July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಸೆ.22 -ಅ.2 : ಮಲೆಬೆಟ್ಟು ಶ್ರೀ ವನದುರ್ಗಾ ದೇವಾಲಯದಲ್ಲಿ ನವರಾತ್ರಿ ಪೂಜಾ ಮಹೋತ್ಸವ

ಕೊಯ್ಯರು: ಮಲೆಬೆಟ್ಟು ಶ್ರೀ ವನದುರ್ಗಾ ದೇವಾಲಯದಲ್ಲಿ ಸೆ.22 ರಿಂದ ಅ.2 ರವರೆಗೆ ನವರಾತ್ರಿ ಪೂಜಾ ಮಹೋತ್ಸವವು ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಸೆ.22ರಂದು ರಾತ್ರಿ 7-30 ರಿಂದ ಗಣಹೋಮ, ಕುಣಿತ ಭಜನಾ ಕಾರ್ಯಕ್ರಮ, ಮಂಗಳಾರತಿ, ಪ್ರಸಾದ ವಿತರಣೆ , ಸೆ.23 ರಂದು ರಾತ್ರಿ 7-30 ರಿಂದ ನವರಾತ್ರಿ ಪೂಜೆ, ಶ್ರೀ ರಂಗಪೂಜೆ, ಭಜನಾ ಕಾರ್ಯಕ್ರಮ, ರಾತ್ರಿ 9 ಗಂಟೆಗೆ ಮಂಗಳಾರತಿ, ಪ್ರಸಾದ ವಿತರಣೆ, ಸೆ.24 ರಂದು ರಾತ್ರಿ 7-30 ರಿಂದ ನವರಾತ್ರಿ ಪೂಜೆ, ರಂಗಪೂಜೆ, ಗಮಕ ನೃತ್ಯರೂಪಕ, ಮಂಗಳಾರತಿ, ಪ್ರಸಾದ ವಿತರಣೆ . ಸೆ.25 ರಂದು ರಾತ್ರಿ 7-30 ನವರಾತ್ರಿ ಪೂಜೆ, ರಂಗಪೂಜೆ, ಸ್ಯಾಕ್ರೋಫೋನ್ ವಾದನ ನಡೆಯಲಿದೆ. ರಾತ್ರಿ 9 ರಿಂದ ಮಂಗಳಾರತಿ, ಪ್ರಸಾದ ವಿತರಣೆ . ಸೆ.26 ರಂದು ರಾತ್ರಿ 7 ರಿಂದ ಭಜನಾ ಕಾರ್ಯಕ್ರಮ ನಂತರ ಅವನೀಶ ಕೃಷ್ಣ ಕಾಂತಾಜೆ ಮತ್ತು ಶ್ರೀ ವಿಶ್ವೇಶ್ವರ ಭಟ್ ಉಂಡೆಮನೆ ಇವರಿಂದ ಶಂಕರ ಸ್ತೋತ್ರ ವಾಹಿನಿ ರಾತ್ರಿ 9 ಗಂಟೆಗೆ ಮಂಗಳಾರತಿ, ಪ್ರಸಾದ ವಿತರಣೆ .

ಸೆ.27 ರಿಂದ ರಾತ್ರಿ 7-30 ರಿಂದ ನವರಾತ್ರಿ ಪೂಜೆ, ಶ್ರೀ ರಂಗಪೂಜೆ ನಂತರ ಕೆ.ಆರ್ ಸುವರ್ಣ ಕುಮಾರಿ ಮತ್ತು ಮಧೂರು ಮೋಹನ ಕಲ್ಲೂರಾಯ ಗೇರುಕಟ್ಟೆ ಇವರಿಂದ ಹರಿಕಥಾ ಕಾಲಕ್ಷೇಪ ನಡೆಯಲಿದೆ. ರಾತ್ರಿ 9 ಗಂಟೆಗೆ ಮಂಗಳಾರತಿ, ಪ್ರಸಾದ ವಿತರಣೆ. ಸೆ.29 ರಂದು ರಾತ್ರಿ 7-30 ರಿಂದ ನವರಾತ್ರಿ ಪೂಜೆ, ಶ್ರೀ ರಂಗಪೂಜೆ ನಂತರ ಭಜನಾ ಕಾರ್ಯಕ್ರಮ ನಡೆಯಲಿದೆ. ರಾತ್ರಿ 9 ರಿಂದ ಮಂಗಳಾರತಿ, ಪ್ರಸಾದ ವಿತರಣೆ . ಸೆ.30 ರಂದು ರಾತ್ರಿ 7-30 ರಿಂದ ನವರಾತ್ರಿ ಪೂಜೆ, ರಂಗಪೂಜೆ ನಡೆಯಲಿದೆ. ನಂತರ ಭಕ್ತಿಗೀತೆ, ಭಜನಾ ಸ್ಪರ್ಧೆ ನಡೆಯಲಿದೆ. ರಾತ್ರಿ ಗಂಟೆ 9-00 ರಿಂದ ಮಂಗಳಾರತಿ, ಪ್ರಸಾದ ವಿತರಣೆ .

ಅ.1 ರಂದು ರಾತ್ರಿ ಗಂಟೆ 7-30 ರಿಂದ ಭಜನಾ ಕಾರ್ಯಕ್ರಮ, ರಾತ್ರಿ 9-00 ರಿಂದ ಮಂಗಳಾರತಿ, ಪ್ರಸಾದ ವಿತರಣೆ ನಡೆಯಲಿದೆ. ಸೆ.2 ರಂದು ಬೆಳಿಗ್ಗೆ 10 ರಿಂದ ವಿಜಯ ದಶಮಿ, ಚಿತ್ರ ಬಿಡಿಸುವ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಯಕ್ಷಗಾನ ತಾಳಮದ್ದಳೆ- ತ್ರಿಶಂಕು ಸ್ವರ್ಗ ನಡೆಯಲಿದೆ. ಮಧ್ಯಾಹ್ನ 12-30 ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಪ್ರತಿದಿನ ರಾತ್ರಿ ಪ್ರಸಾದ ವಿತರಣೆ ನಂತರ ಅನ್ನಸಂತರ್ಪಣೆ ನಡೆಯಲಿದೆ.

Related posts

ಶಿಶಿಲ ಪರಿಶಿಷ್ಟ ಪಂಗಡ ಕಾಲೋನಿಗೆ ಪೊಲೀಸ್ ಅಧಿಕಾರಿಗಳ ಭೇಟಿ: ಸೈಬರ್ ಅಪರಾಧ, ಪೋಕ್ಸೋ ವಂಚನೆಗಳ ಬಗ್ಗೆ ಜಾಗೃತಿ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಯ ನೂತನ ಶಾಲಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಅ.20: ಬಳಂಜದಲ್ಲಿ ದೀಪಾವಳಿ ಪ್ರಯುಕ್ತ 2ನೇ ವರ್ಷದ ದೋಸೆ ಹಬ್ಬ ಹಾಗೂ ಲೂಡೋ ಟೂರ್ನಮೆಂಟ್

Suddi Udaya

ಮುಂಡಾಜೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಅ.ಪ್ರೌ. ಶಾಲೆ ಮತ್ತು ಪ. ಪೂ. ಕಾಲೇಜಿನಲ್ಲಿ ಹಣ್ಣಿನ ಗಿಡಗಳ ನಾಟಿ

Suddi Udaya

ಮಚ್ಚಿನ ಗ್ರಾ.ಪಂ. ನಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘದ ಗುರುಪೂಜೆಯ ಪೂರ್ವಭಾವಿ ಸಭೆ

Suddi Udaya
error: Content is protected !!