22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ ಗ್ರಾ.ಪಂ. ನಲ್ಲಿ ಅರಿವು ಕಾರ್ಯಕ್ರಮ

ತಣ್ಣೀರುಪಂತ : ಸುಗಮ ಸಂಜೀವಿನಿ ಮಹಿಳಾ ಒಕ್ಕೂಟ ಗ್ರಾಮ ಪಂಚಾಯತ್ ತಣ್ಣೀರುಪಂತ , ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ ಬೆಂಗಳೂರು ಇವರ ಕಾರ್ಯನ್ವಯ ಅನ್ನಪೂರ್ಣೇಶ್ವರಿ ಚಾರಿಟಿ ಪೌಂಡೇಶನ್ ಚಿಕ್ಕಮಗಳೂರು ಸಂಯುಕ್ತ ಆಶ್ರಯದಲ್ಲಿ ನವೀಕರಿಸಬಹುದಾದ ಇಂಧನ ಘನತ್ಯಾಜ್ಯ ನಿರ್ವಹಣೆ ಹಾಗೂ ಮಳೆ ನೀರು ಕೊಯ್ಲು” ವಿಷಯದ ಬಗ್ಗೆ ಅರಿವು ಮೂಡಿಸುವ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು.

ಪಂಚಾಯತ್ ಅಧ್ಯಕ್ಷೆ ಹೇಮಾವತಿ , ಉಪಾಧ್ಯಕ್ಷೆ ಪ್ರಿಯ ಮತ್ತು ಪಂಚಾಯತ್ ಮಾಜಿ ಉಪಾಧ್ಯಕ್ಷ ಆಯ್ಯಬ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ರವಣ್ ಕುಮಾರ್ ಕಾರ್ಯಕ್ರಮವನ್ನು ನಿರೂಪಿಸಿದರು. ಅನ್ನಪೂರ್ಣೇಶ್ವರಿ ಚಾರಿಟಿ ಪೌಂಡೇಶನ್ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ವಿನಾಯಕ ಇವರು ಘನತ್ಯಾಜ್ಯ ನಿರ್ವಹಣೆ ಹಾಗೂ ಮಳೆ ನೀರು ಕೊಯ್ಲು ವಿಷಯದ ಕುರಿತು ಮಾಹಿತಿ ನೀಡಿದರು. ಹಾಗೂ ಮಹಾತ್ಮ ಗಾಂಧಿ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯಿಂದ ಆಗಮಿಸಿದ ವಿಕ್ರಂ ರವರು ಸೌರಶಕ್ತಿಯ ಬಗ್ಗೆ ವಿವರಿಸಿದರು. ಅನ್ನಪೂರ್ಣೇಶ್ವರಿ ಸಂಸ್ಥೆಯ ಮುಖ್ಯಸ್ಥೆ ಯಾದ ಸುಷ್ಮಾ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಪಂಚಾಯತ್ ಸದಸ್ಯರು, ಪಂಚಾಯತ್ ಸಿಬ್ಬಂದಿಗಳು, ಒಕ್ಕೂಟದ ಸಿಬ್ಬಂದಿಗಳು ಉಪಸ್ಥಿತರಿದ್ದರು

Related posts

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಮಡoತ್ಯಾರು ನಗರದಲ್ಲಿ ಅಂಗಡಿ ಮುoಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ

Suddi Udaya

ವೇಣೂರು-ಪೆರ್ಮುಡ ಹೊನಲು ಬೆಳಕಿನ 33ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಬಯಲು ಕಂಬಳ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್,ಬುಲ್ ಬುಲ್, ವಿದ್ಯಾರ್ಥಿಗಳಿಂದ ಪೋಷಕರ ದಿನಾಚರಣೆ

Suddi Udaya

ಲಾಯಿಲ: ಬಜಕ್ರೆಸಾಲು ಸೇತುವೆ ಅಡಿ ಎರಡು ಕಾಣಿಕೆ ಡಬ್ಬಗಳು ಒಡೆದ ರೀತಿಯಲ್ಲಿ ಪತ್ತೆ: ಡಬ್ಬಗಳನ್ನು ಒಡೆದು ಹಣ ಕಳವು ಗೈದಿರುವ ಶಂಕೆ

Suddi Udaya

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನದಲ್ಲಿ ಹೆಚ್ಚುವರಿ ಅಂಕ ಹಾಗೂ ರಾಜ್ಯಕ್ಕೆ 5ನೇ ಸ್ಥಾನ

Suddi Udaya

ವೇಣೂರು ಸ. ಪ.ಪೂ. ಕಾಲೇಜಿಗೆ ಹಳೆವಿದ್ಯಾರ್ಥಿಗಳಿಂದ ಹೊಸ ಪ್ರೊಜೆಕ್ಟರ್ ಕೊಡುಗೆ

Suddi Udaya
error: Content is protected !!