26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಕೋರಂ ಕೊರತೆ ಹಾಗೂ ಅಧಿಕಾರಿಗಳು ಲೇಟಾಗಿ ಭಾಗವಹಿಸಿದ್ದರಿಂದ ನೆರಿಯ ಗ್ರಾಮಸಭೆ ಮುಂದೂಡಿಕೆ

ನೆರಿಯ: ನೆರಿಯ ಗ್ರಾಮ ತಾಲೂಕಿನಲ್ಲಿ ದೊಡ್ಡ ವ್ಯಾಪ್ತಿಯಿರುವ ಪಂಚಾಯತ್. ಗ್ರಾಮಸಭೆಗೆ ಅಧಿಕಾರಿಗಳು ಬಾರದೆ ಗ್ರಾಮಸಭೆ ಪ್ರಾರಂಭ ಮಾಡುವುದು ಬೇಡ.ಇಲಾಖೆಗಳು ತುಂಬಾ ದುರ್ಬಲವಾಗಿದೆಯ?ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಬರಬೇಕು. ಗಂಟೆ 12 ಕಳೆದರೂ ಬರುವುದಿಲ್ಲ ಯಾಕೇ?ಅವರು ನಾವು ಕಟ್ಟುವ ತೆರಿಗೆ ಹಣದಿಂದ ಸಂಬಳ ಪಡೆಯುವುದು. ಗ್ರಾಮಸಭೆಗೆ ಜನರು ಬರಲಿಲ್ಲ,ಅಧಿಕಾರಿಗಳು ಇಲ್ಲ.ಯಾರಿಗೆ ಗ್ರಾಮಸಭೆ ಎಂದು ಗ್ರಾಮಸ್ಥರು ಪ್ರಶ್ನಿಸಿದರು.

ಮಾರ್ಗದರ್ಶಿ ಅಧಿಕಾರಿಯಾಗಿ ಭಾಗವಹಿಸಿದ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಮುರಳೀಧರ್ ಹಾಗೂ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಸಂತಿ, ಪಿಡಿಓ ಸುಮ ಎ ಎಸ್ ಅವರು ಗ್ರಾಮಸಭೆ ನಡೆಸಲು ಗ್ರಾಮಸ್ಥರ ಮನವೊಲಿಸಲು ಪ್ರಯತ್ನಿಸಿದರು.

ಗ್ರಾಮಸಭೆಗೆ ಅಧಿಕಾರಿಗಳು ಒಬ್ಬೊಬ್ಬರಂತೆ ಲೇಟಾಗಿ ಆಗಮಿಸಿದರು.12 ಗಂಟೆಯ ನಂತರ ಗ್ರಾಮಸಭೆ ಮಾಡುವುದು ಬೇಡಾ ಎಂದು ಹೇಳಿ ಕೆಲವರು ಹೊರ ನಡೆದರು. ಪಂಚಾಯತ್ ಸದಸ್ಯರು ಮತ್ತು ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆಯಿತು.ಕೆಲವು ಗ್ರಾಮಸ್ಥರು ಗ್ರಾಮಸಭೆ ಬೇಕು ಎಂದಾದರೆ, ಇನ್ನೂ ಕೆಲವರು ಗ್ರಾಮಸ್ಥರು ಬರಲಿಲ್ಲ ಬೇಡಾ ಎಂದು ಗೊಂದಲದ ವಾತಾವರಣ ನಿರ್ಮಾಣವಾಯಿತು.

ಕೊನೆಗೆ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಮಾರ್ಗದರ್ಶಿ ಅಧಿಕಾರಿ ಗ್ರಾಮಸಭೆಯನ್ನು ಮುಂದೂಡಿ,ಮುಂದಿನ ದಿನಾಂಕ ತಿಳಿಸಲಾಗುವುದು ಎಂದರು.

Related posts

ಉಡುಪಿ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಂದ ಅರ್ಚಕ ಕೆ.ರಮಾನಂದ ಭಟ್ ಕೊಕ್ಕಡ ಅವರಿಗೆ “ಶ್ರೀಕೃಷ್ಣಗೀತಾನುಗ್ರಹ” ಪ್ರಶಸ್ತಿ ಪ್ರದಾನ

Suddi Udaya

ಧರ್ಮಸ್ಥಳ: ಹೂತ ಮೃತದೇಹಗಳ ಅವಶೇಷ ಹೊರತೆಗೆಯುವ ಕಾರ್ಯ ಪ್ರಾರಂಭ :ಬಿಗಿ ಪೊಲೀಸ್ ಬಂದೋಬಸ್ತ್

Suddi Udaya

ಕುವೆಟ್ಟು: ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹದ ಪತ್ತೆ: ವಾರಸುದಾರರು ಧರ್ಮಸ್ಥಳ ಪೊಲೀಸ್ ಠಾಣೆ ಸಂಪರ್ಕಿಸಲು ಮನವಿ

Suddi Udaya

ತೆಕ್ಕಾರು : ಪತ್ನಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿದ ಪತಿ

Suddi Udaya

ಎಸ್.ಡಿ.ಎಂ. ಪಿ.ಯು. ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳಿಂದ ಕೈಗಾರಿಕಾ ಪ್ರದೇಶಗಳಿಗೆ ಭೇಟಿ

Suddi Udaya
error: Content is protected !!