24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ವಿಕಾಸ ವಿ.ಸ. ಸಂಘದ ಮಹಾಸಭೆ: ಶೇ.15 ಡಿವಿಡೆಂಡ್ ಘೋಷಣೆ , ರೂ. 262.73 ಕೋಟಿ ವ್ಯವಹಾರ

ಬೆಳ್ತಂಗಡಿ: ಭರವಸೆ ಮತ್ತು ನಂಬಿಕೆಯೊಂದಿಗೆ ವಿಕಾಸ ವಿ.ಸ. ಸಂಘವು ಪ್ರಾರಂಭವಾಗಿ 17 ವರ್ಷ ಪೂರೈಸಿ 18ನೇ ವರ್ಷದಲ್ಲಿ ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿದೆ. ಪ್ರಸಕ್ತ ಸಾಲಿನಲ್ಲಿ ೨೬೨.೭೩ ಕೋಟಿ ರೂ. ವ್ಯವಹಾರ ನಡೆಸಿ ೩೨.೨೧ ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಎಲೋಸಿಯಸ್ ಡಿಸೋಜ ಹೇಳಿದರು.

ಗುರುವಾಯನಕೆರೆ ವಿಕಾಸ ಸದನ ಸಭಾಭವನದಲ್ಲಿ ಸೆ.20 ರಂದು ಗುರುವಾಯನಕೆರೆ ವಿಕಾಸ ವಿವಿಧೋದ್ದೇಶ ಸಹಕಾರಿ ಸಂಘದ ೨೦೨೪-೨೫ನೇ ಸಾಲಿನ ವಾರ್ಷಿಕ ಮಹಾಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸಂಘವು ೪೯.೬೮ ಕೋ.ರೂ. ಠೇವಣಿ ಹೊಂದಿದ್ದು, ೪೬.೨೩ ಕೋ.ರೂ. ಸಾಲ ವಿತರಿಸಲಾಗಿದೆ. ಕಳೆದ ಸಾಲಿನಿಂದ ಸಾಲ ವಸೂಲಿ ಸಹಿತ ಲಾಭದಲ್ಲಿ ಹೆಚ್ಚಳವಾಗಿದೆ. ಸಂಘವು ಬೆಳ್ತಂಗಡಿ ಪೇಟೆಯಲ್ಲಿ ಕಟ್ಟಡ ಖರೀದಿಗೆ ೧೦ ಕೋ.ರೂ. ವ್ಯಯಿಸಿದ್ದು, ಅದು ಪ್ರಸಕ್ತ ೨೨ ಕೋ.ರೂ. ಮಿಗಿಲಾಗಿ ಪೇಟೆಧಾರಣೆಯಿದೆ. ಸಂಘವು ವಿದೇಶದಲ್ಲಿ ಉದ್ಯೋಗ ನಡೆಸುವ ಮಂದಿಗೆ ಸಾಲದ ರೂಪದಲ್ಲಿ ನೆರವಾಗಿದೆ ಎಂದು ತಿಳಿಸಿದರು.

ಸಂಘದ ನಿರ್ದೇಶಕರಾದ ಗೋಪಿನಾಥ್ ನಾಯಕ್, ಅಂತೋನಿ ಪಾಸ್, ರಾಘವ ಶೆಟ್ಟಿ ಕೆ., ಗ್ರೆಗೋರಿ ಡಿಮೆಲ್ಲೊ, ಪ್ರವೀಣ್ ಕುಮಾರ್ ಎಚ್.ಎಸ್., ಜಗದೀಶ್, ಶೇಖರ್ ನಾಯ್ಕ್, ದಿನೇಶ್ ನಾಯಕ್ ಬಿ., ಪ್ರವೀಣ್ ಚಂದ್ರ ಮೆಹಂದಳೆ, ಮಮತಾ ಎಂ.ಶೆಟ್ಟಿ ಉಪಸ್ಥಿತರಿದ್ದರು. ಸಂಘದ ಉಪಾಧ್ಯಕ್ಷ ಯೋಗೀಶ್ ಪೈ ಸ್ವಾಗತಿಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿತಾ ಫೆರ್ನಾಂಡಿಸ್ ವಂದಿಸಿದರು. ನಿರ್ದೇಶಕರಾದ ಒಲ್ವಿನ್ ಮೋನಿಸ್ ಕಾರ್ಯಕ್ರಮ ನಿರೂಪಿಸಿದರು.

Related posts

ಎನ್ನೆಸ್ಸೆ ಸ್: ಉಜಿರೆ ಶ್ರೀ ಧ. ಮಂ.ಪ.ಪೂ. ಕಾಲೇಜಿನ ಸುದರ್ಶನ್ ನಾಯಕ್ ಗೆ ಉತ್ತಮ ಪರ್ಫಾರ್ಮರ್ ಪ್ರಶಸ್ತಿ

Suddi Udaya

ಕೊರಂಜ ಸ.ಉ.ಪ್ರಾ. ಶಾಲಾ ಕೊಠಡಿ ನಿರ್ಮಾಣಕ್ಕೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಸಹಾಯಧನ ವಿತರಣೆ

Suddi Udaya

ಉಜಿರೆ: ಶ್ರೀ ಧ.ಮಂ.ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಆಂಡ್ ಕಮ್ಯೂನಿಕೇಶನ್ಸ್ ವಿಭಾಗದ ಉಪನ್ಯಾಸಕ ಪ್ರತಾಪಚಂದ್ರ ರವರಿಗೆ ಪಿ.ಎಚ್.ಡಿ ಪದವಿ

Suddi Udaya

ಅತ್ಯಮೂಲ್ಯ ಮತ ಚಲಾಯಿಸಿದ 106 ವರ್ಷದ ಅಜ್ಜಿ:

Suddi Udaya

ಜೋಡುಸ್ಥಾನ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಯುಗಂಧರ್, ಕಾರ್ಯದರ್ಶಿ ಚೇತನ್

Suddi Udaya

ನಿಡ್ಲೆ: ಬೂಡುಜಾಲು ಕಪಿಲ ನದಿಯ ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya
error: Content is protected !!