22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಎಂಟು ವರ್ಷದ ಬಳಿಕ ಸೇವಾ ದರ ಪರಿಷ್ಕರಣೆ

ಬೆಳ್ತಂಗಡಿ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಸೇವಾ ದರ ಪರಿಷ್ಕರಣೆಯು ಎಂಟು ವರ್ಷದ ಬಳಿಕ ಅಲ್ಪ ಪ್ರಮಾಣದಲ್ಲಿ ಕೆಲವು ಸೇವೆಗಳಿಗೆ ಮಾಡಲಾಗಿದೆ. ಈ ಹಿಂದಿನ ವ್ಯವಸ್ಥಾಪನ ಸಮಿತಿಯವರು ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಸಲ್ಲಿಸಿರುವ ತಾ.20.1.2024ರ ಸಭೆಯ ನಿರ್ಣಯದಂತೆ, ಕೆಲವು ಸೇವಾ ದರ ಪಟ್ಟಿಯನ್ನು ಅಲ್ಪಪ್ರಮಾಣದಲ್ಲಿ ಹೆಚ್ಚಿಸಲಾಗಿದೆ.

ಅವಲಕ್ಕಿ ಪಂಚ ಕಜ್ಜಾಯ ರೂ. 70 ರಿಂದ ರೂ. 80, ಕಡ್ಲೆ ಪಂಚ ಕಜ್ಜಾಯ ರೂ.20ರಿಂದ 30 ರೂಪಾಯಿಗೆ, ಅಪ್ಪ ಪ್ರಸಾದ ರೂ.30 ರಿಂದ 40 ರೂಪಾಯಿಗೆ, ಲಾಡು ಪ್ರಸಾದ ರೂ.20 ರಿಂದ 30 ರೂಪಾಯಿವರೆಗೆ ಘನ ವಾಹನ ಪೂಜೆ ರೂ.75 ರಿಂದ 100 ರೂಪಾಯಿ, ಲಘು ವಾಹನ ರೂ.100 ರಿಂದ 200, ಅಷ್ಟೋತ್ತರ ಅರ್ಚನೆ ರೂ.40 ರಿಂದ ರೂ.50 ವರೆಗೆ ಹೆಚ್ಚಿಸಲಾಗಿದೆ.

ಕ್ಷೇತ್ರದಲ್ಲಿ ದೇವರಿಗೆ ನಡೆಯುವ 20 ಸೇವೆಗಳಲ್ಲಿ 8 ಸೇವೆಗಳಿಗೆ ಎಂಟು ವರ್ಷದ ಬಳಿಕ ದರವನ್ನು ಪರಿಷ್ಕರಣೆ ಮಾಡಲಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ಪಾತ್ರ ಇರುವುದಿಲ್ಲ.ಆಗಮ ಪಂಡಿತರು ದೇವಾಳಕ್ಕೆ ಖುದ್ದು ಭೇಟಿ ನೀಡಿ ಸೇವಾರ್ಥ ಪಟ್ಟಿಯನ್ನು ಕೂಲಕುಶವಾಗಿ ಪರಿಶೀಲಿಸಿ, ಕೆಲವು ಮಾರ್ಪಾಡು ಗಳನ್ನು ಮಾಡಿರುವುದರಿಂದ 8 ಸೇವೆಗಳ ದರಗಳ ಪರಿಷ್ಕರಣೆಗೆ ಪ್ರಸ್ತುತ ದೇವಸ್ಥಾನದ ವ್ಯವಸ್ಥಾಪನ ಸಮಿತಿಯು ಅಂಗೀಕರಿಸಿದೆ. ದರ ಪರಿಷ್ಕರಣೆ ಮಾಡಿರುವ ಸೇವೆಗಳ ಸಾಮಾಗ್ರಿಗಳ ವೆಚ್ಚಗಳು ಏರಿಕೆ ಆಗಿರುವುದರಿಂದ ಅನಿವಾರ್ಯವಾಗಿ ಅಲ್ಪ ಪ್ರಮಾಣದಲ್ಲಿ ಸೇವ ದರವನ್ನು ಪರಿಷ್ಕರಣೆ ಮಾಡಲಾಗಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಕೆ ತಿಳಿಸಿದ್ದಾರೆ.

Related posts

ಗೇರು ಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಶಿಲನ್ಯಾಸ

Suddi Udaya

ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಕ್ಷೇತ್ರದಲ್ಲಿ ದಾರಂದ ಪ್ರತಿಷ್ಠೆ: ಡಿಸೆಂಬರ್ ತಿಂಗಳಲ್ಲಿ ಬ್ರಹ್ಮಕಲಶೋತ್ಸವಕ್ಕೆ ಸಿದ್ದತೆ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ‌ವ್ಯಾಪಾರಸ್ಥರ ಸಂಘ: ಜಾಗತಿಕ ಔಷಧಿ ತಜ್ಞರ ದಿನದ ಆಚರಣೆ

Suddi Udaya

ಬಂದಾರು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯರ್ ಗ್ರೇಡ್ ಪರೀಕ್ಷೆ: ಮಡಂತ್ಯಾರು ನಿಯತಿ ನೃತ್ಯ ನಿಕೇತನ ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Suddi Udaya
error: Content is protected !!