22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ವಿಕಾಸ ವಿ.ಸ. ಸಂಘದ ಮಹಾಸಭೆ: ಶೇ.15 ಡಿವಿಡೆಂಡ್ ಘೋಷಣೆ , ರೂ. 262.73 ಕೋಟಿ ವ್ಯವಹಾರ

ಬೆಳ್ತಂಗಡಿ: ಭರವಸೆ ಮತ್ತು ನಂಬಿಕೆಯೊಂದಿಗೆ ವಿಕಾಸ ವಿ.ಸ. ಸಂಘವು ಪ್ರಾರಂಭವಾಗಿ 17 ವರ್ಷ ಪೂರೈಸಿ 18ನೇ ವರ್ಷದಲ್ಲಿ ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿದೆ. ಪ್ರಸಕ್ತ ಸಾಲಿನಲ್ಲಿ ೨೬೨.೭೩ ಕೋಟಿ ರೂ. ವ್ಯವಹಾರ ನಡೆಸಿ ೩೨.೨೧ ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಎಲೋಸಿಯಸ್ ಡಿಸೋಜ ಹೇಳಿದರು.

ಗುರುವಾಯನಕೆರೆ ವಿಕಾಸ ಸದನ ಸಭಾಭವನದಲ್ಲಿ ಸೆ.20 ರಂದು ಗುರುವಾಯನಕೆರೆ ವಿಕಾಸ ವಿವಿಧೋದ್ದೇಶ ಸಹಕಾರಿ ಸಂಘದ ೨೦೨೪-೨೫ನೇ ಸಾಲಿನ ವಾರ್ಷಿಕ ಮಹಾಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸಂಘವು ೪೯.೬೮ ಕೋ.ರೂ. ಠೇವಣಿ ಹೊಂದಿದ್ದು, ೪೬.೨೩ ಕೋ.ರೂ. ಸಾಲ ವಿತರಿಸಲಾಗಿದೆ. ಕಳೆದ ಸಾಲಿನಿಂದ ಸಾಲ ವಸೂಲಿ ಸಹಿತ ಲಾಭದಲ್ಲಿ ಹೆಚ್ಚಳವಾಗಿದೆ. ಸಂಘವು ಬೆಳ್ತಂಗಡಿ ಪೇಟೆಯಲ್ಲಿ ಕಟ್ಟಡ ಖರೀದಿಗೆ ೧೦ ಕೋ.ರೂ. ವ್ಯಯಿಸಿದ್ದು, ಅದು ಪ್ರಸಕ್ತ ೨೨ ಕೋ.ರೂ. ಮಿಗಿಲಾಗಿ ಪೇಟೆಧಾರಣೆಯಿದೆ. ಸಂಘವು ವಿದೇಶದಲ್ಲಿ ಉದ್ಯೋಗ ನಡೆಸುವ ಮಂದಿಗೆ ಸಾಲದ ರೂಪದಲ್ಲಿ ನೆರವಾಗಿದೆ ಎಂದು ತಿಳಿಸಿದರು.

ಸಂಘದ ನಿರ್ದೇಶಕರಾದ ಗೋಪಿನಾಥ್ ನಾಯಕ್, ಅಂತೋನಿ ಪಾಸ್, ರಾಘವ ಶೆಟ್ಟಿ ಕೆ., ಗ್ರೆಗೋರಿ ಡಿಮೆಲ್ಲೊ, ಪ್ರವೀಣ್ ಕುಮಾರ್ ಎಚ್.ಎಸ್., ಜಗದೀಶ್, ಶೇಖರ್ ನಾಯ್ಕ್, ದಿನೇಶ್ ನಾಯಕ್ ಬಿ., ಪ್ರವೀಣ್ ಚಂದ್ರ ಮೆಹಂದಳೆ, ಮಮತಾ ಎಂ.ಶೆಟ್ಟಿ ಉಪಸ್ಥಿತರಿದ್ದರು. ಸಂಘದ ಉಪಾಧ್ಯಕ್ಷ ಯೋಗೀಶ್ ಪೈ ಸ್ವಾಗತಿಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿತಾ ಫೆರ್ನಾಂಡಿಸ್ ವಂದಿಸಿದರು. ನಿರ್ದೇಶಕರಾದ ಒಲ್ವಿನ್ ಮೋನಿಸ್ ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಸ್ಥಳ ಪ್ರಾ.ಕೃ.ಪ.ಸ.ಸಂಘದ ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಶ್ರೀನಿವಾಸ ನಾಯ್ಕರಿಗೆ ಬೀಳ್ಕೊಡುಗೆ

Suddi Udaya

ನಾವೂರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಓಟ್ ಚೋರ್ ಗದ್ದಿ ಚೋರ್ ಅಭಿಯಾನ ಹಾಗೂ ಮುಂಡಾಜೆ ಬೂತ್ ಪ್ರಗತಿ ಸಭೆ

Suddi Udaya

ಬೆಳ್ತಂಗಡಿಯಲ್ಲಿ ದಕ್ಷ ಜೈನ್ ರವರ ನೂತನ ವಕೀಲರ ಕಛೇರಿ ಶುಭಾರಂಭ

Suddi Udaya

ಸುಲ್ಕೇರಿ ಮೊಗ್ರು ದ.ಕ.ಜಿ.ಪಂ.ಹಿ.ಪ್ರಾ.ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಡ್ರಾಯಿಂಗ್ ಪುಸ್ತಕ ವಿತರಣೆ

Suddi Udaya

ಭೂಸೇನೆಯಲ್ಲಿ 22 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಎ.ಸಿ.ಪಿ ಹವಾಲ್ದಾರ್ ದೇವಪ್ರಸಾದ್ ಗೌಡ ರವರಿಗೆ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!