25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

ಪಡಂಗಡಿ: ಪಡಂಗಡಿ ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷ ವಸಂತ ಪೂಜಾರಿ ಅಧ್ಯಕ್ಷತೆಯಲ್ಲಿ ಸೆ.20ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಬೆಳ್ತಂಗಡಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಾಜೇಂದ್ರ ಕೃಷ್ಣ ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು. ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಇತ್ತೀಚಿಗೆ ನಿವೃತ್ತಿಗೊಂಡ ಅಂಗನವಾಡಿ ಕಾರ್ಯಕರ್ತೆ ಪ್ರೇಮಾ ಡಿ. ಹಾಗೂ ನಿವೃತ್ತಿಗೊಳ್ಳಲಿರುವ ಆಶಾ ಕಾರ್ಯಕರ್ತೆ ಚಿನ್ನಮ್ಮ ರವರನ್ನು ಗೌರವಿಸಲಾಯಿತು. 2024-25ನೇ ಶೈಕ್ಷಣಿಕ ಸಾಲಿನ ಪರೀಕ್ಷೆಯಲ್ಲಿ ಪಡಂಗಡಿ ಪ್ರೌಢ ಶಾಲೆಗೆ ಪ್ರಥಮ, ದ್ವಿತೀಯ ಸ್ಥಾನ ಬಂದ ಲಿಖಿತಾ ಹಾಗೂ ಸುಶಾಂತ್ ರವರನ್ನು ಸನ್ಮಾನಿಸಿ ಪ್ರೌಢ ಶಾಲಾ ಶಿಕ್ಷಕರನ್ನು ಗೌರವಿಸಲಾಯಿತು. ಶೇ.25 ರ ನಿಧಿಯ ಧನ ಸಹಾಯವನ್ನು ಫಲಾನುಭವಿಗಳಿಗೆ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾ.ಪಂ. ಉಪಾಧ್ಯಕ್ಷೆ ವಸಂತಿ, ಸದಸ್ಯರಾದ ಸಂತೋಷ್ ಕುಮಾರ್ ಜೈನ್, ರಿಚಾರ್ಡ್ ಗೋವಿಯಸ್, ಅಶೋಕ್ ಸಪಲ್ಯ, ಮೀನಾಕ್ಷಿ ಯೋಗೀಶ್ ಕುಮಾರ್ ಡಿ ಪಿ, ಕೃಷ್ಣಪ್ಪ, ಹರೀಶ್ ಕುಮಾರ್, ಆವಸಂತಿ ವಿನೋದ, ಶಕುಂತಲಾ, ಗಾಯತ್ರಿ, ವನಜಾಕ್ಷಿ, ಕವಿತಾ, ಸುಮತಿ ಪಿ., ಶುಭ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂ. ಅಭಿವೃದ್ಧಿ ಅಧಿಕಾರಿ ಸಫನ ಸ್ವಾಗತಿಸಿದರು. ಕಾರ್ಯದರ್ಶಿ ಗಣೇಶ ವರದಿ ಮಂಡಿಸಿ, ವಂದಿಸಿದರು. ಪಂ. ಸಿಬ್ಬಂದಿಗಳು ಪಡಂಗಡಿ, ಗರ್ಡಡಿ ವಾರ್ಡ್ ಸಭೆಯ ನಡವಳಿಯನ್ನು ಮಂಡಿಸಿದರು.

Related posts

ಎಸ್. ಎಮ್ .ಎ. ಉಜಿರೆ ರೀಜಿನಲ್ ವತಿಯಿಂದ ರಂಝನ್ ಕಿಟ್ ವಿತರಣೆ

Suddi Udaya

ಇಂದಬೆಟ್ಟು: ಅತಿಕ್ರಮಣ ತೆರವುಗೊಳಿಸಲು ತಹಶೀಲ್ದಾರ್ ಮಾಡಿದ ಪ್ರಕ್ರಿಯೆಯನ್ನು ರದ್ದುಗೊಳಿಸಿದ ಹೈಕೋರ್ಟು

Suddi Udaya

ಎಕ್ಸೆಲ್ ಉಪನ್ಯಾಸಕರಿಂದ ಸಾಂಸ್ಕೃತಿಕ ವೈಭವ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲದಿಂದ 20ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಅನೈತಿಕ ಚಟುವಟಿಕೆ ನಡೆಯುತ್ತಿರುವ ದೂರುಗಳ ಹಿನ್ನಲೆ: ಉಜಿರೆಯ ಲಾಡ್ಜ್‌ ಗಳ ಮೇಲೆ ಡಿವೈಎಸ್ಪಿ ನೇತೃತ್ವದಲ್ಲಿ ಪೊಲೀಸ್ ದಾಳಿ

Suddi Udaya

ಕಾಯರ್ತಡ್ಕದ ಅಂಗರಂಡ ನಿವಾಸಿ ಮುತ್ತಮ್ಮ ನಿಧನ

Suddi Udaya
error: Content is protected !!