23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ ಸ.ಪ್ರೌ. ಶಾಲೆ ಹಾಗೂ ಗ್ರಾಮ ಪಂಚಾಯತ್ ನ ಅರಿವು ಕೇಂದ್ರ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ

ಅರಸಿನಮಕ್ಕಿ : ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ದಾಪುಗಾಲು ಇಡುತ್ತಿದ್ದು ಈ ಕಾಲಘಟ್ಟದಲ್ಲಿ ಮುಖ್ಯವಾಗಿ ವಿದ್ಯಾರ್ಥಿಗಳು ಮತ್ತು ಯುವ ಸಮೂಹ ದುಶ್ಚಟಗಳಿಗೆ ಬಲಿಯಾಗದೆ ಪಂಚೇಂದ್ರಿಯಗಳು ಮತ್ತು ಮನಸ್ಸನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬೇಕು ಎಂದು ಅರಸಿನಮಕ್ಕಿಯ ಅರಿವು ಕೇಂದ್ರದ ಗೌರವ ಸದಸ್ಯ ವೃಷಾಂಕ್ ಖಾಡಿಲ್ಕರ್ ಹೇಳಿದ್ದಾರೆ.

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆ ಹಾಗೂ ಗ್ರಾಮ ಪಂಚಾಯತ್ ನ ಅರಿವು ಕೇಂದ್ರ ಸಹಯೋಗದಲ್ಲಿ ಸೆ. 19ರಂದು ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ’ವ್ಯಸನಮುಕ್ತ ಭಾರತ’ ಕುರಿತು ಉಪನ್ಯಾಸ ನೀಡಿದರು.


2047ಕ್ಕೆ ಭಾರತ ಸರ್ವಕ್ಷೇತ್ರದಲ್ಲೂ ವಿಶ್ವದ ನಂ.1 ರಾಷ್ಟ್ರ ವಾಗಿ ಪರಿವರ್ತನೆಯಾಗಬೇಕೆಂಬ ಗುರಿ ಇದ್ದು ಯುವ ಸಮೂಹ ತಂಬಾಕು ಉತ್ಪನ್ನಗಳು, ಮದ್ಯ, ಡ್ರಗ್ಸ್ ಮೊದಲಾದ ಚಟಗಳಿಗೆ ದಾಸರಾಗಬಾರದು. ವ್ಯಸನಗಳಿಗೆ ಅಂಟಿದರೆ ಮನೆ ಮಂದಿ, ಸಮಾಜ ಹೀಗೇ ಎಲ್ಲರೂ ತಾತ್ಸಾರದಿಂದ ನೋಡಿ ತಿರಸ್ಕರಿಸುತ್ತಾರೆ, ಪ್ರತಿಭೆಗಳು ಕಮರುತ್ತವೆ. ವಿದ್ಯಾರ್ಥಿ ಜೀವನವನ್ನು ಅಮಲುಪದಾರ್ಥ ಮುಕ್ತವಾಗಿಸಿಕೊಂಡರೆ ಮುಂದೆ ಜೀವನ ತುಂಬಾ ಸುಲಭ ಎಂದರು.


ಹದಿಹರೆಯದ ಸಮಸ್ಯೆಗಳ ಕುರಿತು ಮಹಿಳಾ ಲೇಖಕಿ ರೇಣುಕಾ ಸುಧೀರ್ ಮಾತನಾಡಿ, ಹದಿಹರೆಯದಲ್ಲಿ ದೈಹಿಕ, ಮಾನಸಿಕ ಬೆಳವಣಿಗೆಗಳ ಜೊತೆಗೆ ಆತ್ಮವಿಶ್ವಾಸ, ಸ್ನೇಹ, ಆಕರ್ಷಣೆ, ಅತಿ ಆತ್ಮವಿಶ್ವಾಸ, ಖಿನ್ನತೆ, ಕೀಳರಿಮೆ ಹೀಗೆ ಧನಾತ್ಮಕ ಮತ್ತು ಋಣಾತ್ಮಕ ಚಿಂತನೆಗಳೂ ಬೆಳೆಯುತ್ತವೆ. ಅವುಗಳಲ್ಲಿ ನಮ್ಮ ವ್ಯಕ್ತಿತ್ವ ಬೆಳವಣಿಗೆಗೆ ಪೂರಕವಾದುವುಗಳನ್ನು ಮಾತ್ರ ಮಕ್ಕಳು ಸ್ವೀಕರಿಸಬೇಕು. ಶಿಕ್ಷಕರು, ಹಿರಿಯರ ಮಾತು, ಸಲಹೆಗಳನ್ನು ಅಳವಡಿಸಿಕೊಳ್ಳಬೇಕು ಎಂದರು.


ಶಾಲಾ ಮುಖ್ಯಅಧ್ಯಾಪಕರಾದ ಮಂಜುಳಾರವರು ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ಮಾತನಾಡಿದರು.
ಧನಿಕ್ಷಾ ಪ್ರಾರ್ಥಿಸಿ, ಇಂಗ್ಲಿಷ್ ಶಿಕ್ಷಕಿ ಚೇತನಾ ಕುಮಾರಿ ವಂದಿಸಿದರು. ವಿಜ್ಞಾನ ಶಿಕ್ಷಕಿ ಚೇತನಾ ಬಿ.ಎಂ. ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳಾಲು: ಮಾಯಾ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಅಕ್ರಮವಾಗಿ ಮನೆಯಲ್ಲಿ ಜೂಜಾಟ ಆಡುತ್ತಿದ್ದ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳು ವಶ

Suddi Udaya

ನಿಡಿಗಲ್-ಕಲ್ಮಂಜ ಗೆಳೆಯರ ಬಳಗದ ಪದಾಧಿಕಾರಿಗಳ ಆಯ್ಕೆ

Suddi Udaya

ಚಾಲಕನ ನಿಯಂತ್ರಣ ತಪ್ಪಿ ಟಿ.ಟಿ ವಾಹನ ರಸ್ತೆಗೆ ಪಲ್ಟಿ: ಉಜಿರೆಯ ಮಾಲಾಧಾರಿಗಳಿಗೆ ಗಾಯ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ- 2 ರ ಫಲಿತಾಂಶ : ವಾಣಿ ಪ.ಪೂ. ಕಾಲೇಜಿನ ವಿಜ್ಞಾನ ವಿದ್ಯಾರ್ಥಿನಿ ವಿಭಾ ಕೆ.ಆರ್ ರಾಜ್ಯಕ್ಕೆ 6ನೇ ಸ್ಥಾನ

Suddi Udaya
error: Content is protected !!