26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯ ಎಸ್ ಡಿ ಎಂ ಪಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಮಟ್ಟದ ಜೇಸಿಐ ವಿದ್ಯಾರ್ಥಿ ವೇತನ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಇಬ್ಬರು ಪ್ರತಿಭಾವಂತ ವಿದ್ಯಾರ್ಥಿಗಳು ಜೇಸಿಐ ಇಂಡಿಯಾ ಕೊಡುವ ರಾಷ್ಟೀಯ ಮಟ್ಟದ ವಿದ್ಯಾರ್ಥಿ ವೇತನಕ್ಕೆ ಜೇಸಿಐ ಬೆಳ್ತಂಗಡಿ ಮೂಲಕ ಆಯ್ಕೆ ಆಗಿದ್ದಾರೆ ಎಂದು ಅಧ್ಯಕ್ಷೆ ಜೇಸಿ ಆಶಾಲತಾ ಪ್ರಶಾಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಥಮ ಪಿಯುಸಿ ವಿಜ್ಞಾನದ ವಿದ್ಯಾರ್ಥಿನಿ ಮನಶ್ರೀ ಇವಳು ಜೆಸಿಐ ಭಾರತದ ಹೆಣ್ಣು ಮಕ್ಕಳ ಸಬಲೀಕರಣ ಯೋಜನೆ ಅಡಿಯಲ್ಲಿ ತಿಂಗಳಿಗೆ 1000/- ದಂತೆ 10 ತಿಂಗಳು ಮುಂದಿನ 2 ವರ್ಷಗಳ ಅವಧಿಗೆ ಒಟ್ಟು ಇಪ್ಪತ್ತು ಸಾವಿರ ರೂಪಾಯಿ ಹಾಗೂ ಪ್ರಥಮ ವಾಣಿಜ್ಯಶಾಸ್ತ್ರದ ವಿದ್ಯಾರ್ಥಿ ಅಜಿತ್ ಪ್ರಸಾದ್ ಇವರು ಒಂದು ಬಾರಿ ಮೂರು ಸಾವಿರ ರೂಪಾಯಿ ವಿದ್ಯಾರ್ಥಿ ವೇತನ ಪಡೆಯಲಿದ್ದಾರೆ.
ಆಯ್ಕೆ ಆದ ವಿದ್ಯಾರ್ಥಿಗಳನ್ನು ಪ್ರಾಚಾರ್ಯ ಪ್ರಮೋದ್ ಕುಮಾರ್ ಅಭಿನಂದಿಸಿದ್ದಾರೆ.

Related posts

ಭಜನೆ, ಭಜಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಿಂದನೆ
ಆರೋಪ: ಆರೋಪಿಯ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

Suddi Udaya

ನೆರಿಯ: ಬೀಜದಡಿ ನಿವಾಸಿ ಗೋಪಿ ನಿಧನ

Suddi Udaya

ಬಳಂಜ ಗ್ರಾ.ಪಂ ಹಾಗೂ ಅರಣ್ಯ ಇಲಾಖೆಯಿಂದ ವನಮಹೋತ್ಸವ ಆಚರಣೆ

Suddi Udaya

ವೇಣೂರು: ಸಾಯಿ ಈಶ್ವರ್ ಗುರೂಜಿಯವರ ದಿವ್ಯ ಸಂಕಲ್ಪದಂತೆ ಸನಾತನ ಹಿಂದೂ ಧರ್ಮದ 300 ಹೆಣ್ಣು ಮಕ್ಕಳಿಗೆ ಉಚಿತ ಮೂಗುತಿ ಧಾರಣೆ

Suddi Udaya

ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಯುವದಿನೋತ್ಸವ ಆಚರಣೆ

Suddi Udaya

ತಲೆಮರೆಸಿಕೊಂಡು ಮೃತಪಟ್ಟ ಆರೋಪಿಯ ಮರಣ ಪತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Suddi Udaya
error: Content is protected !!