23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಎಂಟು ವರ್ಷದ ಬಳಿಕ ಸೇವಾ ದರ ಪರಿಷ್ಕರಣೆ

ಬೆಳ್ತಂಗಡಿ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಸೇವಾ ದರ ಪರಿಷ್ಕರಣೆಯು ಎಂಟು ವರ್ಷದ ಬಳಿಕ ಅಲ್ಪ ಪ್ರಮಾಣದಲ್ಲಿ ಕೆಲವು ಸೇವೆಗಳಿಗೆ ಮಾಡಲಾಗಿದೆ. ಈ ಹಿಂದಿನ ವ್ಯವಸ್ಥಾಪನ ಸಮಿತಿಯವರು ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಸಲ್ಲಿಸಿರುವ ತಾ.20.1.2024ರ ಸಭೆಯ ನಿರ್ಣಯದಂತೆ, ಕೆಲವು ಸೇವಾ ದರ ಪಟ್ಟಿಯನ್ನು ಅಲ್ಪಪ್ರಮಾಣದಲ್ಲಿ ಹೆಚ್ಚಿಸಲಾಗಿದೆ.

ಅವಲಕ್ಕಿ ಪಂಚ ಕಜ್ಜಾಯ ರೂ. 70 ರಿಂದ ರೂ. 80, ಕಡ್ಲೆ ಪಂಚ ಕಜ್ಜಾಯ ರೂ.20ರಿಂದ 30 ರೂಪಾಯಿಗೆ, ಅಪ್ಪ ಪ್ರಸಾದ ರೂ.30 ರಿಂದ 40 ರೂಪಾಯಿಗೆ, ಲಾಡು ಪ್ರಸಾದ ರೂ.20 ರಿಂದ 30 ರೂಪಾಯಿವರೆಗೆ ಘನ ವಾಹನ ಪೂಜೆ ರೂ.75 ರಿಂದ 100 ರೂಪಾಯಿ, ಲಘು ವಾಹನ ರೂ.100 ರಿಂದ 200, ಅಷ್ಟೋತ್ತರ ಅರ್ಚನೆ ರೂ.40 ರಿಂದ ರೂ.50 ವರೆಗೆ ಹೆಚ್ಚಿಸಲಾಗಿದೆ.

ಕ್ಷೇತ್ರದಲ್ಲಿ ದೇವರಿಗೆ ನಡೆಯುವ 20 ಸೇವೆಗಳಲ್ಲಿ 8 ಸೇವೆಗಳಿಗೆ ಎಂಟು ವರ್ಷದ ಬಳಿಕ ದರವನ್ನು ಪರಿಷ್ಕರಣೆ ಮಾಡಲಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ಪಾತ್ರ ಇರುವುದಿಲ್ಲ.ಆಗಮ ಪಂಡಿತರು ದೇವಾಳಕ್ಕೆ ಖುದ್ದು ಭೇಟಿ ನೀಡಿ ಸೇವಾರ್ಥ ಪಟ್ಟಿಯನ್ನು ಕೂಲಕುಶವಾಗಿ ಪರಿಶೀಲಿಸಿ, ಕೆಲವು ಮಾರ್ಪಾಡು ಗಳನ್ನು ಮಾಡಿರುವುದರಿಂದ 8 ಸೇವೆಗಳ ದರಗಳ ಪರಿಷ್ಕರಣೆಗೆ ಪ್ರಸ್ತುತ ದೇವಸ್ಥಾನದ ವ್ಯವಸ್ಥಾಪನ ಸಮಿತಿಯು ಅಂಗೀಕರಿಸಿದೆ. ದರ ಪರಿಷ್ಕರಣೆ ಮಾಡಿರುವ ಸೇವೆಗಳ ಸಾಮಾಗ್ರಿಗಳ ವೆಚ್ಚಗಳು ಏರಿಕೆ ಆಗಿರುವುದರಿಂದ ಅನಿವಾರ್ಯವಾಗಿ ಅಲ್ಪ ಪ್ರಮಾಣದಲ್ಲಿ ಸೇವ ದರವನ್ನು ಪರಿಷ್ಕರಣೆ ಮಾಡಲಾಗಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಕೆ ತಿಳಿಸಿದ್ದಾರೆ.

Related posts

ಕುವೆಟ್ಟು: ಪಯ್ಯೋಟ್ಟು ನಿವಾಸಿ ನಾಣ್ಯಪ್ಪ ಪೂಜಾರಿ ನಿಧನ

Suddi Udaya

ಕಳೆಂಜ ರಾಜೇಶ್ ಎಂ.ಕೆ ಯವರ ಹಲ್ಲೆ ಪ್ರಕರಣ: ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲು: ಸ್ಥಳಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ವಿರೋಧ ಪಕ್ಷದ ನಾಯಕ ಆರ್ ಅಶೋಕ್

Suddi Udaya

ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ :ಮೇ.10 ಚುನಾವಣೆ – ಮೇ. 13: ಮತ ಎಣಿಕೆ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಕುಶಾಲಪ್ಪ ಗೌಡ, ಉಪಾಧ್ಯಕ್ಷರಾಗಿ ಮಹಾಬಲ ಶೆಟ್ಟಿ ಆಯ್ಕೆ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ರೂ. 65ಲಕ್ಷ ಲಾಭ, ಶೇ.15 ಡಿವಿಡೆಂಟ್

Suddi Udaya

ಕುದ್ರೋಳಿ‌ ಕ್ಷೇತ್ರದ ನಿರ್ಮಾತೃ ಬಿ.ಜನಾರ್ಧನ ಪೂಜಾರಿಯವರನ್ನು ಭೇಟಿ ಮಾಡಿದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ‌ ಸದಸ್ಯರು

Suddi Udaya
error: Content is protected !!