ವೇಣೂರು:ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ವೇಣೂರು ಇದರ ವತಿಯಿಂದ ವೇಣೂರು ಗ್ರಾ.ಪಂ ವ್ಯಾಪಿಯ ಹೊಸ ಬಸ್ಸು ತಂಗುದಾಣಕ್ಕೆ ಸಾರ್ವಜನಿಕ ಕುಡಿಯುವ ನೀರಿನ ಫಿಲ್ಟರನ್ನು ಸಿಎ ಬ್ಯಾಂಕಿನ ಅಧ್ಯಕ್ಷ ಸುಂದರ ಹೆಗ್ಡೆ ಅವರು ವೇಣೂರು ಗ್ರಾ.ಪಂ ಅಧ್ಯಕ್ಷೆ ಮಲ್ಲಿಕಾ ಹೆಗ್ಡೆಯವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಸಿಎ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತ್ ಪೂಜಾರಿ, ವೇಣೂರು ಗ್ರಾ.ಪಂ ಪಿಡಿಓ ರಾಘವೇಂದ್ರ ಪಾಟೀಲ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.











