25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಎಂಟು ವರ್ಷದ ಬಳಿಕ ಸೇವಾ ದರ ಪರಿಷ್ಕರಣೆ

ಬೆಳ್ತಂಗಡಿ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಸೇವಾ ದರ ಪರಿಷ್ಕರಣೆಯು ಎಂಟು ವರ್ಷದ ಬಳಿಕ ಅಲ್ಪ ಪ್ರಮಾಣದಲ್ಲಿ ಕೆಲವು ಸೇವೆಗಳಿಗೆ ಮಾಡಲಾಗಿದೆ. ಈ ಹಿಂದಿನ ವ್ಯವಸ್ಥಾಪನ ಸಮಿತಿಯವರು ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಸಲ್ಲಿಸಿರುವ ತಾ.20.1.2024ರ ಸಭೆಯ ನಿರ್ಣಯದಂತೆ, ಕೆಲವು ಸೇವಾ ದರ ಪಟ್ಟಿಯನ್ನು ಅಲ್ಪಪ್ರಮಾಣದಲ್ಲಿ ಹೆಚ್ಚಿಸಲಾಗಿದೆ.

ಅವಲಕ್ಕಿ ಪಂಚ ಕಜ್ಜಾಯ ರೂ. 70 ರಿಂದ ರೂ. 80, ಕಡ್ಲೆ ಪಂಚ ಕಜ್ಜಾಯ ರೂ.20ರಿಂದ 30 ರೂಪಾಯಿಗೆ, ಅಪ್ಪ ಪ್ರಸಾದ ರೂ.30 ರಿಂದ 40 ರೂಪಾಯಿಗೆ, ಲಾಡು ಪ್ರಸಾದ ರೂ.20 ರಿಂದ 30 ರೂಪಾಯಿವರೆಗೆ ಘನ ವಾಹನ ಪೂಜೆ ರೂ.75 ರಿಂದ 100 ರೂಪಾಯಿ, ಲಘು ವಾಹನ ರೂ.100 ರಿಂದ 200, ಅಷ್ಟೋತ್ತರ ಅರ್ಚನೆ ರೂ.40 ರಿಂದ ರೂ.50 ವರೆಗೆ ಹೆಚ್ಚಿಸಲಾಗಿದೆ.

ಕ್ಷೇತ್ರದಲ್ಲಿ ದೇವರಿಗೆ ನಡೆಯುವ 20 ಸೇವೆಗಳಲ್ಲಿ 8 ಸೇವೆಗಳಿಗೆ ಎಂಟು ವರ್ಷದ ಬಳಿಕ ದರವನ್ನು ಪರಿಷ್ಕರಣೆ ಮಾಡಲಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ಪಾತ್ರ ಇರುವುದಿಲ್ಲ.ಆಗಮ ಪಂಡಿತರು ದೇವಾಳಕ್ಕೆ ಖುದ್ದು ಭೇಟಿ ನೀಡಿ ಸೇವಾರ್ಥ ಪಟ್ಟಿಯನ್ನು ಕೂಲಕುಶವಾಗಿ ಪರಿಶೀಲಿಸಿ, ಕೆಲವು ಮಾರ್ಪಾಡು ಗಳನ್ನು ಮಾಡಿರುವುದರಿಂದ 8 ಸೇವೆಗಳ ದರಗಳ ಪರಿಷ್ಕರಣೆಗೆ ಪ್ರಸ್ತುತ ದೇವಸ್ಥಾನದ ವ್ಯವಸ್ಥಾಪನ ಸಮಿತಿಯು ಅಂಗೀಕರಿಸಿದೆ. ದರ ಪರಿಷ್ಕರಣೆ ಮಾಡಿರುವ ಸೇವೆಗಳ ಸಾಮಾಗ್ರಿಗಳ ವೆಚ್ಚಗಳು ಏರಿಕೆ ಆಗಿರುವುದರಿಂದ ಅನಿವಾರ್ಯವಾಗಿ ಅಲ್ಪ ಪ್ರಮಾಣದಲ್ಲಿ ಸೇವ ದರವನ್ನು ಪರಿಷ್ಕರಣೆ ಮಾಡಲಾಗಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಕೆ ತಿಳಿಸಿದ್ದಾರೆ.

Related posts

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ

Suddi Udaya

ಅಳದಂಗಡಿ: ತೋಟದಲ್ಲಿ ಬೃಹತ್‌ ಗಾತ್ರದ ಕಾಳಿಂಗ ಸರ್ಪ ಪತ್ತೆ

Suddi Udaya

ಬೈಂದೂರಿನಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರ ಪುನಶ್ಚೇತನ ಕೇಂದ್ರ ಸೇವಾಧಾಮಕ್ಕೆ ಭೂಮಿ ಪೂಜೆ

Suddi Udaya

ಬೆಳ್ತಂಗಡಿ ತಾಲೂಕು ಗಾಣಿಗರ ಯಾನೆ ಸಪಲಿಗರ ಸಂಘದ ವಾರ್ಷಿಕ ಮಹಾಸಭೆ: ಸಾಮೂಹಿಕ ಸತ್ಯನಾರಾಯಣ ಪೂಜೆ, ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಸ್ನೇಹಮಯಿ ಕೃಷ್ಣ ವಿರುದ್ಧ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ವೆಂಕಪ್ಪ ಕೋಟ್ಯಾನ್ ರಿಂದ ದೂರು

Suddi Udaya

ಬಿಜೆಪಿ ಜಿಲ್ಲಾ ಎಸ್.ಟಿ ಮೋರ್ಚಾ ವತಿಯಿಂದ ಎಸ್.ಟಿ ಮೋರ್ಚಾ ಅಧ್ಯಕ್ಷ ರಾಜೇಶ್ ರವರ ಮೇಲೆ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ

Suddi Udaya
error: Content is protected !!