22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.22-ಅ.1: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

ಶಿಬಾಜೆ: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಸೆ.22ರಿಂದ ಅ.1ರವರೆಗೆ ಪ್ರತಿ ವರ್ಷದಂತೆ ದೇವಳದಲ್ಲಿ ನವರಾತ್ರಿ ಉತ್ಸವವು ವಿಜೃಂಭಣೆಯಿಂದ ಜರುಗಲಿದೆ.

ಪ್ರತಿದಿನ ಬೆಳಗ್ಗೆ 8ಕ್ಕೆ ಬೆಳಗ್ಗಿನ ಪೂಜೆ, ಮಧ್ಯಾಹ್ನ ಮಹಾಮಂಗಳಾರತಿ, ಪ್ರಸಾದ ವಿತರಣೆ, ನಂತರ ಭೋಜನ ಪ್ರಸಾದ, ರಾತ್ರಿ ಮಹಾಮಂಗಳಾರತಿ ನಂತರ ಭೋಜನ ಪ್ರಸಾದ ನೆರವೇರಲಿರುವುದು. ದೇವಳದಲ್ಲಿ ನವರಾತ್ರಿ ದಿನಗಳಲ್ಲಿ ವಿಶೇಷ ಅನ್ನಸಂತರ್ಪಣೆ ನಡೆಯುವುದರಿಂದ ಸೆ.22 ರಂದು ಊರ ಹಾಗೂ ಪರವೂರ ಭಕ್ತಾದಿಗಳಿಂದ ವಸ್ತುರೂಪದ ದೇಣಿಗೆ ಸಮರ್ಪಣೆ ನಡೆಯಲಿದೆ. ಅ.1 ಮತ್ತು 2ರಂದು ಬೆಳಗ್ಗೆಯಿಂದ ರಾತ್ರಿ ತನಕ ವಾಹನ ಪೂಜೆ ನಡೆಸಲಾಗುವುದು. ಅ.1ರಂದು ರಾತ್ರಿ ಕು. ಅರ್ಚನಾ ಇವರಿಂದ ಭರತನಾಟ್ಯ ಕಾರ್ಯಕ್ರಮ ಜರುಗಲಿರುವುದು. ಅ.2ರಂದು ವಿಜಯ ದಶಮಿಯಂದು ಬೆಳಗ್ಗೆಯಿಂದ ಮಧ್ಯಾಹ್ನ ತನಕ ಅಕ್ಷರಾಭ್ಯಾಸ ನಡೆಸಲಾಗುವುದು. ಪ್ರತಿ ದಿನ ಸಂಜೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಸೇವೆ ನಡೆಯಲಿದೆ. ಫೆ.6, 2026 ರಂದು ಮಾಘ ಕೃಷ್ಣ ಪಂಚಮೀಯಂದು ಶತಚಂಡಿಕಾ ಯಾಗ ನೆರವೇರಲಿದೆ.

Related posts

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಪ್ರಕರಣ ದಾಖಲು

Suddi Udaya

ಕಾಯರ್ತಡ್ಕದಲ್ಲಿ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ಪ್ರಾರಂಭ

Suddi Udaya

ಉಜಿರೆ: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ: ಗೊಲ್ಲ(ಯಾದವ) ಸಮಾಜ ಸೇವಾ ಸಂಘ ಉದ್ಘಾಟನೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಕ್ಯಪದವು: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಗೆ ಶೇ. 100 ಫಲಿತಾಂಶ

Suddi Udaya

ನ.14: ಮಡಂತ್ಯಾರು ಸಹಕಾರಿ ಸಂಘದ ನೇತೃತ್ವದಲ್ಲಿ 72ನೇ ಸಹಕಾರಿ ಸಪ್ತಾಹ, ಪೂರ್ವಭಾವಿ ಸಭೆ

Suddi Udaya
error: Content is protected !!