25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ ಗ್ರಾ.ಪಂ. ನಲ್ಲಿ ಅರಿವು ಕಾರ್ಯಕ್ರಮ

ತಣ್ಣೀರುಪಂತ : ಸುಗಮ ಸಂಜೀವಿನಿ ಮಹಿಳಾ ಒಕ್ಕೂಟ ಗ್ರಾಮ ಪಂಚಾಯತ್ ತಣ್ಣೀರುಪಂತ , ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ ಬೆಂಗಳೂರು ಇವರ ಕಾರ್ಯನ್ವಯ ಅನ್ನಪೂರ್ಣೇಶ್ವರಿ ಚಾರಿಟಿ ಪೌಂಡೇಶನ್ ಚಿಕ್ಕಮಗಳೂರು ಸಂಯುಕ್ತ ಆಶ್ರಯದಲ್ಲಿ ನವೀಕರಿಸಬಹುದಾದ ಇಂಧನ ಘನತ್ಯಾಜ್ಯ ನಿರ್ವಹಣೆ ಹಾಗೂ ಮಳೆ ನೀರು ಕೊಯ್ಲು” ವಿಷಯದ ಬಗ್ಗೆ ಅರಿವು ಮೂಡಿಸುವ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು.

ಪಂಚಾಯತ್ ಅಧ್ಯಕ್ಷೆ ಹೇಮಾವತಿ , ಉಪಾಧ್ಯಕ್ಷೆ ಪ್ರಿಯ ಮತ್ತು ಪಂಚಾಯತ್ ಮಾಜಿ ಉಪಾಧ್ಯಕ್ಷ ಆಯ್ಯಬ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ರವಣ್ ಕುಮಾರ್ ಕಾರ್ಯಕ್ರಮವನ್ನು ನಿರೂಪಿಸಿದರು. ಅನ್ನಪೂರ್ಣೇಶ್ವರಿ ಚಾರಿಟಿ ಪೌಂಡೇಶನ್ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ವಿನಾಯಕ ಇವರು ಘನತ್ಯಾಜ್ಯ ನಿರ್ವಹಣೆ ಹಾಗೂ ಮಳೆ ನೀರು ಕೊಯ್ಲು ವಿಷಯದ ಕುರಿತು ಮಾಹಿತಿ ನೀಡಿದರು. ಹಾಗೂ ಮಹಾತ್ಮ ಗಾಂಧಿ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯಿಂದ ಆಗಮಿಸಿದ ವಿಕ್ರಂ ರವರು ಸೌರಶಕ್ತಿಯ ಬಗ್ಗೆ ವಿವರಿಸಿದರು. ಅನ್ನಪೂರ್ಣೇಶ್ವರಿ ಸಂಸ್ಥೆಯ ಮುಖ್ಯಸ್ಥೆ ಯಾದ ಸುಷ್ಮಾ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಪಂಚಾಯತ್ ಸದಸ್ಯರು, ಪಂಚಾಯತ್ ಸಿಬ್ಬಂದಿಗಳು, ಒಕ್ಕೂಟದ ಸಿಬ್ಬಂದಿಗಳು ಉಪಸ್ಥಿತರಿದ್ದರು

Related posts

ಬೆಳ್ತಂಗಡಿ: ಕಲ್ಕಣಿಯಲ್ಲಿ ಧರೆಗುರುಳಿದ ತೆಂಗಿನ ಮರ, ವಿದ್ಯುತ್ ತಂತಿಗೆ ಬಿದ್ದು ಹಾನಿ

Suddi Udaya

ಅಂಡಿಂಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮತ್ತು ಮಲೇರಿಯಾ ಜ್ವರದ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿಗೆ ತಾ.ಪಂ ಇಓ ಭೇಟಿ, ಸ್ಥಳ ಪರಿಶೀಲನೆ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮದ್ದಡ್ಕ ಒಕ್ಕೂಟ ಹಾಗೂ ಶೌರ್ಯ ವಿಪತ್ತು ಘಟಕದಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya
error: Content is protected !!