July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿ

ಸೆ.22-ಅ.2: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ದುರ್ಗಾದೇವಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ

ಮಿತ್ತಬಾಗಿಲು: ಇತಿಹಾಸ ಪ್ರಸಿದ್ಧ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ದುರ್ಗಾದೇವಿ ದೇವಸ್ಥಾನದಲ್ಲಿ ಸೆ.22ರಿಂದ ಆ.2ರವರೆಗೆ ನವರಾತ್ರಿ ಪೂಜೆಯು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರುಗಲಿದೆ.


ಧಾರ್ಮಿಕ ಕಾರ್ಯಕ್ರಮಗಳು: ಸೆ.30ರಂದು ಪೂರ್ವಾಹ್ನ ಶ್ರೀದೇವಿಯ ಪ್ರೀತ್ಯರ್ಥವಾಗಿ ದೇವಳದ ವತಿಯಿಂದ ಚಂಡಿಕಾ ಹೋಮ ಜರಗಲಿರುವುದು. ಅ.1ರಂದು ರಂಗಪೂಜೆಯ ನಂತರ, ಕನ್ನಿಕಾ ಪೂಜೆ, ಬ್ರಾಹ್ಮಣ ಆರಾಧನೆ, ಸುವಾಸಿನಿ ಪೂಜೆ ಪ್ರಸಾದ ವಿತರಣೆ. ತದನಂತರ ಕಲ್ಕುಡ-ಕಲ್ಲುರ್ಟಿ ದೈವಗಳ ನೇಮೋತ್ಸವ ಜರಗಲಿದೆ.


ಸಾಂಸ್ಕೃತಿಕ ಕಾರ್ಯಕ್ರಮ: ಸೆ.26ರಂದು ರಾತ್ರಿ ಶ್ರೀ ದುರ್ಗಾ ಮೆಲೋಡಿಸ್ ನಾವೂರು ಇದರ ಕಲಾವಿದರಿಂದ ಭಕ್ತಿ ಸಂಗೀತ ರಸಮಂಜರಿ ಹಾಗೂ ಹಾಸ್ಯಮಯ ಕಾರ್ಯಕ್ರಮ ಜರುಗಲಿರುವುದು. ಸೆ.27ರಂದು ರಾತ್ರಿ ಪ್ರೀತಿ ವಿ.ಜೆ. ಕಿಲ್ಲೂರು ಹಾಗೂ ಬಳಗದವರಿಂದ ಭರತನಾಟ್ಯ ಕಾರ್ಯಕ್ರಮ ಜರುಗಲಿದೆ.


ಅ.2ರಂದು ರಾತ್ರಿ ಶ್ರೀ ದುರ್ಗಾಪರಮೇಶ್ವರಿ, ದುರ್ಗಾದೇವಿ ಯಕ್ಷಗಾನ ಮಂಡಳಿ ಕೊಲ್ಲಿ ಇವರಿಂದ ಜಿಲ್ಲೆಯ ಪ್ರಸಿದ್ದ ಕಲಾವಿದರ ಕೂಡುವಿಕೆಯಲ್ಲಿ ಬಪ್ಪನಾಡು ಕ್ಷೇತ್ರ ಮಹಾತ್ಮೆÀ್ಮ ಎಂಬ ಯಕ್ಷಗಾನ ಬಯಲಾಟ ಜರುಗಲಿದೆ.

ಶ್ರೀ ಕ್ಷೇತ್ರದಲ್ಲಿ ಊರವರ, ದಾನಿಗಳ ಸಹಕಾರದಿಂದ ನೂತನವಾಗಿ ನಿರ್ಮಾಣಗೊಳ್ಳಲಿರುವ ರಾಜಗೋಪುರದ ನೀಲ ನಕ್ಷೆ

Related posts

ಫೆ.14: ಕರಂಬಾರು ಬೊಟ್ಯೆಲ್ಮಾರಿನಲ್ಲಿ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ನೇಮೋತ್ಸವ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕ್ರಿಟಿಕಲ್ ಫಂಡ್ ಚೆಕ್ ವಿತರಣೆ

Suddi Udaya

ಕೊಕ್ಕಡ ಶ್ರೀ ಲಕ್ಷ್ಮೀ ಲೇಡಿಸ್ ಬ್ಯೂಟಿಪಾರ್ಲರ್ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ

Suddi Udaya

ಸೌಜನ್ಯ ಸಾವಿನ ಪ್ರಕರಣದ ತನಿಖೆ ನಡೆಸುವಂತೆ ಎಸ್‌.ಐ.ಟಿ ಅಧಿಕಾರಿಗಳಿಗೆ ದೂರು ನೀಡಿದ ಸೌಜನ್ಯ ತಾಯಿ ಕುಸುಮಾವತಿ

Suddi Udaya

ಮೂಡುಕೋಡಿ ಹಾ.ಉ.ಸ. ಸಂಘ: ಅಧ್ಯಕ್ಷರಾಗಿ ಪುರುಷೋತ್ತಮ ರಾವ್, ಉಪಾಧ್ಯಕ್ಷರಾಗಿ ರಾಕೇಶ್ ಕುಮಾರ್

Suddi Udaya
error: Content is protected !!