37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯ ಎಸ್ ಡಿ ಎಂ ಪಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಮಟ್ಟದ ಜೇಸಿಐ ವಿದ್ಯಾರ್ಥಿ ವೇತನ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಇಬ್ಬರು ಪ್ರತಿಭಾವಂತ ವಿದ್ಯಾರ್ಥಿಗಳು ಜೇಸಿಐ ಇಂಡಿಯಾ ಕೊಡುವ ರಾಷ್ಟೀಯ ಮಟ್ಟದ ವಿದ್ಯಾರ್ಥಿ ವೇತನಕ್ಕೆ ಜೇಸಿಐ ಬೆಳ್ತಂಗಡಿ ಮೂಲಕ ಆಯ್ಕೆ ಆಗಿದ್ದಾರೆ ಎಂದು ಅಧ್ಯಕ್ಷೆ ಜೇಸಿ ಆಶಾಲತಾ ಪ್ರಶಾಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಥಮ ಪಿಯುಸಿ ವಿಜ್ಞಾನದ ವಿದ್ಯಾರ್ಥಿನಿ ಮನಶ್ರೀ ಇವಳು ಜೆಸಿಐ ಭಾರತದ ಹೆಣ್ಣು ಮಕ್ಕಳ ಸಬಲೀಕರಣ ಯೋಜನೆ ಅಡಿಯಲ್ಲಿ ತಿಂಗಳಿಗೆ 1000/- ದಂತೆ 10 ತಿಂಗಳು ಮುಂದಿನ 2 ವರ್ಷಗಳ ಅವಧಿಗೆ ಒಟ್ಟು ಇಪ್ಪತ್ತು ಸಾವಿರ ರೂಪಾಯಿ ಹಾಗೂ ಪ್ರಥಮ ವಾಣಿಜ್ಯಶಾಸ್ತ್ರದ ವಿದ್ಯಾರ್ಥಿ ಅಜಿತ್ ಪ್ರಸಾದ್ ಇವರು ಒಂದು ಬಾರಿ ಮೂರು ಸಾವಿರ ರೂಪಾಯಿ ವಿದ್ಯಾರ್ಥಿ ವೇತನ ಪಡೆಯಲಿದ್ದಾರೆ.
ಆಯ್ಕೆ ಆದ ವಿದ್ಯಾರ್ಥಿಗಳನ್ನು ಪ್ರಾಚಾರ್ಯ ಪ್ರಮೋದ್ ಕುಮಾರ್ ಅಭಿನಂದಿಸಿದ್ದಾರೆ.

Related posts

ಬದನಾಜೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಮತದಾನ ಜಾಗೃತಿ ಕಾರ್ಯಾಗಾರ

Suddi Udaya

CSEET ಫಲಿತಾಂಶ: ರಾಜ್ಯದಲ್ಲೇ ಗರಿಷ್ಠ ಸಂಖ್ಯೆಯಲ್ಲಿ ತೇರ್ಗಡೆಗೊಂಡ ಕ್ರಿಯೇಟಿವ್‌ನ ವಿದ್ಯಾರ್ಥಿಗಳು

Suddi Udaya

ಕೊಕ್ಕಡ: ಹೊಲಿಗೆ ತರಬೇತಿ ಕೇಂದ್ರದ ಸಮಾರೋಪ ಸಮಾರಂಭ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣೆ

Suddi Udaya

ಬಳಂಜ ಎಲ್.ಕೆ.ಜಿ ವಿದ್ಯಾರ್ಥಿಗಳಿಗೆ ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಐಡಿ ಕಾರ್ಡ್ ಮತ್ತು ಬೆಲ್ಟ್ ವಿತರಣೆ

Suddi Udaya
error: Content is protected !!