25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ : ಸ್ಕೌಟಿಂಗ್ ತರಬೇತಿ ಶಿಬಿರದ ಉದ್ಘಾಟನೆ

ಮುಂಡಾಜೆ : ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧೀನಕ್ಕೊಳಪಟ್ಟ ಮುಂಡಾಜೆ ಪದವಿ ಪೂರ್ವ ಕಾಲೇಜು ಮುಂಡಾಜೆ ಹಾಗೂ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ ಮುಂಡಾಜೆ ಇಲ್ಲಿನ ಕಬ್ಸ್- ಬುಲ್ ಬುಲ್, ಸೌಟ್ಸ್- ಗೈಡ್ಸ್, ರೋವರ್ಸ್‌ ಮತ್ತು ರೇಂಜರ್ಸ್ ವಿಭಾಗಗಳ ಎರಡು ದಿನದ ತರಬೇತಿ ಶಿಬಿರದ ಉದ್ಘಾಟನೆಯು ಜರುಗಿತು.

ಶಿಬಿರದ ಉದ್ಘಾಟನೆಯನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ, ಬೆಳ್ತಂಗಡಿ ಇದರ ಕಾರ್ಯದರ್ಶಿಗಳಾದ ಪ್ರಮೀಳಾರವರು ನೆರವೇರಿಸಿ, ಸ್ಕೌಟಿಂಗ್ ಗೈಡಿಂಗ್ ಸಮವಸ್ತ್ರ ಹಾಗೂ ಪರೀಕ್ಷೆಗಳ ಬಗ್ಗೆ ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ ಇದರ ಅಧ್ಯಕ್ಷ ವಿನಯಚಂದ್ರ ಇವರು ಶಿಬಿರಕ್ಕೆ ಶುಭ ಹಾರೈಸಿದರು.


ಪ. ಪೂ. ಕಾಲೇಜಿನ ಪ್ರಾಂಶುಪಾಲರಾದ ಗೀತಾ, ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ ಮುಂಡಾಜೆಯ ಮುಖ್ಯಶಿಕ್ಷಕಿ ಚಂದ್ರಮತಿ, ಹಿರಿಯ ಶಿಕ್ಷಕಿ ಶ್ರೀಜಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ರೇಂಜರ್ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮವನ್ನು ರೇಂಜರ್ ಶ್ರಾವ್ಯ ನಿರೂಪಿಸಿ, ರೇಂಜರ್ ಮೇಟ್ ಹೊಂಗಿರಣ ಸ್ವಾಗತಿಸಿ, ರೇಂಜರ್ ಜಲಜಾಕ್ಷಿ ಧನ್ಯವಾದಗೈದರು.

Related posts

ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಉಜಿರೆ ರಬ್ಬರ್ ಸೊಸೈಟಿ : ರೂ.17.98 ಲಕ್ಷ ನಿವ್ವಳ ಲಾಭ-ಸದಸ್ಯರಿಗೆ ಶೇ.7 ಡಿವಿಡೆಂಟ್ : ರೂ.5ಸಾವಿರ ಮಿತಿಗೊಳಪಟ್ಟ ಖರೀದಿಗೆ ಬೋನಸ್

Suddi Udaya

ಮುಂಡಾಜೆ: ಚಿತ್ಪಾವನ ಸಂಘಟನೆಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸುಶ್ಮಾ ಶಶಾಂಕ ಭಿಡೆ

Suddi Udaya

ಕಳೆಂಜ: ನಡುಜಾರ್ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬಾರ್ಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ರಾಜೇಶ್ ರೈ ಆಯ್ಕೆ

Suddi Udaya

ಚಾರ್ಮಾಡಿ : ಬಂಟ್ವಾಳ ಗ್ರಾಮದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya
error: Content is protected !!