26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಸೆ.22 -ಅ.2 : ಮಲೆಬೆಟ್ಟು ಶ್ರೀ ವನದುರ್ಗಾ ದೇವಾಲಯದಲ್ಲಿ ನವರಾತ್ರಿ ಪೂಜಾ ಮಹೋತ್ಸವ

ಕೊಯ್ಯರು: ಮಲೆಬೆಟ್ಟು ಶ್ರೀ ವನದುರ್ಗಾ ದೇವಾಲಯದಲ್ಲಿ ಸೆ.22 ರಿಂದ ಅ.2 ರವರೆಗೆ ನವರಾತ್ರಿ ಪೂಜಾ ಮಹೋತ್ಸವವು ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಸೆ.22ರಂದು ರಾತ್ರಿ 7-30 ರಿಂದ ಗಣಹೋಮ, ಕುಣಿತ ಭಜನಾ ಕಾರ್ಯಕ್ರಮ, ಮಂಗಳಾರತಿ, ಪ್ರಸಾದ ವಿತರಣೆ , ಸೆ.23 ರಂದು ರಾತ್ರಿ 7-30 ರಿಂದ ನವರಾತ್ರಿ ಪೂಜೆ, ಶ್ರೀ ರಂಗಪೂಜೆ, ಭಜನಾ ಕಾರ್ಯಕ್ರಮ, ರಾತ್ರಿ 9 ಗಂಟೆಗೆ ಮಂಗಳಾರತಿ, ಪ್ರಸಾದ ವಿತರಣೆ, ಸೆ.24 ರಂದು ರಾತ್ರಿ 7-30 ರಿಂದ ನವರಾತ್ರಿ ಪೂಜೆ, ರಂಗಪೂಜೆ, ಗಮಕ ನೃತ್ಯರೂಪಕ, ಮಂಗಳಾರತಿ, ಪ್ರಸಾದ ವಿತರಣೆ . ಸೆ.25 ರಂದು ರಾತ್ರಿ 7-30 ನವರಾತ್ರಿ ಪೂಜೆ, ರಂಗಪೂಜೆ, ಸ್ಯಾಕ್ರೋಫೋನ್ ವಾದನ ನಡೆಯಲಿದೆ. ರಾತ್ರಿ 9 ರಿಂದ ಮಂಗಳಾರತಿ, ಪ್ರಸಾದ ವಿತರಣೆ . ಸೆ.26 ರಂದು ರಾತ್ರಿ 7 ರಿಂದ ಭಜನಾ ಕಾರ್ಯಕ್ರಮ ನಂತರ ಅವನೀಶ ಕೃಷ್ಣ ಕಾಂತಾಜೆ ಮತ್ತು ಶ್ರೀ ವಿಶ್ವೇಶ್ವರ ಭಟ್ ಉಂಡೆಮನೆ ಇವರಿಂದ ಶಂಕರ ಸ್ತೋತ್ರ ವಾಹಿನಿ ರಾತ್ರಿ 9 ಗಂಟೆಗೆ ಮಂಗಳಾರತಿ, ಪ್ರಸಾದ ವಿತರಣೆ .

ಸೆ.27 ರಿಂದ ರಾತ್ರಿ 7-30 ರಿಂದ ನವರಾತ್ರಿ ಪೂಜೆ, ಶ್ರೀ ರಂಗಪೂಜೆ ನಂತರ ಕೆ.ಆರ್ ಸುವರ್ಣ ಕುಮಾರಿ ಮತ್ತು ಮಧೂರು ಮೋಹನ ಕಲ್ಲೂರಾಯ ಗೇರುಕಟ್ಟೆ ಇವರಿಂದ ಹರಿಕಥಾ ಕಾಲಕ್ಷೇಪ ನಡೆಯಲಿದೆ. ರಾತ್ರಿ 9 ಗಂಟೆಗೆ ಮಂಗಳಾರತಿ, ಪ್ರಸಾದ ವಿತರಣೆ. ಸೆ.29 ರಂದು ರಾತ್ರಿ 7-30 ರಿಂದ ನವರಾತ್ರಿ ಪೂಜೆ, ಶ್ರೀ ರಂಗಪೂಜೆ ನಂತರ ಭಜನಾ ಕಾರ್ಯಕ್ರಮ ನಡೆಯಲಿದೆ. ರಾತ್ರಿ 9 ರಿಂದ ಮಂಗಳಾರತಿ, ಪ್ರಸಾದ ವಿತರಣೆ . ಸೆ.30 ರಂದು ರಾತ್ರಿ 7-30 ರಿಂದ ನವರಾತ್ರಿ ಪೂಜೆ, ರಂಗಪೂಜೆ ನಡೆಯಲಿದೆ. ನಂತರ ಭಕ್ತಿಗೀತೆ, ಭಜನಾ ಸ್ಪರ್ಧೆ ನಡೆಯಲಿದೆ. ರಾತ್ರಿ ಗಂಟೆ 9-00 ರಿಂದ ಮಂಗಳಾರತಿ, ಪ್ರಸಾದ ವಿತರಣೆ .

ಅ.1 ರಂದು ರಾತ್ರಿ ಗಂಟೆ 7-30 ರಿಂದ ಭಜನಾ ಕಾರ್ಯಕ್ರಮ, ರಾತ್ರಿ 9-00 ರಿಂದ ಮಂಗಳಾರತಿ, ಪ್ರಸಾದ ವಿತರಣೆ ನಡೆಯಲಿದೆ. ಸೆ.2 ರಂದು ಬೆಳಿಗ್ಗೆ 10 ರಿಂದ ವಿಜಯ ದಶಮಿ, ಚಿತ್ರ ಬಿಡಿಸುವ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಯಕ್ಷಗಾನ ತಾಳಮದ್ದಳೆ- ತ್ರಿಶಂಕು ಸ್ವರ್ಗ ನಡೆಯಲಿದೆ. ಮಧ್ಯಾಹ್ನ 12-30 ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಪ್ರತಿದಿನ ರಾತ್ರಿ ಪ್ರಸಾದ ವಿತರಣೆ ನಂತರ ಅನ್ನಸಂತರ್ಪಣೆ ನಡೆಯಲಿದೆ.

Related posts

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಹಿಂದೂ ಮಲಯಾಳಿ ಕೇರಳ ಓಣಂ ಆಚರಣೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ, ಓಣಂ ವಿಶೇಷ ಪೋಕಳಂ ಭೋಜನ ಕೂಟ

Suddi Udaya

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಮಡಂತ್ಯಾರಿನಲ್ಲಿ ಉಚಿತ ಯೋಗ ಶಿಕ್ಷಣ ಶಿಬಿರ

Suddi Udaya

ಉಜಿರೆ :ಝೆoಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕೃತಿಕ ಫೆಸ್ಟ್ : ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ವಿದ್ಯಾರ್ಥಿ ವನಿಶ್ ಗೆ ಫೋಟೋಗ್ರಫಿ ಸ್ಪರ್ಧೆಯಲ್ಲಿ ಪ್ರಥಮ

Suddi Udaya

ಬೆಳ್ತಂಗಡಿ: ವರ್ಗಾವಣೆಗೊಂಡ ಕುಸುಮಾಧರ ಬಿ ರವರಿಗೆ ತಾಲೂಕು ಪಂಚಾಯತ್ ಹಾಗೂ ವಿವಿಧ ಇಲಾಖೆ ವತಿಯಿಂದ ಬೀಳ್ಕೊಡುಗೆ ಸಮಾರಂಭ

Suddi Udaya

ಮಡಿಕೇರಿಯಲ್ಲಿ ನೂತನ ಮುಳಿಯ ಸಿಲ್ವರಿಯ ಉದ್ಘಾಟನೆ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕ-ರಕ್ಷಕರ ಸಭೆ :

Suddi Udaya
error: Content is protected !!