ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಸೆ.22 -ಅ.2 : ಮಲೆಬೆಟ್ಟು ಶ್ರೀ ವನದುರ್ಗಾ ದೇವಾಲಯದಲ್ಲಿ ನವರಾತ್ರಿ ಪೂಜಾ ಮಹೋತ್ಸವ

ಕೊಯ್ಯರು: ಮಲೆಬೆಟ್ಟು ಶ್ರೀ ವನದುರ್ಗಾ ದೇವಾಲಯದಲ್ಲಿ ಸೆ.22 ರಿಂದ ಅ.2 ರವರೆಗೆ ನವರಾತ್ರಿ ಪೂಜಾ ಮಹೋತ್ಸವವು ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಸೆ.22ರಂದು ರಾತ್ರಿ 7-30 ರಿಂದ ಗಣಹೋಮ, ಕುಣಿತ ಭಜನಾ ಕಾರ್ಯಕ್ರಮ, ಮಂಗಳಾರತಿ, ಪ್ರಸಾದ ವಿತರಣೆ , ಸೆ.23 ರಂದು ರಾತ್ರಿ 7-30 ರಿಂದ ನವರಾತ್ರಿ ಪೂಜೆ, ಶ್ರೀ ರಂಗಪೂಜೆ, ಭಜನಾ ಕಾರ್ಯಕ್ರಮ, ರಾತ್ರಿ 9 ಗಂಟೆಗೆ ಮಂಗಳಾರತಿ, ಪ್ರಸಾದ ವಿತರಣೆ, ಸೆ.24 ರಂದು ರಾತ್ರಿ 7-30 ರಿಂದ ನವರಾತ್ರಿ ಪೂಜೆ, ರಂಗಪೂಜೆ, ಗಮಕ ನೃತ್ಯರೂಪಕ, ಮಂಗಳಾರತಿ, ಪ್ರಸಾದ ವಿತರಣೆ . ಸೆ.25 ರಂದು ರಾತ್ರಿ 7-30 ನವರಾತ್ರಿ ಪೂಜೆ, ರಂಗಪೂಜೆ, ಸ್ಯಾಕ್ರೋಫೋನ್ ವಾದನ ನಡೆಯಲಿದೆ. ರಾತ್ರಿ 9 ರಿಂದ ಮಂಗಳಾರತಿ, ಪ್ರಸಾದ ವಿತರಣೆ . ಸೆ.26 ರಂದು ರಾತ್ರಿ 7 ರಿಂದ ಭಜನಾ ಕಾರ್ಯಕ್ರಮ ನಂತರ ಅವನೀಶ ಕೃಷ್ಣ ಕಾಂತಾಜೆ ಮತ್ತು ಶ್ರೀ ವಿಶ್ವೇಶ್ವರ ಭಟ್ ಉಂಡೆಮನೆ ಇವರಿಂದ ಶಂಕರ ಸ್ತೋತ್ರ ವಾಹಿನಿ ರಾತ್ರಿ 9 ಗಂಟೆಗೆ ಮಂಗಳಾರತಿ, ಪ್ರಸಾದ ವಿತರಣೆ .

ಸೆ.27 ರಿಂದ ರಾತ್ರಿ 7-30 ರಿಂದ ನವರಾತ್ರಿ ಪೂಜೆ, ಶ್ರೀ ರಂಗಪೂಜೆ ನಂತರ ಕೆ.ಆರ್ ಸುವರ್ಣ ಕುಮಾರಿ ಮತ್ತು ಮಧೂರು ಮೋಹನ ಕಲ್ಲೂರಾಯ ಗೇರುಕಟ್ಟೆ ಇವರಿಂದ ಹರಿಕಥಾ ಕಾಲಕ್ಷೇಪ ನಡೆಯಲಿದೆ. ರಾತ್ರಿ 9 ಗಂಟೆಗೆ ಮಂಗಳಾರತಿ, ಪ್ರಸಾದ ವಿತರಣೆ. ಸೆ.29 ರಂದು ರಾತ್ರಿ 7-30 ರಿಂದ ನವರಾತ್ರಿ ಪೂಜೆ, ಶ್ರೀ ರಂಗಪೂಜೆ ನಂತರ ಭಜನಾ ಕಾರ್ಯಕ್ರಮ ನಡೆಯಲಿದೆ. ರಾತ್ರಿ 9 ರಿಂದ ಮಂಗಳಾರತಿ, ಪ್ರಸಾದ ವಿತರಣೆ . ಸೆ.30 ರಂದು ರಾತ್ರಿ 7-30 ರಿಂದ ನವರಾತ್ರಿ ಪೂಜೆ, ರಂಗಪೂಜೆ ನಡೆಯಲಿದೆ. ನಂತರ ಭಕ್ತಿಗೀತೆ, ಭಜನಾ ಸ್ಪರ್ಧೆ ನಡೆಯಲಿದೆ. ರಾತ್ರಿ ಗಂಟೆ 9-00 ರಿಂದ ಮಂಗಳಾರತಿ, ಪ್ರಸಾದ ವಿತರಣೆ .

ಅ.1 ರಂದು ರಾತ್ರಿ ಗಂಟೆ 7-30 ರಿಂದ ಭಜನಾ ಕಾರ್ಯಕ್ರಮ, ರಾತ್ರಿ 9-00 ರಿಂದ ಮಂಗಳಾರತಿ, ಪ್ರಸಾದ ವಿತರಣೆ ನಡೆಯಲಿದೆ. ಸೆ.2 ರಂದು ಬೆಳಿಗ್ಗೆ 10 ರಿಂದ ವಿಜಯ ದಶಮಿ, ಚಿತ್ರ ಬಿಡಿಸುವ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಯಕ್ಷಗಾನ ತಾಳಮದ್ದಳೆ- ತ್ರಿಶಂಕು ಸ್ವರ್ಗ ನಡೆಯಲಿದೆ. ಮಧ್ಯಾಹ್ನ 12-30 ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಪ್ರತಿದಿನ ರಾತ್ರಿ ಪ್ರಸಾದ ವಿತರಣೆ ನಂತರ ಅನ್ನಸಂತರ್ಪಣೆ ನಡೆಯಲಿದೆ.

Related posts

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ ; ಯಾವುದೇ ಬಟ್ಟೆ ಖರೀದಿಸಿದರೂ ರೂ.200 ಮಾತ್ರ

Suddi Udaya

ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ರಾಮ ನಗರ ಮೈರಲ್ಕೆ ಓಡಿಲ್ನಾಳ ವರ್ಷಾವಧಿ ಜಾತ್ರೋತ್ಸವ

Suddi Udaya

ಮುಂಡಾಜೆ ಸಹಕಾರ ಸಂಘದ ಚಾರ್ಮಾಡಿ ಪೂರ್ಣಾವಧಿ ಶಾಖೆಯ ಉದ್ಘಾಟನೆ ಸಮಾರಂಭ

Suddi Udaya

ದ.ಕ. ಜಿಲ್ಲಾ ಮತ್ತು ಬೆಳ್ತಂಗಡಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ – ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಅಪ್ರಾಪ್ತ ಬಾಲಕನಿಗೆ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು- ಪ್ರಕರಣ ದಾಖಲು

Suddi Udaya

ಮಲೆಂಗಲ್ಲು ನಿವಾಸಿ, ನಿವೃತ್ತ ಟೆಲಿಫೋನ್ ಎಕ್ಸ್‌ಚೆಂಜರ್‌ ವೈ ಹಾಲೊಜಿ ರಾವ್ ನಿಧನ

Suddi Udaya
error: Content is protected !!