ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಕೋರಂ ಕೊರತೆ ಹಾಗೂ ಅಧಿಕಾರಿಗಳು ಲೇಟಾಗಿ ಭಾಗವಹಿಸಿದ್ದರಿಂದ ನೆರಿಯ ಗ್ರಾಮಸಭೆ ಮುಂದೂಡಿಕೆ

ನೆರಿಯ: ನೆರಿಯ ಗ್ರಾಮ ತಾಲೂಕಿನಲ್ಲಿ ದೊಡ್ಡ ವ್ಯಾಪ್ತಿಯಿರುವ ಪಂಚಾಯತ್. ಗ್ರಾಮಸಭೆಗೆ ಅಧಿಕಾರಿಗಳು ಬಾರದೆ ಗ್ರಾಮಸಭೆ ಪ್ರಾರಂಭ ಮಾಡುವುದು ಬೇಡ.ಇಲಾಖೆಗಳು ತುಂಬಾ ದುರ್ಬಲವಾಗಿದೆಯ?ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಬರಬೇಕು. ಗಂಟೆ 12 ಕಳೆದರೂ ಬರುವುದಿಲ್ಲ ಯಾಕೇ?ಅವರು ನಾವು ಕಟ್ಟುವ ತೆರಿಗೆ ಹಣದಿಂದ ಸಂಬಳ ಪಡೆಯುವುದು. ಗ್ರಾಮಸಭೆಗೆ ಜನರು ಬರಲಿಲ್ಲ,ಅಧಿಕಾರಿಗಳು ಇಲ್ಲ.ಯಾರಿಗೆ ಗ್ರಾಮಸಭೆ ಎಂದು ಗ್ರಾಮಸ್ಥರು ಪ್ರಶ್ನಿಸಿದರು.

ಮಾರ್ಗದರ್ಶಿ ಅಧಿಕಾರಿಯಾಗಿ ಭಾಗವಹಿಸಿದ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಮುರಳೀಧರ್ ಹಾಗೂ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಸಂತಿ, ಪಿಡಿಓ ಸುಮ ಎ ಎಸ್ ಅವರು ಗ್ರಾಮಸಭೆ ನಡೆಸಲು ಗ್ರಾಮಸ್ಥರ ಮನವೊಲಿಸಲು ಪ್ರಯತ್ನಿಸಿದರು.

ಗ್ರಾಮಸಭೆಗೆ ಅಧಿಕಾರಿಗಳು ಒಬ್ಬೊಬ್ಬರಂತೆ ಲೇಟಾಗಿ ಆಗಮಿಸಿದರು.12 ಗಂಟೆಯ ನಂತರ ಗ್ರಾಮಸಭೆ ಮಾಡುವುದು ಬೇಡಾ ಎಂದು ಹೇಳಿ ಕೆಲವರು ಹೊರ ನಡೆದರು. ಪಂಚಾಯತ್ ಸದಸ್ಯರು ಮತ್ತು ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆಯಿತು.ಕೆಲವು ಗ್ರಾಮಸ್ಥರು ಗ್ರಾಮಸಭೆ ಬೇಕು ಎಂದಾದರೆ, ಇನ್ನೂ ಕೆಲವರು ಗ್ರಾಮಸ್ಥರು ಬರಲಿಲ್ಲ ಬೇಡಾ ಎಂದು ಗೊಂದಲದ ವಾತಾವರಣ ನಿರ್ಮಾಣವಾಯಿತು.

ಕೊನೆಗೆ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಮಾರ್ಗದರ್ಶಿ ಅಧಿಕಾರಿ ಗ್ರಾಮಸಭೆಯನ್ನು ಮುಂದೂಡಿ,ಮುಂದಿನ ದಿನಾಂಕ ತಿಳಿಸಲಾಗುವುದು ಎಂದರು.

Related posts

ಸಮಾಜ ಸೇವಾಟ್ರಸ್ಟ್ ನ ಸಂಸ್ಥಾಪಕ ರವಿ ಕಕ್ಕೆಪದವು ರವರ ಮಾಗದರ್ಶನದಲ್ಲಿ ಕುಮಾರಧಾರದಿಂದ ಕಾಶಿಕಟ್ಟೆಯವರೆಗೆ ಸ್ವಚ್ಛತಾ ಕಾರ್ಯ

Suddi Udaya

ಉಜಿರೆ: ಮುಂಡತ್ತೋಡಿ ನಿವಾಸಿ ಪದ್ಮಣ್ಣ ಗೌಡ ನಿಧನ

Suddi Udaya

ಮುಂಡಾಜೆ: ಕೀರ್ತನಾ ಕಲಾತಂಡದಿಂದ ಕನಕ ಜಯಂತಿ ಆಚರಣೆ

Suddi Udaya

ಡಿ.3: ಬೆಳ್ತಂಗಡಿ ಹಳೆಕೋಟೆ ಜೋರ್ಡನ್ ರಿವರ್ ವೆಲ್ ವ್ಯೂ ರೂಮ್ಸ್ & ಸೂಟ್ಸ್ ವಿಸ್ಕೃತ ಕಟ್ಟಡದ ಉದ್ಘಾಟನೆ

Suddi Udaya

ಬಳಂಜ ಬದಿನಡೆ ಕ್ಷೇತ್ರದಲ್ಲಿಪ್ರಶ್ನಾ ಚಿಂತನೆ

Suddi Udaya

ಬೆಂಗಳೂರಿನ ಪ್ರಸಿದ್ದ ಕೈಗಾರಿಕೋದ್ಯಮಿ, ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಸಾಧಕ ದೇವೇಂದ್ರ ಹೆಗ್ಡೆ ಕೊಕ್ರಾಡಿಯವರು ಅಂತರರಾಷ್ಟ್ರೀಯ ಆರ್ಯಭಟ- 2024 ಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!