September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಎಂಟು ವರ್ಷದ ಬಳಿಕ ಸೇವಾ ದರ ಪರಿಷ್ಕರಣೆ

ಬೆಳ್ತಂಗಡಿ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಸೇವಾ ದರ ಪರಿಷ್ಕರಣೆಯು ಎಂಟು ವರ್ಷದ ಬಳಿಕ ಅಲ್ಪ ಪ್ರಮಾಣದಲ್ಲಿ ಕೆಲವು ಸೇವೆಗಳಿಗೆ ಮಾಡಲಾಗಿದೆ. ಈ ಹಿಂದಿನ ವ್ಯವಸ್ಥಾಪನ ಸಮಿತಿಯವರು ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಸಲ್ಲಿಸಿರುವ ತಾ.20.1.2024ರ ಸಭೆಯ ನಿರ್ಣಯದಂತೆ, ಕೆಲವು ಸೇವಾ ದರ ಪಟ್ಟಿಯನ್ನು ಅಲ್ಪಪ್ರಮಾಣದಲ್ಲಿ ಹೆಚ್ಚಿಸಲಾಗಿದೆ.

ಅವಲಕ್ಕಿ ಪಂಚ ಕಜ್ಜಾಯ ರೂ. 70 ರಿಂದ ರೂ. 80, ಕಡ್ಲೆ ಪಂಚ ಕಜ್ಜಾಯ ರೂ.20ರಿಂದ 30 ರೂಪಾಯಿಗೆ, ಅಪ್ಪ ಪ್ರಸಾದ ರೂ.30 ರಿಂದ 40 ರೂಪಾಯಿಗೆ, ಲಾಡು ಪ್ರಸಾದ ರೂ.20 ರಿಂದ 30 ರೂಪಾಯಿವರೆಗೆ ಘನ ವಾಹನ ಪೂಜೆ ರೂ.75 ರಿಂದ 100 ರೂಪಾಯಿ, ಲಘು ವಾಹನ ರೂ.100 ರಿಂದ 200, ಅಷ್ಟೋತ್ತರ ಅರ್ಚನೆ ರೂ.40 ರಿಂದ ರೂ.50 ವರೆಗೆ ಹೆಚ್ಚಿಸಲಾಗಿದೆ.

ಕ್ಷೇತ್ರದಲ್ಲಿ ದೇವರಿಗೆ ನಡೆಯುವ 20 ಸೇವೆಗಳಲ್ಲಿ 8 ಸೇವೆಗಳಿಗೆ ಎಂಟು ವರ್ಷದ ಬಳಿಕ ದರವನ್ನು ಪರಿಷ್ಕರಣೆ ಮಾಡಲಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ಪಾತ್ರ ಇರುವುದಿಲ್ಲ.ಆಗಮ ಪಂಡಿತರು ದೇವಾಳಕ್ಕೆ ಖುದ್ದು ಭೇಟಿ ನೀಡಿ ಸೇವಾರ್ಥ ಪಟ್ಟಿಯನ್ನು ಕೂಲಕುಶವಾಗಿ ಪರಿಶೀಲಿಸಿ, ಕೆಲವು ಮಾರ್ಪಾಡು ಗಳನ್ನು ಮಾಡಿರುವುದರಿಂದ 8 ಸೇವೆಗಳ ದರಗಳ ಪರಿಷ್ಕರಣೆಗೆ ಪ್ರಸ್ತುತ ದೇವಸ್ಥಾನದ ವ್ಯವಸ್ಥಾಪನ ಸಮಿತಿಯು ಅಂಗೀಕರಿಸಿದೆ. ದರ ಪರಿಷ್ಕರಣೆ ಮಾಡಿರುವ ಸೇವೆಗಳ ಸಾಮಾಗ್ರಿಗಳ ವೆಚ್ಚಗಳು ಏರಿಕೆ ಆಗಿರುವುದರಿಂದ ಅನಿವಾರ್ಯವಾಗಿ ಅಲ್ಪ ಪ್ರಮಾಣದಲ್ಲಿ ಸೇವ ದರವನ್ನು ಪರಿಷ್ಕರಣೆ ಮಾಡಲಾಗಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಕೆ ತಿಳಿಸಿದ್ದಾರೆ.

Related posts

ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯಲ್ಲಿ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ – ಭಾರತ ಮತ್ತು ಜಪಾನ್

Suddi Udaya

ಬಾರ್ಯ: ಸರಳಿಕಟ್ಟೆ ಮೆಗಿನ ಪುಯಿಲದಲ್ಲಿ ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು: ಅನಾಹುತ ಸಂಭವಿಸುವ ಮುನ್ನ ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ನಾಳ ಕ್ಷೇತ್ರಗಳಲ್ಲಿ ರೆಂಜೆಗಿಡದ ವೃಕ್ಷಾರೋಪಣ ಕಾರ್ಯಕ್ರಮ

Suddi Udaya

ಗೇರುಕಟ್ಟೆ: ಸುಣ್ಣಲಡ್ಡದಲ್ಲಿ ತಡರಾತ್ರಿ ಮನೆಗೆ ನುಗ್ಗಿ ನಗದು ಕಳ್ಳತನ: ಬೆಳ್ತಂಗಡಿ ಪೊಲೀಸರು, ಶ್ವಾನದಳ ಮತ್ತು ಬೆರಳಚ್ಚು ತಜ್ಞರಿಂದ ತನಿಖೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಣ್ಣಿನ ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳ: ಪಾದಯಾತ್ರಿಗಳಿಗೆ ಸನ್ಮಾನ

Suddi Udaya
error: Content is protected !!