September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೆಕ್ಕಾರು ಗ್ರಾ.ಪಂ ನಲ್ಲಿ ರೈತರಿಗೆ ಅಣಬೆ ಕೃಷಿ ತರಬೇತಿ

ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿ & ತೆಕ್ಕಾರು ಗ್ರಾಮ ಪಂಚಾಯತ್, ಮತ್ತು ಇಬ್ಬನಿ ಸಂಜೀವಿನಿ ಮಹಿಳಾ ಒಕ್ಕೂಟ ತೆಕ್ಕಾರು, ಕೃಷಿ ಪತ್ತಿನ ಸಹಕಾರಿ ಸಂಘ ತೆಕ್ಕಾರು ಇದರ ಸಹಯೋಗದಲ್ಲಿ ರೈತರಿಗೆ ಅಣಬೆ ಕೃಷಿ ತರಬೇತಿ ಕಾರ್ಯಕ್ರಮವನ್ನು ಸೆ. 18 ರಂದು ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಅಬ್ದುಲ್ ರಜಾಕ್ ವಹಿಸಿದ್ದರು. ಉಷಾ ಮತ್ತು ದಿವ್ಯ ರವರ ಪ್ರಾರ್ಥನೆಯೊಂದಿಗೆ ಸಭೆಯನ್ನು ಪ್ರಾರಂಭಿಸಲಾಯಿತು. ಅಭಿವೃದ್ಧಿ ಅಧಿಕಾರಿಯಾಗಿ ಸುಮಯ್ಯರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಸಭೆಯಲ್ಲಿ ಕೃಷಿಪತ್ತಿನ ಕಾರ್ಯನಿರ್ವಾಹಕ ಅಧಿಕಾರಿ ರಾಘವೇಂದ್ರ ಅಡಪ, ನಿರ್ದೇಶಕರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು, ಇಬ್ಬನಿ ಸಂಜೀವಿನಿ ಒಕ್ಕೂಟದ ಕಾರ್ಯದರ್ಶಿ, ಗ್ರಾಮ ಪಂಚಾಯಿತಿ ಸದಸ್ಯರು, ಕೃಷಿ ಅಧಿಕಾರಿ ಗಣೇಶ್ ಅಡಿಗ, ಸಂಪನ್ಮೂಲ ವ್ಯಕ್ತಿ ಸುಲೇಮಾನ್ ಬೆಳಾಲ್ ಉಪಸ್ಥಿತರಿದ್ದರು, ಪವಿತ್ರ ಸ್ವಾಗತಿಸಿದರು. ಉದ್ಘಾಟಕರಾಗಿ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಸುಮಯ್ಯ ಮಾತನಾಡಿದರು ಹಾಗೂ ಕೃಷಿ ಅಧಿಕಾರಿ ಗಣೇಶ ಆಡಿಗರವರು ಕೃಷಿಯ ಬಗ್ಗೆ, ಕೃಷಿ ಇಲಾಖೆಯಲ್ಲಿ ದೊರೆಯುವ ಸೌಲಭ್ಯದ ಬಗ್ಗೆ, ತರಬೇತಿ ಬಗ್ಗೆ ಮಾಹಿತಿ ನೀಡಿದರು.

ಸಭೆಯ ಅಧ್ಯಕ್ಷ ಅಬ್ದುಲ್ ರಜಾಕ್ ಮಾತನಾಡಿ ಇನ್ನು ಮುಂದಿನ ದಿನಗಳಲ್ಲಿ ಅಗರಬತ್ತಿ, ತಯಾರಿಕೆ ಮೇಣದ ಬತ್ತಿ ತಯಾರಿಕೆ, ಗ್ರಹಲಕ್ಷ್ಮಿ ಫಲಾನುಭವಿಗಳು ಸಂಜೀವಿನಿ ಸಂಘ ಸೇರುವ ಬಗ್ಗೆ ಮಾಹಿತಿ ನೀಡಿದರು. ಸಂಪನ್ಮೂಲ ವ್ಯಕ್ತಿ ಸುಲೈಮಾನ್ ಬೆಳಾಲು ಸಂಪೂರ್ಣ ಮಾಹಿತಿ ನೀಡಿದರು ಹಾಗೂ ಪ್ರತ್ಯಕ್ಷಿಕೆಯನ್ನು ನಡೆಸಿಕೊಟ್ಟರು, ಹಾಗೂ ಜೇನು ಕೃಷಿಯ ಬಗ್ಗೆ ಮಾಹಿತಿ ನೀಡಿದರು. ಸುಲಭ ಮಾರುಕಟ್ಟೆ ಬಗ್ಗೆ ಮಾಹಿತಿ ನೀಡಿದರು. ಉಷಾ ಕಾರ್ಯಕ್ರಮ ನಿರೂಪಣೆ ಮಾಡಿದರು. ಪಶು ಸಖಿ ಧನ್ಯವಾದವಿತ್ತರು.

Related posts

ಸುನ್ನಿ ಕೋರ್ಡಿನೇಷನ್ ವತಿಯಿಂದ ಎಸ್‌ಐಆರ್ ಮಾಹಿತಿ ಕಾರ್ಯಾಗಾರ

Suddi Udaya

ಕೊಕ್ಕಡ ಅಮೃತ ಗ್ರಾ. ಪಂ. ಹಾಗೂ ಅಮೃತ ಸರೋವರದಲ್ಲಿ ಸ್ವಾತಂತ್ರೋತ್ಸವ ಆಚರಣೆ: ನಿವೃತ್ತ ಸೈನಿಕರಿಗೆ ಗೌರವಾರ್ಪಣೆ

Suddi Udaya

ಹುಟ್ಟೂರು ತ್ಯಜಿಸಿ ಹೋಗಿದ್ದವನಿಗೆ ಮತ್ತೆ ಮರುಕಳಿಸಿದ ಬಾಲ್ಯದ ನೆನಪು..! 26 ವರ್ಷದ ಬಳಿಕ ಒಂದಾದ ಕರುಳ ಕುಡಿ….

Suddi Udaya

ಗ್ರಾಮಕರಣಿಕ ಮಹೇಶ್ ಗೆ ಜೈಲು ಶಿಕ್ಷೆ

Suddi Udaya

ಮೂರು ದಿನದ ಅಂತರದಲ್ಲಿ ಸಹೋದರರಿಬ್ಬರ ಸಾವು

Suddi Udaya

9/11 ಅರ್ಜಿಗಳನ್ನು ಕಾಲ ಮಿತಿಯಲ್ಲಿ ಇತ್ಯರ್ಥಕ್ಕೆ ತಾಲೂಕಿಗೆ ಮೂರು ದಿನಗಳ ಅಧಿಕಾರಿಗಳ ಭೇಟಿಗೆ ಉಸ್ತುವಾರಿ ಸಚಿವರ ಸೂಚನೆ

Suddi Udaya
error: Content is protected !!