July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿ

ಸೆ.22-ಅ.2: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ದುರ್ಗಾದೇವಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ

ಮಿತ್ತಬಾಗಿಲು: ಇತಿಹಾಸ ಪ್ರಸಿದ್ಧ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ದುರ್ಗಾದೇವಿ ದೇವಸ್ಥಾನದಲ್ಲಿ ಸೆ.22ರಿಂದ ಆ.2ರವರೆಗೆ ನವರಾತ್ರಿ ಪೂಜೆಯು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರುಗಲಿದೆ.


ಧಾರ್ಮಿಕ ಕಾರ್ಯಕ್ರಮಗಳು: ಸೆ.30ರಂದು ಪೂರ್ವಾಹ್ನ ಶ್ರೀದೇವಿಯ ಪ್ರೀತ್ಯರ್ಥವಾಗಿ ದೇವಳದ ವತಿಯಿಂದ ಚಂಡಿಕಾ ಹೋಮ ಜರಗಲಿರುವುದು. ಅ.1ರಂದು ರಂಗಪೂಜೆಯ ನಂತರ, ಕನ್ನಿಕಾ ಪೂಜೆ, ಬ್ರಾಹ್ಮಣ ಆರಾಧನೆ, ಸುವಾಸಿನಿ ಪೂಜೆ ಪ್ರಸಾದ ವಿತರಣೆ. ತದನಂತರ ಕಲ್ಕುಡ-ಕಲ್ಲುರ್ಟಿ ದೈವಗಳ ನೇಮೋತ್ಸವ ಜರಗಲಿದೆ.


ಸಾಂಸ್ಕೃತಿಕ ಕಾರ್ಯಕ್ರಮ: ಸೆ.26ರಂದು ರಾತ್ರಿ ಶ್ರೀ ದುರ್ಗಾ ಮೆಲೋಡಿಸ್ ನಾವೂರು ಇದರ ಕಲಾವಿದರಿಂದ ಭಕ್ತಿ ಸಂಗೀತ ರಸಮಂಜರಿ ಹಾಗೂ ಹಾಸ್ಯಮಯ ಕಾರ್ಯಕ್ರಮ ಜರುಗಲಿರುವುದು. ಸೆ.27ರಂದು ರಾತ್ರಿ ಪ್ರೀತಿ ವಿ.ಜೆ. ಕಿಲ್ಲೂರು ಹಾಗೂ ಬಳಗದವರಿಂದ ಭರತನಾಟ್ಯ ಕಾರ್ಯಕ್ರಮ ಜರುಗಲಿದೆ.


ಅ.2ರಂದು ರಾತ್ರಿ ಶ್ರೀ ದುರ್ಗಾಪರಮೇಶ್ವರಿ, ದುರ್ಗಾದೇವಿ ಯಕ್ಷಗಾನ ಮಂಡಳಿ ಕೊಲ್ಲಿ ಇವರಿಂದ ಜಿಲ್ಲೆಯ ಪ್ರಸಿದ್ದ ಕಲಾವಿದರ ಕೂಡುವಿಕೆಯಲ್ಲಿ ಬಪ್ಪನಾಡು ಕ್ಷೇತ್ರ ಮಹಾತ್ಮೆÀ್ಮ ಎಂಬ ಯಕ್ಷಗಾನ ಬಯಲಾಟ ಜರುಗಲಿದೆ.

ಶ್ರೀ ಕ್ಷೇತ್ರದಲ್ಲಿ ಊರವರ, ದಾನಿಗಳ ಸಹಕಾರದಿಂದ ನೂತನವಾಗಿ ನಿರ್ಮಾಣಗೊಳ್ಳಲಿರುವ ರಾಜಗೋಪುರದ ನೀಲ ನಕ್ಷೆ

Related posts

ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬಿಜೆಪಿ ಬೆಳ್ತಂಗಡಿ ಮಂಡಲ

Suddi Udaya

ಧರ್ಮಸ್ಥಳ : ಮುಂಡ್ರುಪ್ಪಾಡಿ ನಿವಾಸಿ ಹರೀಶ್ ಎಮ್.ಎಲ್. ನಿಧನ

Suddi Udaya

ಎ.30-ಮೇ.3: ಮಾನ್ಯ ಸತ್ಯಚಾವಡಿ ತರವಾಡು ಮನೆಯ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಸಮಾಲೋಚನೆ ಸಭೆ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya

ಸೋಣಂದೂರು: ಕಿರು ಸೇತುವೆ ಕುಸಿತ : ಸಬರಬೈಲು-ಪಡಂಗಡಿ ಸಂಪರ್ಕ ರಸ್ತೆ ಸ್ಥಗಿತ

Suddi Udaya

ಬೆಳ್ತಂಗಡಿ-ಉಪ್ಪಿನಂಗಡಿ ಖಾಸಗಿ ಬಸ್ ನೌಕರರ ಸಂಘದ ಪದಗ್ರಹಣ

Suddi Udaya

ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಅಪರಿಚಿತ ಮೃತದೇಹ ಪತ್ತೆ

Suddi Udaya
error: Content is protected !!