ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಜನಾ ಕಮ್ಮಟ; ಭಜನೆಗಳು ಜೀವನ ಶಿಕ್ಷಣ ಕಲಿಸುತ್ತವೆ: ಬಿ.ಕೆ. ಧನಂಜಯ ರಾವ್

ಧರ್ಮಸ್ಥಳ: ಜೀವನ ಶಿಕ್ಷಣವನ್ನು ಕಲಿಸುವ ಭಜನೆಗಳು ಸಾರ್ಥಕ ಬದುಕಿಗೆ ದಾರಿದೀಪವಾಗಿವೆ. ನಮ್ಮ ಸನಾತನ ಧರ್ಮ ಮತ್ತು ಸಂಸ್ಕೃತಿಯ ರಕ್ಷಣೆಗಾಗಿ ಭಜನಾ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು ಎಂದು ಬೆಳ್ತಂಗಡಿಯ ವಕೀಲ ಬಿ.ಕೆ. ಧನಂಜಯ ರಾವ್ ಹೇಳಿದರು.


ಅವರು ಸೆ.20 ರಂದು ಧರ್ಮಸ್ಥಳದಲ್ಲಿ ಇಪ್ಪತ್ತೇಳನೇ ವರ್ಷದ ಭಜನಾ ಕಮ್ಮಟದಲ್ಲಿ “ಭಜನಾ ಸಂಸ್ಕೃತಿ ಬೆಳೆಸುವಲ್ಲಿ ಭಜನಾ ಮಂಡಳಿಗಳ ಪಾತ್ರ’’ ಎಂಬ ವಿಷಯದ ಬಗ್ಯೆ ಉಪನ್ಯಾಸ ನೀಡಿದರು.
ಪ್ರತಿಯೊಬ್ಬ ಭಜಕನೂ ಒಂದು ಆಲಯವಿದ್ದಂತೆ ಎಂದು ಹೇಳಿದ ಅವರು ಭಜನಾ ಕಮ್ಮಟದಲ್ಲಿ ಭಾಗವಹಿಸಿದ ಭಜಕರೆಲ್ಲರೂ ಭಜನಾ ಸಂಸ್ಕöÈತಿಯ ಮೂಲಕ ಆಧ್ಯಾತ್ಮಿಕ ವಿಚಾರಧಾರೆಗಳನ್ನು ಪಸರಿಸುವ ರಾಯಬಾರಿಗಳಾಗಬೇಕು. ಮಕ್ಕಳಿಗೂ ಭಜನೆ ಕಲಿಸುವ ಮೂಲಕ ಅವರನ್ನು ಸಮಾಜದ ಸಭ್ಯ, ಸುಸಂಸ್ಕöÈತ ನಾಗರಿಕರನ್ನಾಗಿ ರೂಪಿಸಬೇಕು ಎಂದು ಅವರು ಸಲಹೆ ನೀಡಿದರು.


ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ವಸಂತ್ ಸಾಲ್ಯಾನ್ ಗೌರವ ಉಪಸ್ಥಿತಿ ವಹಿಸಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ಅಮ್ಮ ಹಾಗೂ ಸುಪ್ರಿಯಾ ಹರ್ಷೇಂದ್ರ ಕುಮಾರ್ ಉಪಸ್ತಿತರಿದ್ದರು. ಶ್ರೀಧಾಮ,ಶ್ರೀ ಮಹಾಲಕ್ಷ್ಮೀ ಸೇವಾ ಪ್ರತಿಷ್ಠಾನದ ಪರಮ ಪೂಜ್ಯ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ದಿವ್ಯಸಾನಿದ್ಯ ವಹಿಸಿದ್ದರು. ಭಜನಾ ಕಮ್ಮಟದ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್, ಕಾರ್ಯದರ್ಶಿ ಎ.ವಿ. ಶೆಟ್ಟಿ, ಭಜನಾ ಪರಿಷತ್ ಅಧ್ಯಕ್ಷ ಚಂದ್ರಶೇಖರ ಸಾಲ್ಯಾನ್, ಉಪಾಧ್ಯಕ್ಷ ರಾಜೇಂದ್ರ ಕುಮಾರ್, ಬಸ್ರೂರು, ಪದ್ಮರಾಜ್ ಜೈನ್, ಕೋಶಾಧಿಕಾರಿ, ಭಜನಾ ಕಮ್ಮಟ ಸಮನ್ವಯಾಧಿಕಾರಿಗಳಾದ ಸಂತೋಷ್ ಪಿ., ಅಳಿಯೂರು ಹಾಗೂ ರವೀಂದ್ರ ಇವರು ಕರ್ತವ್ಯ ನಿರ್ವಹಿಸಿದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಾಥಮಿಕ ಶಾಲೆಯ  ಅಧ್ಯಾಪಕರಾದ ಶ್ರೀಮತಿ ಶ್ರೀಜಾ ಯೋಗೀಶ್  ಕಾರ್ಯಕ್ರಮ ನಿರ್ವಹಿಸಿದರು.

Related posts

ಪೆರಿಂಜೆ ಪಡ್ಯಾರಬೆಟ್ಟ ಕ್ಷೇತ್ರದಿಂದ ಪುಸ್ತಕ ವಿತರಣೆ

Suddi Udaya

” ವಿಂಶತಿ” ಸಂಭ್ರಮದ ಆಚರಣೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಬಹುಮಾನಗಳು

Suddi Udaya

ಎನ್.ಸಿ.ಸಿ ರೈಫಲ್ ಫೈಯರಿಂಗ್ ಸ್ಪರ್ಧೆ: ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸಾ ಹಾಗೂ ಯೋಗ ವಿಜ್ಞಾನ ಕಾಲೇಜು: ಬಿಎನ್‌ವೈಎಸ್ ವಿದ್ಯಾರ್ಥಿಗಳ ಮತ್ತು ಪಿಜಿ ವಿದ್ಯಾರ್ಥಿಗಳ ಶಿಷ್ಯೋಪನಯನ

Suddi Udaya

ಏ.18: ಯ೦ಗ್‌ ಬಾಯ್ಸ್ ಸವಣಾಲು ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ 2ನೇ ವರ್ಷದ “ರಾಜ್ಯಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟ”

Suddi Udaya

ಬಳಂಜ: ಪರಮೇಶ್ವರಿಯ ಮೂಲಸ್ಥಾನದೆಡೆಗೆ ಭಕ್ತರ ನಡಿಗೆ “ಕೇರಿಂಜ ಯಾತ್ರೆ”

Suddi Udaya
error: Content is protected !!