23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಕೋರಂ ಕೊರತೆ ಹಾಗೂ ಅಧಿಕಾರಿಗಳು ಲೇಟಾಗಿ ಭಾಗವಹಿಸಿದ್ದರಿಂದ ನೆರಿಯ ಗ್ರಾಮಸಭೆ ಮುಂದೂಡಿಕೆ

ನೆರಿಯ: ನೆರಿಯ ಗ್ರಾಮ ತಾಲೂಕಿನಲ್ಲಿ ದೊಡ್ಡ ವ್ಯಾಪ್ತಿಯಿರುವ ಪಂಚಾಯತ್. ಗ್ರಾಮಸಭೆಗೆ ಅಧಿಕಾರಿಗಳು ಬಾರದೆ ಗ್ರಾಮಸಭೆ ಪ್ರಾರಂಭ ಮಾಡುವುದು ಬೇಡ.ಇಲಾಖೆಗಳು ತುಂಬಾ ದುರ್ಬಲವಾಗಿದೆಯ?ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಬರಬೇಕು. ಗಂಟೆ 12 ಕಳೆದರೂ ಬರುವುದಿಲ್ಲ ಯಾಕೇ?ಅವರು ನಾವು ಕಟ್ಟುವ ತೆರಿಗೆ ಹಣದಿಂದ ಸಂಬಳ ಪಡೆಯುವುದು. ಗ್ರಾಮಸಭೆಗೆ ಜನರು ಬರಲಿಲ್ಲ,ಅಧಿಕಾರಿಗಳು ಇಲ್ಲ.ಯಾರಿಗೆ ಗ್ರಾಮಸಭೆ ಎಂದು ಗ್ರಾಮಸ್ಥರು ಪ್ರಶ್ನಿಸಿದರು.

ಮಾರ್ಗದರ್ಶಿ ಅಧಿಕಾರಿಯಾಗಿ ಭಾಗವಹಿಸಿದ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಮುರಳೀಧರ್ ಹಾಗೂ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಸಂತಿ, ಪಿಡಿಓ ಸುಮ ಎ ಎಸ್ ಅವರು ಗ್ರಾಮಸಭೆ ನಡೆಸಲು ಗ್ರಾಮಸ್ಥರ ಮನವೊಲಿಸಲು ಪ್ರಯತ್ನಿಸಿದರು.

ಗ್ರಾಮಸಭೆಗೆ ಅಧಿಕಾರಿಗಳು ಒಬ್ಬೊಬ್ಬರಂತೆ ಲೇಟಾಗಿ ಆಗಮಿಸಿದರು.12 ಗಂಟೆಯ ನಂತರ ಗ್ರಾಮಸಭೆ ಮಾಡುವುದು ಬೇಡಾ ಎಂದು ಹೇಳಿ ಕೆಲವರು ಹೊರ ನಡೆದರು. ಪಂಚಾಯತ್ ಸದಸ್ಯರು ಮತ್ತು ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆಯಿತು.ಕೆಲವು ಗ್ರಾಮಸ್ಥರು ಗ್ರಾಮಸಭೆ ಬೇಕು ಎಂದಾದರೆ, ಇನ್ನೂ ಕೆಲವರು ಗ್ರಾಮಸ್ಥರು ಬರಲಿಲ್ಲ ಬೇಡಾ ಎಂದು ಗೊಂದಲದ ವಾತಾವರಣ ನಿರ್ಮಾಣವಾಯಿತು.

ಕೊನೆಗೆ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಮಾರ್ಗದರ್ಶಿ ಅಧಿಕಾರಿ ಗ್ರಾಮಸಭೆಯನ್ನು ಮುಂದೂಡಿ,ಮುಂದಿನ ದಿನಾಂಕ ತಿಳಿಸಲಾಗುವುದು ಎಂದರು.

Related posts

ಉಜಿರೆ ಗ್ರಾಮ ಪಂಚಾಯತ್ ನ ಎಲ್ಲಾ ವಾರ್ಡ್ ಗಳಲ್ಲಿ ಸ್ವಚ್ಛ ಶನಿವಾರದ ಅಂಗವಾಗಿ ಸ್ವಚ್ಛತಾ ಶ್ರಮದಾನ ಹಾಗೂ ಮಾಹಿತಿ ಕಾರ್ಯಾಗಾರ:

Suddi Udaya

ವಿದ್ಯುತ್ ತಂತಿಗೆ ತಾಗಿದ ಕಾಂಕ್ರೀಟ್ ಮಿಕ್ಸಿಂಗ್ ಲಾರಿ : ರಸ್ತೆಗೆ ಉರುಳಿದ ಎರಡು ವಿದ್ಯುತ್ ಕಂಬ

Suddi Udaya

ಬದನಾಜೆ ಹೈಸ್ಕೂಲ್ ನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಮುಂಡ್ರುಪಾಡಿ ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಸದಾಶಿವ ಇರ್ನಾಡಿ ಯವರಿಂದ ನೋಟ್ ಪುಸ್ತಕ ಹಾಗೂ ಪೆನ್ನು -ಪೆನ್ಸಿಲ್ ವಿತರಣೆ

Suddi Udaya

ಬೆಳ್ತಂಗಡಿ : ಅಕ್ರಮವಾಗಿ ಕಬ್ಬಿಣದ ಗುಜರಿ ವಸ್ತು ಸಾಗಾಟ: ಚಾಲಕ ಪರಾರಿ; ವಾಣಿಜ್ಯ ತೆರಿಗೆ ಇಲಾಖೆಯಿಂದ ಲಾರಿ ವಶಕ್ಕೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!