23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಸೆ.22 -ಅ.2 : ಮಲೆಬೆಟ್ಟು ಶ್ರೀ ವನದುರ್ಗಾ ದೇವಾಲಯದಲ್ಲಿ ನವರಾತ್ರಿ ಪೂಜಾ ಮಹೋತ್ಸವ

ಕೊಯ್ಯರು: ಮಲೆಬೆಟ್ಟು ಶ್ರೀ ವನದುರ್ಗಾ ದೇವಾಲಯದಲ್ಲಿ ಸೆ.22 ರಿಂದ ಅ.2 ರವರೆಗೆ ನವರಾತ್ರಿ ಪೂಜಾ ಮಹೋತ್ಸವವು ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಸೆ.22ರಂದು ರಾತ್ರಿ 7-30 ರಿಂದ ಗಣಹೋಮ, ಕುಣಿತ ಭಜನಾ ಕಾರ್ಯಕ್ರಮ, ಮಂಗಳಾರತಿ, ಪ್ರಸಾದ ವಿತರಣೆ , ಸೆ.23 ರಂದು ರಾತ್ರಿ 7-30 ರಿಂದ ನವರಾತ್ರಿ ಪೂಜೆ, ಶ್ರೀ ರಂಗಪೂಜೆ, ಭಜನಾ ಕಾರ್ಯಕ್ರಮ, ರಾತ್ರಿ 9 ಗಂಟೆಗೆ ಮಂಗಳಾರತಿ, ಪ್ರಸಾದ ವಿತರಣೆ, ಸೆ.24 ರಂದು ರಾತ್ರಿ 7-30 ರಿಂದ ನವರಾತ್ರಿ ಪೂಜೆ, ರಂಗಪೂಜೆ, ಗಮಕ ನೃತ್ಯರೂಪಕ, ಮಂಗಳಾರತಿ, ಪ್ರಸಾದ ವಿತರಣೆ . ಸೆ.25 ರಂದು ರಾತ್ರಿ 7-30 ನವರಾತ್ರಿ ಪೂಜೆ, ರಂಗಪೂಜೆ, ಸ್ಯಾಕ್ರೋಫೋನ್ ವಾದನ ನಡೆಯಲಿದೆ. ರಾತ್ರಿ 9 ರಿಂದ ಮಂಗಳಾರತಿ, ಪ್ರಸಾದ ವಿತರಣೆ . ಸೆ.26 ರಂದು ರಾತ್ರಿ 7 ರಿಂದ ಭಜನಾ ಕಾರ್ಯಕ್ರಮ ನಂತರ ಅವನೀಶ ಕೃಷ್ಣ ಕಾಂತಾಜೆ ಮತ್ತು ಶ್ರೀ ವಿಶ್ವೇಶ್ವರ ಭಟ್ ಉಂಡೆಮನೆ ಇವರಿಂದ ಶಂಕರ ಸ್ತೋತ್ರ ವಾಹಿನಿ ರಾತ್ರಿ 9 ಗಂಟೆಗೆ ಮಂಗಳಾರತಿ, ಪ್ರಸಾದ ವಿತರಣೆ .

ಸೆ.27 ರಿಂದ ರಾತ್ರಿ 7-30 ರಿಂದ ನವರಾತ್ರಿ ಪೂಜೆ, ಶ್ರೀ ರಂಗಪೂಜೆ ನಂತರ ಕೆ.ಆರ್ ಸುವರ್ಣ ಕುಮಾರಿ ಮತ್ತು ಮಧೂರು ಮೋಹನ ಕಲ್ಲೂರಾಯ ಗೇರುಕಟ್ಟೆ ಇವರಿಂದ ಹರಿಕಥಾ ಕಾಲಕ್ಷೇಪ ನಡೆಯಲಿದೆ. ರಾತ್ರಿ 9 ಗಂಟೆಗೆ ಮಂಗಳಾರತಿ, ಪ್ರಸಾದ ವಿತರಣೆ. ಸೆ.29 ರಂದು ರಾತ್ರಿ 7-30 ರಿಂದ ನವರಾತ್ರಿ ಪೂಜೆ, ಶ್ರೀ ರಂಗಪೂಜೆ ನಂತರ ಭಜನಾ ಕಾರ್ಯಕ್ರಮ ನಡೆಯಲಿದೆ. ರಾತ್ರಿ 9 ರಿಂದ ಮಂಗಳಾರತಿ, ಪ್ರಸಾದ ವಿತರಣೆ . ಸೆ.30 ರಂದು ರಾತ್ರಿ 7-30 ರಿಂದ ನವರಾತ್ರಿ ಪೂಜೆ, ರಂಗಪೂಜೆ ನಡೆಯಲಿದೆ. ನಂತರ ಭಕ್ತಿಗೀತೆ, ಭಜನಾ ಸ್ಪರ್ಧೆ ನಡೆಯಲಿದೆ. ರಾತ್ರಿ ಗಂಟೆ 9-00 ರಿಂದ ಮಂಗಳಾರತಿ, ಪ್ರಸಾದ ವಿತರಣೆ .

ಅ.1 ರಂದು ರಾತ್ರಿ ಗಂಟೆ 7-30 ರಿಂದ ಭಜನಾ ಕಾರ್ಯಕ್ರಮ, ರಾತ್ರಿ 9-00 ರಿಂದ ಮಂಗಳಾರತಿ, ಪ್ರಸಾದ ವಿತರಣೆ ನಡೆಯಲಿದೆ. ಸೆ.2 ರಂದು ಬೆಳಿಗ್ಗೆ 10 ರಿಂದ ವಿಜಯ ದಶಮಿ, ಚಿತ್ರ ಬಿಡಿಸುವ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಯಕ್ಷಗಾನ ತಾಳಮದ್ದಳೆ- ತ್ರಿಶಂಕು ಸ್ವರ್ಗ ನಡೆಯಲಿದೆ. ಮಧ್ಯಾಹ್ನ 12-30 ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಪ್ರತಿದಿನ ರಾತ್ರಿ ಪ್ರಸಾದ ವಿತರಣೆ ನಂತರ ಅನ್ನಸಂತರ್ಪಣೆ ನಡೆಯಲಿದೆ.

Related posts

ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ ಗಫೂರ್ ಅವರನ್ನು ಅಭಿನಂದಿಸಿದ ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷ ಯು.ಕೆ ಮುಹಮ್ಮದ್ ಹನೀಫ್

Suddi Udaya

ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಮುಗೇರಡ್ಕ – ದಂಬೆತ್ತಿಮಾರು ಕಾಂಕ್ರಿಟೀಕರಣ ರಸ್ತೆ ಉದ್ಘಾಟನೆ

Suddi Udaya

ನೆರಿಯ ಸೆಂಟ್ ತೋಮಸ್ ಬ್ಯಾಂಡ್ ಸೆಟ್ ಮಾಸ್ಟರ್ ಬೇಬಿ ತಚ್ಚಾಟ್ ಹೃದಯಾಘಾತದಿಂದ ನಿಧನ

Suddi Udaya

ಜಾಗ ಮಾರಾಟದ ಅಗ್ರಿಮೆಂಟ್ ಮಾಡಿ ರೂ.45ಲಕ್ಷ ವಂಚನೆ; ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ‌ ದಾಖಲು

Suddi Udaya

ಉಜಿರೆ ಎಸ್.ಡಿ.ಎಂ ಪಾಲಿಟೆಕ್ನಿಕ್ ನಲ್ಲಿ ಓಣಂ ಆಚರಣೆ

Suddi Udaya

ಗುರುವಾಯನಕೆರೆ ಶಾಲೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಕಲ್ಪವೃಕ್ಷ ಗಿಡನಾಟಿ

Suddi Udaya
error: Content is protected !!