ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಸೆ.22 -ಅ.2 : ಮಲೆಬೆಟ್ಟು ಶ್ರೀ ವನದುರ್ಗಾ ದೇವಾಲಯದಲ್ಲಿ ನವರಾತ್ರಿ ಪೂಜಾ ಮಹೋತ್ಸವ

ಕೊಯ್ಯರು: ಮಲೆಬೆಟ್ಟು ಶ್ರೀ ವನದುರ್ಗಾ ದೇವಾಲಯದಲ್ಲಿ ಸೆ.22 ರಿಂದ ಅ.2 ರವರೆಗೆ ನವರಾತ್ರಿ ಪೂಜಾ ಮಹೋತ್ಸವವು ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಸೆ.22ರಂದು ರಾತ್ರಿ 7-30 ರಿಂದ ಗಣಹೋಮ, ಕುಣಿತ ಭಜನಾ ಕಾರ್ಯಕ್ರಮ, ಮಂಗಳಾರತಿ, ಪ್ರಸಾದ ವಿತರಣೆ , ಸೆ.23 ರಂದು ರಾತ್ರಿ 7-30 ರಿಂದ ನವರಾತ್ರಿ ಪೂಜೆ, ಶ್ರೀ ರಂಗಪೂಜೆ, ಭಜನಾ ಕಾರ್ಯಕ್ರಮ, ರಾತ್ರಿ 9 ಗಂಟೆಗೆ ಮಂಗಳಾರತಿ, ಪ್ರಸಾದ ವಿತರಣೆ, ಸೆ.24 ರಂದು ರಾತ್ರಿ 7-30 ರಿಂದ ನವರಾತ್ರಿ ಪೂಜೆ, ರಂಗಪೂಜೆ, ಗಮಕ ನೃತ್ಯರೂಪಕ, ಮಂಗಳಾರತಿ, ಪ್ರಸಾದ ವಿತರಣೆ . ಸೆ.25 ರಂದು ರಾತ್ರಿ 7-30 ನವರಾತ್ರಿ ಪೂಜೆ, ರಂಗಪೂಜೆ, ಸ್ಯಾಕ್ರೋಫೋನ್ ವಾದನ ನಡೆಯಲಿದೆ. ರಾತ್ರಿ 9 ರಿಂದ ಮಂಗಳಾರತಿ, ಪ್ರಸಾದ ವಿತರಣೆ . ಸೆ.26 ರಂದು ರಾತ್ರಿ 7 ರಿಂದ ಭಜನಾ ಕಾರ್ಯಕ್ರಮ ನಂತರ ಅವನೀಶ ಕೃಷ್ಣ ಕಾಂತಾಜೆ ಮತ್ತು ಶ್ರೀ ವಿಶ್ವೇಶ್ವರ ಭಟ್ ಉಂಡೆಮನೆ ಇವರಿಂದ ಶಂಕರ ಸ್ತೋತ್ರ ವಾಹಿನಿ ರಾತ್ರಿ 9 ಗಂಟೆಗೆ ಮಂಗಳಾರತಿ, ಪ್ರಸಾದ ವಿತರಣೆ .

ಸೆ.27 ರಿಂದ ರಾತ್ರಿ 7-30 ರಿಂದ ನವರಾತ್ರಿ ಪೂಜೆ, ಶ್ರೀ ರಂಗಪೂಜೆ ನಂತರ ಕೆ.ಆರ್ ಸುವರ್ಣ ಕುಮಾರಿ ಮತ್ತು ಮಧೂರು ಮೋಹನ ಕಲ್ಲೂರಾಯ ಗೇರುಕಟ್ಟೆ ಇವರಿಂದ ಹರಿಕಥಾ ಕಾಲಕ್ಷೇಪ ನಡೆಯಲಿದೆ. ರಾತ್ರಿ 9 ಗಂಟೆಗೆ ಮಂಗಳಾರತಿ, ಪ್ರಸಾದ ವಿತರಣೆ. ಸೆ.29 ರಂದು ರಾತ್ರಿ 7-30 ರಿಂದ ನವರಾತ್ರಿ ಪೂಜೆ, ಶ್ರೀ ರಂಗಪೂಜೆ ನಂತರ ಭಜನಾ ಕಾರ್ಯಕ್ರಮ ನಡೆಯಲಿದೆ. ರಾತ್ರಿ 9 ರಿಂದ ಮಂಗಳಾರತಿ, ಪ್ರಸಾದ ವಿತರಣೆ . ಸೆ.30 ರಂದು ರಾತ್ರಿ 7-30 ರಿಂದ ನವರಾತ್ರಿ ಪೂಜೆ, ರಂಗಪೂಜೆ ನಡೆಯಲಿದೆ. ನಂತರ ಭಕ್ತಿಗೀತೆ, ಭಜನಾ ಸ್ಪರ್ಧೆ ನಡೆಯಲಿದೆ. ರಾತ್ರಿ ಗಂಟೆ 9-00 ರಿಂದ ಮಂಗಳಾರತಿ, ಪ್ರಸಾದ ವಿತರಣೆ .

ಅ.1 ರಂದು ರಾತ್ರಿ ಗಂಟೆ 7-30 ರಿಂದ ಭಜನಾ ಕಾರ್ಯಕ್ರಮ, ರಾತ್ರಿ 9-00 ರಿಂದ ಮಂಗಳಾರತಿ, ಪ್ರಸಾದ ವಿತರಣೆ ನಡೆಯಲಿದೆ. ಸೆ.2 ರಂದು ಬೆಳಿಗ್ಗೆ 10 ರಿಂದ ವಿಜಯ ದಶಮಿ, ಚಿತ್ರ ಬಿಡಿಸುವ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಯಕ್ಷಗಾನ ತಾಳಮದ್ದಳೆ- ತ್ರಿಶಂಕು ಸ್ವರ್ಗ ನಡೆಯಲಿದೆ. ಮಧ್ಯಾಹ್ನ 12-30 ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಪ್ರತಿದಿನ ರಾತ್ರಿ ಪ್ರಸಾದ ವಿತರಣೆ ನಂತರ ಅನ್ನಸಂತರ್ಪಣೆ ನಡೆಯಲಿದೆ.

Related posts

ಪುದುವೆಟ್ಟು: ಹಿರಿಯ ಪ್ರಗತಿಪರ ಕೃಷಿಕ ಮಾಂಜೀಲು ರಾಧಾಕೃಷ್ಣ ಹೆಬ್ಬಾರ್ ನಿಧನ

Suddi Udaya

ಬೆಳ್ತಂಗಡಿ ಠಾಣೆಯಲ್ಲಿ ಎರಡು ಪ್ರಕರಣ ದಾಖಲು ಹಿನ್ನೆಲೆ: ಶಾಸಕ ಹರೀಶ್ ಪೂಂಜರ‌ ಬಂಧನಕ್ಕೆ ಅವರ ಮನೆಗೆ ಬಂದ ಪೊಲೀಸರು

Suddi Udaya

ಬೈಂದೂರಿನಲ್ಲಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 18ನೇ ವರ್ಧಂತಿ

Suddi Udaya

ಮಂಜೇಶ್ವರ ವಿಧಾನಸಭಾ ಕ್ಷೇತ್ರ ಚುನಾವಣೆ: ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ರವರ ಪರವಾಗಿ ಎಂಎಲ್‌ಸಿ ಕಿಶೋರ್ ಕುಮಾರ್ ಪುತ್ತೂರು ಮತಯಾಚನೆ

Suddi Udaya

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ಕೃಷಿಕ ರತ್ನ” ಗೌರವ ಪ್ರಶಸ್ತಿಗೆ ಆಯ್ಕೆ

Suddi Udaya

ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಭಾರತೀಯ ಮಜ್ದೂರ್ ಸಂಘದಿಂದ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಹಿರಿಯ ಅಧಿಕಾರಿಯವರಿಗೆ ಮನವಿ

Suddi Udaya
error: Content is protected !!