July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಕೋರಂ ಕೊರತೆ ಹಾಗೂ ಅಧಿಕಾರಿಗಳು ಲೇಟಾಗಿ ಭಾಗವಹಿಸಿದ್ದರಿಂದ ನೆರಿಯ ಗ್ರಾಮಸಭೆ ಮುಂದೂಡಿಕೆ

ನೆರಿಯ: ನೆರಿಯ ಗ್ರಾಮ ತಾಲೂಕಿನಲ್ಲಿ ದೊಡ್ಡ ವ್ಯಾಪ್ತಿಯಿರುವ ಪಂಚಾಯತ್. ಗ್ರಾಮಸಭೆಗೆ ಅಧಿಕಾರಿಗಳು ಬಾರದೆ ಗ್ರಾಮಸಭೆ ಪ್ರಾರಂಭ ಮಾಡುವುದು ಬೇಡ.ಇಲಾಖೆಗಳು ತುಂಬಾ ದುರ್ಬಲವಾಗಿದೆಯ?ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಬರಬೇಕು. ಗಂಟೆ 12 ಕಳೆದರೂ ಬರುವುದಿಲ್ಲ ಯಾಕೇ?ಅವರು ನಾವು ಕಟ್ಟುವ ತೆರಿಗೆ ಹಣದಿಂದ ಸಂಬಳ ಪಡೆಯುವುದು. ಗ್ರಾಮಸಭೆಗೆ ಜನರು ಬರಲಿಲ್ಲ,ಅಧಿಕಾರಿಗಳು ಇಲ್ಲ.ಯಾರಿಗೆ ಗ್ರಾಮಸಭೆ ಎಂದು ಗ್ರಾಮಸ್ಥರು ಪ್ರಶ್ನಿಸಿದರು.

ಮಾರ್ಗದರ್ಶಿ ಅಧಿಕಾರಿಯಾಗಿ ಭಾಗವಹಿಸಿದ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಮುರಳೀಧರ್ ಹಾಗೂ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಸಂತಿ, ಪಿಡಿಓ ಸುಮ ಎ ಎಸ್ ಅವರು ಗ್ರಾಮಸಭೆ ನಡೆಸಲು ಗ್ರಾಮಸ್ಥರ ಮನವೊಲಿಸಲು ಪ್ರಯತ್ನಿಸಿದರು.

ಗ್ರಾಮಸಭೆಗೆ ಅಧಿಕಾರಿಗಳು ಒಬ್ಬೊಬ್ಬರಂತೆ ಲೇಟಾಗಿ ಆಗಮಿಸಿದರು.12 ಗಂಟೆಯ ನಂತರ ಗ್ರಾಮಸಭೆ ಮಾಡುವುದು ಬೇಡಾ ಎಂದು ಹೇಳಿ ಕೆಲವರು ಹೊರ ನಡೆದರು. ಪಂಚಾಯತ್ ಸದಸ್ಯರು ಮತ್ತು ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆಯಿತು.ಕೆಲವು ಗ್ರಾಮಸ್ಥರು ಗ್ರಾಮಸಭೆ ಬೇಕು ಎಂದಾದರೆ, ಇನ್ನೂ ಕೆಲವರು ಗ್ರಾಮಸ್ಥರು ಬರಲಿಲ್ಲ ಬೇಡಾ ಎಂದು ಗೊಂದಲದ ವಾತಾವರಣ ನಿರ್ಮಾಣವಾಯಿತು.

ಕೊನೆಗೆ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಮಾರ್ಗದರ್ಶಿ ಅಧಿಕಾರಿ ಗ್ರಾಮಸಭೆಯನ್ನು ಮುಂದೂಡಿ,ಮುಂದಿನ ದಿನಾಂಕ ತಿಳಿಸಲಾಗುವುದು ಎಂದರು.

Related posts

ಬೆಳ್ತಂಗಡಿ: ಹೊತ್ತಿ ಉರಿದ ಬೈಕ್ : ವಾರೀಸುದಾರು  ಹಾಗೂ ನಂಬರ್  ಪ್ಲೇಟ್  ಇಲ್ಲದ ಬೈಕ್ ಮೇಲೆ ಅನುಮಾನ

Suddi Udaya

ಬೆಳ್ತಂಗಡಿ ನಗರದ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ಕಾಯಕಲ್ಪ ನೀಡಿ, ಕಾಮಗಾರಿಯ ಸಂಪೂರ್ಣ ಪ್ರಯೋಜನ ನಗರದ ಜನರಿಗೆ ತ್ವರಿತವಾಗಿ ದೊರೆಯುವಂತೆ ಒತ್ತಾಯಿಸಿ ಪ್ರತಾಪ್ ಸಿಂಹ ನಾಯಕ್‌ ರಿಂದ ಸಚಿವ ಭೈರತಿ ಸುರೇಶ್ ರವರಿಗೆ ಮನವಿ

Suddi Udaya

ಬೆಳ್ತಂಗಡಿ 9/11 ಸಮಸ್ಯೆಗಳ ಬಗ್ಗೆ ಮತ್ತು ತಾಲೂಕಿಗೆ ಪ್ರತ್ಯೇಕ ಯೋಜನಾ ಪ್ರಾಧಿಕಾರವನ್ನು ರಚನೆ ಮಾಡುವಂತೆ ನಗರ ಮತ್ತು ಗ್ರಾಮಾಂತರ ಯೋಜನಾ ಪ್ರಾಧಿಕಾರದ ನಿರ್ದೇಶಕರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅರಸಿನಮಕ್ಕಿ ಆಶ್ರಯದಲ್ಲಿ ನಾಳೆ(ಡಿ.29) ಜನೌಷಧಿ ಕೇಂದ್ರ ಉದ್ಘಾಟನೆ

Suddi Udaya

ಮೇಲಂತಬೆಟ್ಟು ಕೊಡ ಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya

ಕರ್ನಾಟಕ ರಾಜ್ಯ ಗಸ್ತು ಅರಣ್ಯ ಪಾಲಕರ ಮತ್ತು ಅರಣ್ಯ ವೀಕ್ಷಕರ ಸಂಘ ಮಂಗಳೂರು ವಿಭಾಗದ ವತಿಯಿಂದ ಪರಿಸರ ಪ್ರೇಮಿ ಸಚಿನ್ ಭಿಡೆ ಮುಂಡಾಜೆ ರವರಿಗೆ ಸನ್ಮಾನ

Suddi Udaya
error: Content is protected !!