September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್ ಡಿ ಎಮ್ ಪಿಯು ಕಾಲೇಜು :ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ’ವನ್ನು ಆಚರಿಸಲಾಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಕಾಲೇಜಿನ ರಾಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥೆ ದಿವ್ಯ ಕುಮಾರಿ ಮಾತನಾಡಿ “ಪ್ರಜಾಪ್ರಭುತ್ವವು ಪ್ರತಿಯೊಬ್ಬರಿಗೂ ಕೊಟ್ಟಿರುವ ಮತದಾನದ ಹಕ್ಕು ಬಹಳ ಅಮೂಲ್ಯವಾದುದು. ಆದರೆ ಚುನಾವಣೆಯಲ್ಲಿ ಭಾಗವಹಿಸದೆ ಇದ್ದರೆ ಉತ್ತಮ ಪ್ರತಿನಿಧಿಯನ್ನು ಆಯ್ಕೆ ಮಾಡಲು ಆಗದೆ ನಮ್ಮ ಹಕ್ಕಿನ ಅಪಮೌಲ್ಯವಾಗುತ್ತದೆ. ಆದುದರಿಂದ ಮತದಾನದ ಹಕ್ಕನ್ನು ಸರಿಯಾಗಿ ಬಳಸಿಕೊಳ್ಳುವ ಗುರಿಯನ್ನು ಪ್ರತಿಯೊಬ್ಬರೂ ಹೊಂದಿರಬೇಕು” ಎಂದು ಹೇಳಿದರು.


ಅಧ್ಯಕ್ಷತೆ ವಹಿಸಿ ಮಾತನಾಡಿದ ಉಪಪ್ರಾಂಶುಪಾಲರಾದ ಡಾ.ರಾಜೇಶ್ ಬಿ “ಪ್ರಜಾಪ್ರಭುತ್ವ ವ್ಯವಸ್ಥೆಯ ಭಾರತದ ಆಡಳಿತ ಪ್ರತಿಯೊಬ್ಬ ಪ್ರಜೆಗಳಿಗೂ ಮಾನ್ಯತೆ ಕೊಡುತ್ತದೆ. ಯುವ ಜನಾಂಗಕ್ಕೆ ಪ್ರಜಾಪ್ರಭುತ್ವದ ಮಹತ್ವ ಕುರಿತು ಸರಿಯಾದ ಮಾಹಿತಿ ಸಿಕ್ಕಿದರೆ ಅದು ಇನ್ನಷ್ಟು ಸದೃಢಗೊಳ್ಳಲು ಸಾಧ್ಯ “ಎಂದು ಹೇಳಿದರು. ವೇದಿಕೆಯಲ್ಲಿ ಎನ್ಎಸ್ಎಸ್ ಯೋಜನಾಧಿಕಾರಿ ವಿಶ್ವನಾಥ್ ಎಸ್ ಸಹ ಯೋಜನಾಧಿಕಾರಿ ಶ್ರೀಮತಿ ಶೋಭಾ ಉಪಸ್ಥಿತರಿದ್ದರು.
ಸ್ವಯಂ ಸೇವಕಿ ಧನ್ಯ ಸ್ವಾಗತಿಸಿ ಮೌಲ್ಯ ವಂದಿಸಿದರು.

Related posts

ಪತಿಯ ವರದಕ್ಷಿಣೆ ಕಿರುಕಳಕ್ಕೆ ಮನನೊಂದು ಪತ್ನಿ ಆತ್ಮಹತ್ಯೆ-ಪತಿ ಅಂಧರ್

Suddi Udaya

ಬೆಳಾಲು ಶ್ರೀ ಕೃಷ್ಣ ಕ್ಲಿನಿಕ್ ಗೆ ಉಚಿತ ಇಸಿಜಿ ಮೆಷಿನ್ ಹಸ್ತಾಂತರ

Suddi Udaya

ಪಿಯುಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ, ಸಹನ ಭಟ್ ರವರಿಗೆ ಸನ್ಮಾನ

Suddi Udaya

ರಾಜ್ಯಮಟ್ಟದ ಡಿಸ್ಕಸ್ ಥ್ರೋ: ಬಳಂಜದ ಸುಷ್ಮಾ ಬಿ ಪೂಜಾರಿ ಪ್ರಥಮ

Suddi Udaya

ಔಷಧ ದಾನಕ್ಕಾಗಿ ಕ್ಷೇತ್ರದಿಂದ ವಾರ್ಷಿಕವಾಗಿ ರೂ.2ರಿಂದ 3 ಕೋಟಿ ರೂ. ಅನುದಾನ: ಡಾ.ಹೆಗ್ಗಡೆ

Suddi Udaya

ತೋಟತ್ತಾಡಿ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಸ್ವಜಾತಿ ಬಾಂಧವರ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!