23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.22-ಅ.1: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

ಶಿಬಾಜೆ: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಸೆ.22ರಿಂದ ಅ.1ರವರೆಗೆ ಪ್ರತಿ ವರ್ಷದಂತೆ ದೇವಳದಲ್ಲಿ ನವರಾತ್ರಿ ಉತ್ಸವವು ವಿಜೃಂಭಣೆಯಿಂದ ಜರುಗಲಿದೆ.

ಪ್ರತಿದಿನ ಬೆಳಗ್ಗೆ 8ಕ್ಕೆ ಬೆಳಗ್ಗಿನ ಪೂಜೆ, ಮಧ್ಯಾಹ್ನ ಮಹಾಮಂಗಳಾರತಿ, ಪ್ರಸಾದ ವಿತರಣೆ, ನಂತರ ಭೋಜನ ಪ್ರಸಾದ, ರಾತ್ರಿ ಮಹಾಮಂಗಳಾರತಿ ನಂತರ ಭೋಜನ ಪ್ರಸಾದ ನೆರವೇರಲಿರುವುದು. ದೇವಳದಲ್ಲಿ ನವರಾತ್ರಿ ದಿನಗಳಲ್ಲಿ ವಿಶೇಷ ಅನ್ನಸಂತರ್ಪಣೆ ನಡೆಯುವುದರಿಂದ ಸೆ.22 ರಂದು ಊರ ಹಾಗೂ ಪರವೂರ ಭಕ್ತಾದಿಗಳಿಂದ ವಸ್ತುರೂಪದ ದೇಣಿಗೆ ಸಮರ್ಪಣೆ ನಡೆಯಲಿದೆ. ಅ.1 ಮತ್ತು 2ರಂದು ಬೆಳಗ್ಗೆಯಿಂದ ರಾತ್ರಿ ತನಕ ವಾಹನ ಪೂಜೆ ನಡೆಸಲಾಗುವುದು. ಅ.1ರಂದು ರಾತ್ರಿ ಕು. ಅರ್ಚನಾ ಇವರಿಂದ ಭರತನಾಟ್ಯ ಕಾರ್ಯಕ್ರಮ ಜರುಗಲಿರುವುದು. ಅ.2ರಂದು ವಿಜಯ ದಶಮಿಯಂದು ಬೆಳಗ್ಗೆಯಿಂದ ಮಧ್ಯಾಹ್ನ ತನಕ ಅಕ್ಷರಾಭ್ಯಾಸ ನಡೆಸಲಾಗುವುದು. ಪ್ರತಿ ದಿನ ಸಂಜೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಸೇವೆ ನಡೆಯಲಿದೆ. ಫೆ.6, 2026 ರಂದು ಮಾಘ ಕೃಷ್ಣ ಪಂಚಮೀಯಂದು ಶತಚಂಡಿಕಾ ಯಾಗ ನೆರವೇರಲಿದೆ.

Related posts

ನಾಳ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ತಾಳಮದ್ದಳೆ

Suddi Udaya

ಬೆಳ್ತಂಗಡಿ ಕೋಟಿ- ಚೆನ್ನಯ ಕ್ರೀಡಾಕೂಟ : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುಕ್ಕೇಡಿ ನಿಟ್ಟಡೆ ಸಮಗ್ರ ಚಾಂಪಿಯನ್

Suddi Udaya

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕರ ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆ ದ್ವೀತಿಯ ಸ್ಥಾನ

Suddi Udaya

ಮಡಂತ್ಯಾರು ವಿಶ್ವ ಹಿಂದೂ ಪರಿಷತ್ ವತಿಯಿಂದ ಶ್ರೀರಾಮೋತ್ಸವ

Suddi Udaya

ಮಚ್ಚಿನ ಗ್ರಾ.ಪಂ. ನಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ

Suddi Udaya

ಬೆಳಾಲು: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಆಟೋ ಚಾಲಕ ವಿಶ್ವನಾಥ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
error: Content is protected !!