

Suddi Udaya

ಕಳಿಯ ಕಲ್ಪವೃಕ್ಷ ಜ್ಞಾನವಿಕಾಸ ಕೇಂದ್ರ: ಜಾಗೃತಿ ಕಾರ್ಯಕ್ರಮ

Suddi Udaya

ಕಲ್ಮಂಜ: ಪಲ್ಕೆ ಆಚಾರಿಬೆಟ್ಟು ನಿವಾಸಿ ಕಲ್ಯಾಣಿ ನಿಧನ

Suddi Udaya

ಇಂದು (ಆ.28) ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ರಾಜ್ಯಪಾಲರ ಮೇಲೆ ಪ್ರಚೋದನಕಾರಿ ಹೇಳಿಕೆ ನೀಡಿರುವ ಐವನ್ ಡಿ ಸೋಜಾ ಮೇಲೆ ದೂರು ದಾಖಲಿಸಲು ಒತ್ತಾಯಿಸಿ ರಸ್ತೆ ತಡೆ- ಬೃಹತ್ ಪ್ರತಿಭಟನೆ

Suddi Udaya

ಕಕ್ಕಿಂಜೆ ಮಾಂಡೋವಿ ಮೋಟಾರ್ಸ್‌ನಲ್ಲಿ ನ್ಯೂ ಬ್ರೆಝಾ ಕಾರು ಬಿಡುಗಡೆ

Suddi Udaya
error: Content is protected !!