25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

ಪಡಂಗಡಿ: ಪಡಂಗಡಿ ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷ ವಸಂತ ಪೂಜಾರಿ ಅಧ್ಯಕ್ಷತೆಯಲ್ಲಿ ಸೆ.20ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಬೆಳ್ತಂಗಡಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಾಜೇಂದ್ರ ಕೃಷ್ಣ ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು. ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಇತ್ತೀಚಿಗೆ ನಿವೃತ್ತಿಗೊಂಡ ಅಂಗನವಾಡಿ ಕಾರ್ಯಕರ್ತೆ ಪ್ರೇಮಾ ಡಿ. ಹಾಗೂ ನಿವೃತ್ತಿಗೊಳ್ಳಲಿರುವ ಆಶಾ ಕಾರ್ಯಕರ್ತೆ ಚಿನ್ನಮ್ಮ ರವರನ್ನು ಗೌರವಿಸಲಾಯಿತು. 2024-25ನೇ ಶೈಕ್ಷಣಿಕ ಸಾಲಿನ ಪರೀಕ್ಷೆಯಲ್ಲಿ ಪಡಂಗಡಿ ಪ್ರೌಢ ಶಾಲೆಗೆ ಪ್ರಥಮ, ದ್ವಿತೀಯ ಸ್ಥಾನ ಬಂದ ಲಿಖಿತಾ ಹಾಗೂ ಸುಶಾಂತ್ ರವರನ್ನು ಸನ್ಮಾನಿಸಿ ಪ್ರೌಢ ಶಾಲಾ ಶಿಕ್ಷಕರನ್ನು ಗೌರವಿಸಲಾಯಿತು. ಶೇ.25 ರ ನಿಧಿಯ ಧನ ಸಹಾಯವನ್ನು ಫಲಾನುಭವಿಗಳಿಗೆ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾ.ಪಂ. ಉಪಾಧ್ಯಕ್ಷೆ ವಸಂತಿ, ಸದಸ್ಯರಾದ ಸಂತೋಷ್ ಕುಮಾರ್ ಜೈನ್, ರಿಚಾರ್ಡ್ ಗೋವಿಯಸ್, ಅಶೋಕ್ ಸಪಲ್ಯ, ಮೀನಾಕ್ಷಿ ಯೋಗೀಶ್ ಕುಮಾರ್ ಡಿ ಪಿ, ಕೃಷ್ಣಪ್ಪ, ಹರೀಶ್ ಕುಮಾರ್, ಆವಸಂತಿ ವಿನೋದ, ಶಕುಂತಲಾ, ಗಾಯತ್ರಿ, ವನಜಾಕ್ಷಿ, ಕವಿತಾ, ಸುಮತಿ ಪಿ., ಶುಭ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂ. ಅಭಿವೃದ್ಧಿ ಅಧಿಕಾರಿ ಸಫನ ಸ್ವಾಗತಿಸಿದರು. ಕಾರ್ಯದರ್ಶಿ ಗಣೇಶ ವರದಿ ಮಂಡಿಸಿ, ವಂದಿಸಿದರು. ಪಂ. ಸಿಬ್ಬಂದಿಗಳು ಪಡಂಗಡಿ, ಗರ್ಡಡಿ ವಾರ್ಡ್ ಸಭೆಯ ನಡವಳಿಯನ್ನು ಮಂಡಿಸಿದರು.

Related posts

ಬೆಳ್ತಂಗಡಿ : ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

Suddi Udaya

ಬೆಳ್ತಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾನಪದ ವೈಭವ

Suddi Udaya

ಒಕಿನಾವನ್ ಶೋಟೋಕಾನ್ ಕರಾಟೆ ಚಾಂಪಿಯನ್‌ಶಿಪ್ : ಬೆಳ್ತಂಗಡಿಯ ಅವಳಿ ಮಕ್ಕಳು ವಿಜೇತರು

Suddi Udaya

ಬೆಳಾಲು: ಸುರುಳಿ ನಿವಾಸಿ ಪದ್ಮಾವತಿ ನಿಧನ

Suddi Udaya

ನೈರುತ್ಯ ಪದವೀಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ‌ ಮತ್ತು ಜೆಡಿಎಸ್ ಜಂಟಿ ಅಭ್ಯರ್ಥಿಗಳ ಜಯ

Suddi Udaya

ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya
error: Content is protected !!