September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ವಿಕಾಸ ವಿ.ಸ. ಸಂಘದ ಮಹಾಸಭೆ: ಶೇ.15 ಡಿವಿಡೆಂಡ್ ಘೋಷಣೆ , ರೂ. 262.73 ಕೋಟಿ ವ್ಯವಹಾರ

ಬೆಳ್ತಂಗಡಿ: ಭರವಸೆ ಮತ್ತು ನಂಬಿಕೆಯೊಂದಿಗೆ ವಿಕಾಸ ವಿ.ಸ. ಸಂಘವು ಪ್ರಾರಂಭವಾಗಿ 17 ವರ್ಷ ಪೂರೈಸಿ 18ನೇ ವರ್ಷದಲ್ಲಿ ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿದೆ. ಪ್ರಸಕ್ತ ಸಾಲಿನಲ್ಲಿ ೨೬೨.೭೩ ಕೋಟಿ ರೂ. ವ್ಯವಹಾರ ನಡೆಸಿ ೩೨.೨೧ ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಎಲೋಸಿಯಸ್ ಡಿಸೋಜ ಹೇಳಿದರು.

ಗುರುವಾಯನಕೆರೆ ವಿಕಾಸ ಸದನ ಸಭಾಭವನದಲ್ಲಿ ಸೆ.20 ರಂದು ಗುರುವಾಯನಕೆರೆ ವಿಕಾಸ ವಿವಿಧೋದ್ದೇಶ ಸಹಕಾರಿ ಸಂಘದ ೨೦೨೪-೨೫ನೇ ಸಾಲಿನ ವಾರ್ಷಿಕ ಮಹಾಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸಂಘವು ೪೯.೬೮ ಕೋ.ರೂ. ಠೇವಣಿ ಹೊಂದಿದ್ದು, ೪೬.೨೩ ಕೋ.ರೂ. ಸಾಲ ವಿತರಿಸಲಾಗಿದೆ. ಕಳೆದ ಸಾಲಿನಿಂದ ಸಾಲ ವಸೂಲಿ ಸಹಿತ ಲಾಭದಲ್ಲಿ ಹೆಚ್ಚಳವಾಗಿದೆ. ಸಂಘವು ಬೆಳ್ತಂಗಡಿ ಪೇಟೆಯಲ್ಲಿ ಕಟ್ಟಡ ಖರೀದಿಗೆ ೧೦ ಕೋ.ರೂ. ವ್ಯಯಿಸಿದ್ದು, ಅದು ಪ್ರಸಕ್ತ ೨೨ ಕೋ.ರೂ. ಮಿಗಿಲಾಗಿ ಪೇಟೆಧಾರಣೆಯಿದೆ. ಸಂಘವು ವಿದೇಶದಲ್ಲಿ ಉದ್ಯೋಗ ನಡೆಸುವ ಮಂದಿಗೆ ಸಾಲದ ರೂಪದಲ್ಲಿ ನೆರವಾಗಿದೆ ಎಂದು ತಿಳಿಸಿದರು.

ಸಂಘದ ನಿರ್ದೇಶಕರಾದ ಗೋಪಿನಾಥ್ ನಾಯಕ್, ಅಂತೋನಿ ಪಾಸ್, ರಾಘವ ಶೆಟ್ಟಿ ಕೆ., ಗ್ರೆಗೋರಿ ಡಿಮೆಲ್ಲೊ, ಪ್ರವೀಣ್ ಕುಮಾರ್ ಎಚ್.ಎಸ್., ಜಗದೀಶ್, ಶೇಖರ್ ನಾಯ್ಕ್, ದಿನೇಶ್ ನಾಯಕ್ ಬಿ., ಪ್ರವೀಣ್ ಚಂದ್ರ ಮೆಹಂದಳೆ, ಮಮತಾ ಎಂ.ಶೆಟ್ಟಿ ಉಪಸ್ಥಿತರಿದ್ದರು. ಸಂಘದ ಉಪಾಧ್ಯಕ್ಷ ಯೋಗೀಶ್ ಪೈ ಸ್ವಾಗತಿಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿತಾ ಫೆರ್ನಾಂಡಿಸ್ ವಂದಿಸಿದರು. ನಿರ್ದೇಶಕರಾದ ಒಲ್ವಿನ್ ಮೋನಿಸ್ ಕಾರ್ಯಕ್ರಮ ನಿರೂಪಿಸಿದರು.

Related posts

ಮದ್ದಡ್ಕ: ಕಿನ್ನಿಗೋಳಿ ಎಂಬಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ

Suddi Udaya

ಲಾಯಿಲ ರಾಘವೇಂದ್ರ ಮಠದಲ್ಲಿ ದೃಢಕಲಶ ಉತ್ಸವ

Suddi Udaya

ಬಹುಮುಖ ಕ್ಷೇತ್ರದ ಸಾಧಕ ಬಿ. ಸೋಮಶೇಖರ ಶೆಟ್ಟಿ ಉಜಿರೆ

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ : ಹೊರ ಕಾಣಿಕೆಯ ಆಕಷ೯ಕ ಹಾಗೂ ಭವ್ಯ ವಾದ ಶೋಭಾಯಾತ್ರೆ – ಯಕ್ಷಗಾನ ವೇಷ, ಹತ್ತು ಭಜನಾ ತಂಡಗಳಿಂದ ಕುಣಿತ ಭಜನೆ, ಕೊಂಬು,ಚೆಂಡೆ, ವಾದ್ಯ ವಿಶೇಷ ಆಕಷ೯ಣೆ

Suddi Udaya

ಉಜಿರೆ ಹಾಗೂ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಪ್ರಾಥಮಿಕ ಶಾಲೆ , ಪ್ರೌಢ ಶಾಲೆಗಳಲ್ಲಿ ಸಂಸ್ಕೃತ ಭಾಷಾ ಅಭಿಯಾನ

Suddi Udaya

ರಾಜ್ಯದಲ್ಲಿ ವಚನಭ್ರಷ್ಟ ಕಾಂಗ್ರೆಸ್ ಸರಕಾರ: ಪ್ರತಾಪಸಿಂಹ ನಾಯಕ್

Suddi Udaya
error: Content is protected !!