32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ ವೈಷ್ಣವಿ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಮಹಾಸಭೆ

ಕಳಿಯ : ವೈಷ್ಣವಿ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟ ಕಳಿಯ ಇದರ ಮಹಾಸಭೆಯನ್ನು ಸೆ.18 ರಂದು ಕಳಿಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ವಿಜಯ ಹೆಚ್ ಪ್ರಸಾದ್ ರವರ ಅಧ್ಯಕ್ಷತೆಯಲ್ಲಿ ಮತ್ತು ವಲಯ ಮೇಲ್ವಿಚಾರಕಿ ಶ್ರೀಮತಿ ವೀಣಾ ಶ್ರೀ ಇವರ ಉಪಸ್ಥಿತಿಯಲ್ಲಿ ನಡೆಸಲಾಯಿತು.

ಪಂಚಾಯಿತಿನ ಅಧ್ಯಕ್ಷ ದಿವಾಕರ ಇವರು ಹಾಗೂ ಒಕ್ಕೂಟದ ಅಧ್ಯಕ್ಷ ವಿಜಯಹೆಚ್ ಪ್ರಸಾದ್, ಉಪಾಧ್ಯಕ್ಷೆ ರೀತಾ ಹಾಗೂ ಕಾರ್ಯದರ್ಶಿ ಶ್ರೀಮತಿ ರೇಷ್ಮಾ ಹಾಗೂ ಪದಾಧಿಕಾರಿಗಳು ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.

ಪ್ರಜ್ಞಾ ರವರು 2022-23 ಹಾಗೂ 2024-25 ರ ವಾರ್ಷಿಕ ವರದಿ ಮಂಡಿಸಿ ಖರ್ಚು ವೆಚ್ಚ ಹಾಗೂ ಆಸ್ತಿ ಜವಾಬ್ದಾರಿ ಯನ್ನು ಮಂಡಿಸಿದರು. ವಲಯ ಮೇಲ್ವಿಚಾರಕರಾದ ಶ್ರೀಮತಿ ವೀಣಾ ಶ್ರೀ ಇವರು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (NRLM)ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು. ಸಂಜೀವಿನಿ ಯೋಜನೆಯ ದ್ಯೇಯೋದೇಶ ದ ಬಗ್ಗೆ ಜೀವನೋಪಾಯ ಚಟುವಟಿಕೆ ಬಗ್ಗೆ ಹಾಗೂ ಇತರ ಹಲವಾರು ವಿಷಯಗಳ ಬಗ್ಗೆ ಸವಿಸ್ತಾರವಾಗಿ ಮಾಹಿತಿಯನ್ನು ನೀಡಿದರು.

ಅತ್ಯುತ್ತಮ ಪಶು ಸಖಿ ಯಾಗಿ ಪ್ರಶಸ್ತಿ ಪಡೆದ ರೂಪಾ ಇವರಿಗೆ ಒಕ್ಕೂಟದಿಂದ ಸನ್ಮಾನಿಸಲಾಯಿತು. ಅದೇ ರೀತಿ ಈ ಮೊದಲು ಇದ್ದ ಅಧ್ಯಕ್ಷ ರು ಮತ್ತು ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಮಮತಾ ಸ್ವಾಗತಿಸಿದರು. ರೂಪಾರವರು ನಿರೂಪಿಸಿದರು. ಸುಪ್ರಿಯಾ ಧನ್ಯವಾದವಿತ್ತರು.

Related posts

ಕುಕ್ಕೇಡಿ ಗ್ರಾ.ಪಂ. ವತಿಯಿಂದ “ಆಧಾರ್ ಸೀಡಿಂಗ್” ಕ್ಯಾಂಪ್

Suddi Udaya

ರೂ. 6 ಕೋಟಿ ವೆಚ್ಚದಲ್ಲಿ ಗುರುವಾಯನಕೆರೆ- ಉಪ್ಪಿನಂಗಡಿ ರಸ್ತೆ ಅಭಿವೃದ್ಧಿ: ಫೆ.18: ನಾಳೆ ಸಂಸದ ಕ್ಯಾ| ಬ್ರಿಜೇಶ್ ಚೌಟರಿಂದ ಶಿಲಾನ್ಯಾಸ ಶಾಸಕ ಹರೀಶ್‌ಪೂಂಜ ಭಾಗಿ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಯಲ್ಲಿ ಭಾವೈಕ್ಯತೆಯ ಸಂಗಮ ಕಾರ್ಯಕ್ರಮ

Suddi Udaya

ಕುವೆಟ್ಟು: ಚಲಿಸುತ್ತಿದ್ದ ಲಾರಿ ಮೇಲೆ ಬಿದ್ದ ವಿದ್ಯುತ್ ಕಂಬ: ಲಾರಿ ಚಾಲಕ ಹಾಗೂ ಎರಡು ಬೈಕ್ ಸವಾರರು ಪ್ರಾಣಾಪಾಯದಿಂದ ಪಾರು

Suddi Udaya

ತಾಲೂಕು ಯುವಜನ ಒಕ್ಕೂಟದಿಂದ ತಾಲೂಕು ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ

Suddi Udaya

ಬೆಳ್ತಂಗಡಿ:ಕಾಂಗ್ರೆಸ್ ನಿಂದ ಸಂವಿಧಾನ ,ಪ್ರಜಾಪ್ರಭುತ್ವ ,ಶಿಷ್ಟಾಚಾರ ವಿರೋಧಿ ನಡವಳಿಕೆ. ರಾಜ್ಯದ ಮಂತ್ರಿಗಳ ಸರ್ವಾಧಿಕಾರಿ ಧೋರಣೆ, ಹಿರಿಯಕ್ಕನ ಚಾಳಿ ಮನೆ ಮಂದಿಗೆಂಬಂತೆ ಇದು ತಳಮಟ್ಟಕ್ಕೂ ತಲುಪುತ್ತಿದೆ: ವಿಧಾನಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಆರೋಪ

Suddi Udaya
error: Content is protected !!