September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಕೋರಂ ಕೊರತೆ ಹಾಗೂ ಅಧಿಕಾರಿಗಳು ಲೇಟಾಗಿ ಭಾಗವಹಿಸಿದ್ದರಿಂದ ನೆರಿಯ ಗ್ರಾಮಸಭೆ ಮುಂದೂಡಿಕೆ

ನೆರಿಯ: ನೆರಿಯ ಗ್ರಾಮ ತಾಲೂಕಿನಲ್ಲಿ ದೊಡ್ಡ ವ್ಯಾಪ್ತಿಯಿರುವ ಪಂಚಾಯತ್. ಗ್ರಾಮಸಭೆಗೆ ಅಧಿಕಾರಿಗಳು ಬಾರದೆ ಗ್ರಾಮಸಭೆ ಪ್ರಾರಂಭ ಮಾಡುವುದು ಬೇಡ.ಇಲಾಖೆಗಳು ತುಂಬಾ ದುರ್ಬಲವಾಗಿದೆಯ?ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಬರಬೇಕು. ಗಂಟೆ 12 ಕಳೆದರೂ ಬರುವುದಿಲ್ಲ ಯಾಕೇ?ಅವರು ನಾವು ಕಟ್ಟುವ ತೆರಿಗೆ ಹಣದಿಂದ ಸಂಬಳ ಪಡೆಯುವುದು. ಗ್ರಾಮಸಭೆಗೆ ಜನರು ಬರಲಿಲ್ಲ,ಅಧಿಕಾರಿಗಳು ಇಲ್ಲ.ಯಾರಿಗೆ ಗ್ರಾಮಸಭೆ ಎಂದು ಗ್ರಾಮಸ್ಥರು ಪ್ರಶ್ನಿಸಿದರು.

ಮಾರ್ಗದರ್ಶಿ ಅಧಿಕಾರಿಯಾಗಿ ಭಾಗವಹಿಸಿದ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಮುರಳೀಧರ್ ಹಾಗೂ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಸಂತಿ, ಪಿಡಿಓ ಸುಮ ಎ ಎಸ್ ಅವರು ಗ್ರಾಮಸಭೆ ನಡೆಸಲು ಗ್ರಾಮಸ್ಥರ ಮನವೊಲಿಸಲು ಪ್ರಯತ್ನಿಸಿದರು.

ಗ್ರಾಮಸಭೆಗೆ ಅಧಿಕಾರಿಗಳು ಒಬ್ಬೊಬ್ಬರಂತೆ ಲೇಟಾಗಿ ಆಗಮಿಸಿದರು.12 ಗಂಟೆಯ ನಂತರ ಗ್ರಾಮಸಭೆ ಮಾಡುವುದು ಬೇಡಾ ಎಂದು ಹೇಳಿ ಕೆಲವರು ಹೊರ ನಡೆದರು. ಪಂಚಾಯತ್ ಸದಸ್ಯರು ಮತ್ತು ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆಯಿತು.ಕೆಲವು ಗ್ರಾಮಸ್ಥರು ಗ್ರಾಮಸಭೆ ಬೇಕು ಎಂದಾದರೆ, ಇನ್ನೂ ಕೆಲವರು ಗ್ರಾಮಸ್ಥರು ಬರಲಿಲ್ಲ ಬೇಡಾ ಎಂದು ಗೊಂದಲದ ವಾತಾವರಣ ನಿರ್ಮಾಣವಾಯಿತು.

ಕೊನೆಗೆ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಮಾರ್ಗದರ್ಶಿ ಅಧಿಕಾರಿ ಗ್ರಾಮಸಭೆಯನ್ನು ಮುಂದೂಡಿ,ಮುಂದಿನ ದಿನಾಂಕ ತಿಳಿಸಲಾಗುವುದು ಎಂದರು.

Related posts

ಗೇರುಕಟ್ಟೆಯಲ್ಲಿ ಅಪೂರ್ವವಾಗಿ ನಡೆದ ಮಾತೃ ವಂದನಾ ಕಾರ್ಯಕ್ರಮ

Suddi Udaya

ಶಿವಮೊಗ್ಗದಲ್ಲಿ ನಡೆದ ಭಗವದ್ಗೀತಾ ಕಂಠಪಾಠ ಸ್ಪರ್ಧೆ: ಕು. ಅದ್ವಿತಿ ರಾವ್ ದ್ವಿತೀಯ ಸ್ಥಾನ

Suddi Udaya

ಕಲ್ಮಂಜ: ಸಿದ್ದಬೈಲು ಪರಾರಿ ಸ.ಹಿ.ಪ್ರಾ. ಶಾಲೆ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಮಹೋತ್ಸವಕ್ಕೆ ಚಾಲನೆ

Suddi Udaya

ಪಿಲಿಚಾಮುಂಡಿಕಲ್ಲು ಮತ್ತು ಗುರುವಾಯನಕೆರೆ ಶಾಲೆ ಬಳಿ ಟ್ರಾಫಿಕ್ ಪೊಲೀಸ್ ನಿಯೋಜಿಸಿ: ಕುವೆಟ್ಟು ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಒತ್ತಾಯ

Suddi Udaya

ಸುಲ್ಕೇರಿ ಚೈತನ್ಯ ಸಂಜೀವಿನಿ ಮಹಿಳಾ ಒಕ್ಕೂಟ ಹಾಗೂ ಗ್ರಾ.ಪಂ. ಆಶ್ರಯದಲ್ಲಿ ಆಟಿಡೊಂಜಿ ದಿನ

Suddi Udaya
error: Content is protected !!